ನವದೆಹಲಿ:ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಆಧಿಕಾರ ಸ್ವೀಕರಿಸಿದ ಬಳಿಕ ಬಿ.ವೈ. ವಿಜಯೇಂದ್ರ ಶನಿವಾರ (ಡಿಸೆಂಬರ್ 02) ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಜನ್ಮದಿನದಂದು ಭೇಟಿ ಮಾಡಿ ಶುಭಾಶಯ ಕೋರಿ ಕೃತಜ್ಞತೆ ಸಲ್ಲಿಸಿದ್ದಾರೆ.
ಭಾರತೀಯ ಜನತಾ ಪಾರ್ಟಿಗೆ ಹೊಸ ಚೈತನ್ಯ ತುಂಬಲು ಯುವ ಪೀಳಿಗೆಯನ್ನು ಉತ್ತೇಜಿಸುತ್ತಿರುವ ಮಾನ್ಯ ನಡ್ಡಾ ಜೀ ಅವರು ನನ್ನ ಬಗ್ಗೆ ಇರಿಸಿರುವ ಅಚಲ ನಂಬಿಕೆಯ ನುಡಿಗಳು ಇಂದು ನನ್ನಲ್ಲಿ ಅದಮ್ಯ ಆತ್ಮ ವಿಶ್ವಾಸದ ಉತ್ಸಾಹ ಮೂಡಿಸುವುದರೊಂದಿಗೆ, ಬಹು ದೊಡ್ಡ ಹೊಣೆಗಾರಿಕೆಯನ್ನೂ ನೆನಪಿಸಿತು.
Always a positive & humbling experience meeting our esteemed National President Shri@JPNaddaji. Sought his Blessings after assuming the responsibility as State President of@BJP4KarnatakaExtended my warm Birthday Greetings & Wished him a great year ahead!We also had very…pic.twitter.com/ISfkhLhzwJ
ವರಿಷ್ಠರು ಇರಿಸಿರುವ ನಿರೀಕ್ಷೆಯ ಗುರಿ ತಲುಪುವುದೇ ನನ್ನ ಮಹಾ ಸಂಕಲ್ಪವಾಗಿದೆ ಎಂದು ರಾಷ್ಟ್ರೀಯ ಅಧ್ಯಕ್ಷರಾದ ನಡ್ಡಾ ಅವರನ್ನು ಭೇಟಿ ಮಾಡಿದ ಬಳಿಕ ಬಿ.ವೈ. ವಿಜಯೇಂದ್ರ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಕೇಂದ್ರ ಸಚಿವಾರದ ಪ್ರಲ್ಹಾದ್​ ಜೋಶಿ, ರಾಜ್ಯ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ (OBC) ರಾಜೇಶ್​ ಅವರು ಉಪಸ್ಥಿತರಿದ್ದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:18 − ten =
Remember me
