ಹುಬ್ಬಳ್ಳಿ:ರಾಜ್ಯ ವಿಧಾನಸಭೆ ಚುನಾವಣೆ ಕಾವು ಹೆಚ್ಚಾಗುತ್ತಿದ್ದು ಈ ಮಧ್ಯೆ ರಾಜಕೀಯ ಪಕ್ಷಗಳ ನಾಯಕರು ತಂತ್ರಗಾರಿಕೆ ಹೆಣೆಯುವುದರಲ್ಲಿ ನಿರತರಾಗಿದ್ದಾರೆ.
ಹೇಗಾದರೂ ಮಾಡಿ ತಮ್ಮ ವಿರೋಧಿಗಳನ್ನು ಕಟ್ಟಿ ಹಾಕಬೇಕು ಎಂಬ ಛಲದಲ್ಲಿ ಕಾರ್ಯತಂತ್ರ ರೂಪಿಸುತ್ತಿದ್ದಾರೆ.
ಇನ್ನು ಮಂಗಳವಾರ ಬೆಳಗ್ಗೆ ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದ ಬಿ.ಎಲ್​. ಸಂತೋಷ್​ ಟಿಕೆಟ್ ಸಿಕ್ಕಿಲ್ಲವೆಂದು ಬಂಡಾಯ ಎದ್ದು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಅವರನ್ನು ಈ ಬಾರಿ ಚುನಾವಣೆಯಲ್ಲಿ ಸೋಲಿಸುವ ಬಗ್ಗೆ ಚರ್ಚೆ ನಡೆಸಿದ್ದರೂ.
ಇನ್ನು ಈ ಮಹತ್ವದ ಬೆಳವಣಿಗೆ ಬೆನ್ನಲ್ಲೇ ಹುಬ್ಬಳ್ಳಿಗೆ ದೌಡಾಯಿಸಿರುವ ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ನಡೆ ಎಲ್ಲರಲ್ಲೂ ಕುತೂಹಲ ಮೂಡಿಸಿದ್ದು ಮಹತ್ವದ ರಾಜಕೀಯ ಚಟುವಟಿಕೆ ನಡೆಯುವ ನಿರೀಕ್ಷೆ ಇದೆ.
ಇದನ್ನೂ ಓದಿ:ಬಿಎಸ್​ವೈ ಭೇಟಿ ಮಾಡಿದ ಬಿ.ಎಲ್ ಸಂತೋಷ್; ಸಿದ್ದರಾಮಯ್ಯ ಸೋಲಿಸಲು ಕಾರ್ಯತಂತ್ರ!
ಇನ್ನು ಹುಬ್ಬಳ್ಳಿಗೆ ದಿಢೀರ್​ ಎಂದು ಆಗಮಿಸಿರುವ ಮಾಜಿ ಸಿಎಂ ಬಿ.ಎಸ್​. ವೈ ಖಾಸಗಿ ಹೋಟೆಲ್​ನಲ್ಲಿ ತಂಗಿದ್ದು ವೀರಶೈ-ಲಿಂಗಾಯತ ಮುಖಂಡರ ಜೊತೆ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಈ ಸಭೆ ತೀವ್ರ ಕುತೂಹಲ ಮೂಡಿಸಿದ್ದು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ಕ್ಷೇತ್ರದ ಅಭ್ಯರ್ಥಿ ಜಗದೀಶ್​ ಶೆಟ್ಟರ್​ ಅವರನ್ನು ಮಣಿಸಲು ಸಮುದಾಯದ ಪ್ರಮುಖರೊಂದಿಗೆ ಮೀಟಿಂಗ್​ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.
ಇನ್ನು ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಕಾಂಗ್ರೆಸ್​ ಸೇರ್ಪಡೆ ಬೆನ್ನಲ್ಲೇ ಬಿಜೆಪಿಗೆ ಆಗಿರುವ ಡ್ಯಾಮೇಜ್​ ಕಂಟ್ರೋಲ್​ ಮಾಡಲು ಸ್ವತಃ ಬಿ.ಎಸ್​. ಯಡಿಯೂರಪ್ಪನವರೇ ಅಖಾಡಕ್ಕಿಳಿದಿದ್ಧಾರೆ. ಹೀಗಾಗಿ ಹುಬ್ಬಳ್ಳಿಗೆ ದಿಢೀರ್​ ಭೇಟಿ ನೀಡಿರುವುದಾಗಿ ತಿಳಿದು ಬಂದಿದೆ.
ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ಕ್ಷೇತ್ರದ ಅಭ್ಯರ್ಥಿ ಮಹೇಶ್​ ಟೆಂಗಿನಕಾಯಿ ಹಾಗೂ ವೀರಶೈವ-ಲಿಂಗಾಯತ ಸಮುದಾಯದ ಮುಖಂಡರು ಉಪಸ್ಥಿತರಿದ್ದಾರೆಂದು ತಿಳಿದು ಬಂದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − 3 =
Remember me
