ಬೆಂಗಳೂರು:ರಾಜ್ಯದಲ್ಲಿ 2020ರ ಜೂನ್‌ನಿಂದ ಆಗಸ್ಟ್‌ವರೆಗೆ ಅವಧಿ ಮುಕ್ತಾಯಗೊಳ್ಳುವ ಸುಮಾರು 5,800 ಗ್ರಾಮ ಪಂಚಾಯಿತಿಗಳಿಗೆ 2-3 ತಿಂಗಳಲ್ಲಿ ಚುನಾವಣೆ ನಡೆಸಲು ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಅವಧಿ ಮುಕ್ತಾಯವಾಗುವ ಗ್ರಾಪಂಗಳಿಗೆ ಆಡಳಿತಾಧಿಕಾರಿ ಅಥವಾ ಆಡಳಿತ ಸಮಿತಿ ನೇಮಕ ಮಾಡುವ ಚರ್ಚೆ ಸರ್ಕಾರದ ಮಟ್ಟದಲ್ಲಿ ನಡೆದಿತ್ತು. ಈಗ ಅದಕ್ಕೆ ತೆರೆ ಬಿದ್ದಿದ್ದು, 2-3 ತಿಂಗಳಲ್ಲಿ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಅಲ್ಲಿಯವರೆಗೆ ಆಡಳಿತಾಧಿಕಾರಿ ನೇಮಕ ಮಾಡಲು ನಿರ್ಣಯಿಸಲಾಗಿದೆ.
ಇದನ್ನೂ ಓದಿರಾತ್ರೋರಾತ್ರಿ ಕುಸಿದ ದೇವಾಲಯ ಗೋಪುರ! ಇದು ಅಪಾಯದ ಮುನ್ಸೂಚನೆಯೇ..?
ರಾಜ್ಯ ಚುನಾವಣಾ ಅಯೋಗ ಕೂಡ ಕರೊನಾ ವೈರಸ್ ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅಸಾಧಾರಣ ಪರಿಸ್ಥಿತಿ ಎಂದು ಪರಿಗಣಿಸಿ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯನ್ನು ಮುಂದೂಡಿತ್ತು.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಮಾಧುಸ್ವಾಮಿ, ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಸಲು ಸಂಪುಟ ತೀರ್ಮಾನ ತೆಗೆದುಕೊಂಡಿದೆ. ಚುನಾವಣೆ ನಡೆಯುವವರೆಗೆ ಆಡಳಿತಾಧಿಕಾರಿಗಳ ನೇಮಕ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.
ಸಹಕಾರ ಸಂಘಗಳ ಚುನಾವಣೆಗೆ ರಾಜ್ಯ ಸಚಿವ ಸಂಪುಟ ಅಸ್ತು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 7 =
Remember me
