ಹಾಸನ:ವೀರಶೈವ ಲಿಂಗಾಯತ ಸಮಾಜದ ಮುಖಂಡ ಹಾಗೂ ಮಾಜಿ ಶಾಸಕ ಎ.ಎಸ್.ಬಸವರಾಜು (75) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ನಿಧನರಾಗಿದ್ದಾರೆ.
ಇದನ್ನೂ ಓದಿ:ಕರ್ತವ್ಯ ಲೋಪದಡಿ ಅಮಾನತುಗೊಂಡಿದ್ದ ಪೊಲೀಸ್ ಪೇದೆಗೆ ಮುಖ್ಯಮಂತ್ರಿ ಪದಕ: ರಾಜ್ಯ ಸರ್ಕಾರ ವಿರುದ್ಧ ಬಿ.ವೈ ವಿಜಯೇಂದ್ರ ಆಕ್ರೋಶ
ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಗುರುವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರಿಗೆ 75 ವರ್ಷ ವಯಸ್ಸಾಗಿತ್ತು.
2004-2007ರವರೆಗೆ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 1999 ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ, ಕಾಂಗ್ರೆಸ್‍ನ ಜಿ.ವಿ.ಸಿದ್ದಪ್ಪ ಅವರ ವಿರುದ್ಧ ಸೋಲು ಕಂಡಿದ್ದರು. ಎ.ಎಸ್.ಬಸವರಾಜು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಆಪ್ತರಾಗಿದ್ದರು. ಪತ್ನಿ, ಮೂವರು ಪುತ್ರರು ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ.
ಹೊನ್ನವಳ್ಳಿ ಏತ ನಿರಾವರಿ ಅನುಷ್ಠಾನ, ದೇವಿಕಟ್ಟೆ ಒಡ್ಡು, ಸರ್ಕಾರಿ ಪದವಿ, ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ ಮಂಜೂರು ಮಾಡಿಸಿ ಜನಪ್ರಿಯತೆ ಪಡೆದಿದ್ದರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ.ಅಡ್ವಾಣಿ ಸೇರಿದಂತೆ ಹಲವರು ಜತೆ ನಿಕಟ ಬಾಂಧವ್ಯ ಹೊಂದಿದ್ದರು.ಶುಕ್ರವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ.
ಮಹಿಳಾ ಪೈಲೆಟ್​ಗಳ ಹೆಚ್ಚಳಕ್ಕೆ ಇಂಡಿಗೊ ನಿರ್ಧಾರ!

ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:2 × three =
Remember me
