ತುಮಕೂರು:ಹಾವು ಕಚ್ಚಿದೆ ಎಂದು ಬಾಲಕನನ್ನು ಆಸ್ಪತ್ರೆಗೆ ಕರೆ ತಂದರೂ, ಇಲ್ಲ ಕಚ್ಚಿಲ್ಲ ಎಂದು ಡಾಕ್ಟರ್ ಚಿಕಿತ್ಸೆ ನೀಡದೆ ವಾಪಸ್ ಕಳಿಸಿದ್ದರಿಂದ ಆತ ಸಾವಿಗೀಡಾದ ಪ್ರಕರಣವೊಂದು ನಡೆದಿದೆ. ತುಮಕೂರು ಜಿಲ್ಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಪಾವಗಡ ತಾಲ್ಲೂಕಿನ ಕ್ಯಾತಗಾನಗೆರೆ ಗ್ರಾಮದ ನಾಗರಾಜ್ ಎಂಬವರ ಪುತ್ರ ಆಕಾಶ್ (6) ಸಾವಿಗೀಡಾದ ಬಾಲಕ. ಈತನಿಗೆ ನಿನ್ನೆ ರಾತ್ರಿ ಮನೆಯಲ್ಲಿ ಮಲಗಿದ್ದಾಗ ಹಾವು ಕಚ್ಚಿತ್ತು. ಕೂಡಲೇ ರಾತ್ರಿ 12 ಗಂಟೆ ಸುಮಾರಿಗೆ ಪಾಲಕರು ಪಾವಗಡ ತಾಲ್ಲೂಕು ಆಸ್ಪತ್ರೆಗೆ ಬಾಲಕನನ್ನು ಕರೆತಂದಿದ್ದರು.
ಬಾಲಕನಿಗೆ ಹಾವು ಕಚ್ಚಿದೆ ಎಂದು ಡಾ.ರಂಗನಾಥ್ ಅವರ ಬಳಿ ಹೇಳಿದಾಗ, ಅವರು ಹಾವು ಕಚ್ಚಿಲ್ಲ ಎಂದಿದ್ದಾರೆ. ಹಾವು ಕಚ್ಚಿದೆ ಎಂದು ಮನೆಯವರು ಮತ್ತೆ ಹೇಳಿದಾಗಲೂ ಇಲ್ಲ ಕಚ್ಚಿಲ್ಲ ಎಂದು ಒಂದು ಇಂಜೆಕ್ಷನ್ ಕೊಟ್ಟು ಸೂಕ್ತ ಚಿಕಿತ್ಸೆ ನೀಡದೆ ವಾಪಸ್ ಕಳಿಸಿದ್ದಾರೆ. ಮಾರ್ಗ ಮಧ್ಯೆ ಬಾಲಕನ ಬಾಯಿಯಿಂದ ನೊರೆ ಬರಲಾರಂಭಿಸಿದ್ದು, ಅಸ್ವಸ್ಥಗೊಂಡ ಆತನನ್ನು ಮತ್ತೆ ಅದೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಇದನ್ನೂ ಓದಿ:ಸಿಎಂ ಸಿದ್ದರಾಮಯ್ಯ, ಪುತ್ರ ಯತೀಂದ್ರ ವಿರುದ್ಧ ದೂರು ದಾಖಲು: ಆರೋಪವೇನು?
ಆಗ ಬಾಲಕನ ರಕ್ತ ಪರೀಕ್ಷೆ ಮಾಡಿಸಬೇಕು ಎಂದರು. ನಂತರ ಬರೋಬ್ಬರಿ 2 ಗಂಟೆಗಳ ಕಾಲ ಆಸ್ಪತ್ರೆಯಲ್ಲಿ ಕಾಯಿಸಿ, ಕೊನೇ ಗಳಿಗೆಯಲ್ಲಿ ಮಗುವಿನ ಸ್ಥಿತಿ ಗಂಭೀರವಾಗಿದೆ‌. ಕೂಡಲೇ ತುಮಕೂರು ಜಿಲ್ಲಾಸ್ಪತ್ರೆಗೆ ಕರೆದೊಯ್ಯುವಂತೆ ಡಾ.ರಂಗನಾಥ್ ಸೂಚಿಸಿದ್ದರು. ಆದರೆ ಪಾವಗಡದಿಂದ ತುಮಕೂರಿಗೆ ಹೋಗುವ ಮಾರ್ಗಮಧ್ಯೆ ಬಾಲಕ ಮೃತಪಟ್ಟಿದ್ದಾನೆ ಎಂದು ಬಾಲಕನ ಮನೆಯವರು ತಿಳಿಸಿದ್ದಾರೆ.
ಮಗು ಸಾವಿಗೆ ಆಸ್ಪತ್ರೆ ವೈದ್ಯರೇ ಕಾರಣ ಎಂದು ಮೃತ ಬಾಲಕನ ಪೋಷಕರು ಆರೋಪಿಸಿದ್ದು, ಇಂದು ಆಸ್ಪತ್ರೆ ಎದುರು ಶವ ಇರಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ತಾಲ್ಲೂಕು ಆರೋಗ್ಯಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗೆ ಕರೆ ಮಾಡಿದರೂ ಕರೆ ಸ್ವೀಕರಿಸಲಿಲ್ಲ. ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ, ಪ್ರತಿಭಟನೆ ನಡೆಸುತ್ತಿದ್ದವರನ್ನ ಮನವೊಲಿಸಲು ಯತ್ನಿಸಿದ್ದಾರೆ.
ಪಾವಗಡ ಠಾಣೆಯ ಪೊಲೀಸ್ ಇನ್​ಸ್ಪೆಕ್ಟರ್ ಕರೆ ಮಾಡಿದ್ದರೂ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುನಾಥ್ ಕರೆ ಸ್ವೀಕರಿಸಿರಲಿಲ್ಲ. ಡಿಎಚ್​ಒ ಆಸ್ಪತ್ರೆಗೆ ಭೇಟಿ ನೀಡದೇ ಇರುವುದೇ ವೈದ್ಯರ ನಿರ್ಲಕ್ಷ್ಯಕ್ಕೆ ಕಾರಣ ಎಂದು ಸ್ಥಳೀಯರ ಆರೋಪಿಸಿದ್ದಾರೆ.
ವಾರವಿಡೀ ಹುಡುಕಾಡಿದರೂ ನಾಪತ್ತೆಯಾದವ ಸಿಗಲಿಲ್ಲ; ಒಂದು ಕಲ್ಲಿಗೆ ಪೂಜೆ ಮಾಡುತ್ತಿದ್ದಂತೆ ಆತ ಮನೆಗೆ ಮರಳಿದ!

ಪ್ರವೇಶ ಇರದಿದ್ದರೂ ಬುಲೆಟ್​ನಲ್ಲಿ ಬಂದ ಯುವತಿಯ ರೋಷಾವೇಶ; ಪೊಲೀಸರಿಗೂ ಡೋಂಟ್ ಕೇರ್, ಕೊನೆಗೂ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 8 =
Remember me
