ಬೆಂಗಳೂರು:ನಟ ಶಿವರಾಜ್​ಕುಮಾರ್ ಅವರ ಸಿನಿಮಾಗಳು ಮತ್ತು ಜಾಹೀರಾತುಗಳು ಖಾಸಗಿ ಟಿವಿ ಚಾನೆಲ್​ಗಳಲ್ಲಿ ಪ್ರಸಾರವಾಗುವುದನ್ನು ನಿಷೇಧಿಸಲು ಸಾಧ್ಯವಿಲ್ಲ, ದೂರದರ್ಶನದಲ್ಲಿ ಮಾತ್ರ ಪ್ರಸಾರವನ್ನು ನಿರ್ಬಂಧಿಸಬಹುದು ಎಂದು ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.
ಲೋಕಸಭಾ ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ನೀತಿ ಸಂಹಿತಿ ಎಲ್ಲೆಡೆ ಜಾರಿಯಲ್ಲಿದೆ. ಶಿವಮೊಗ್ಗ ಕ್ಷೇತ್ರದಿಂದ ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರ ಪುತ್ರ ಹಾಗೂ ಹಾಲಿ ಸಂಸದ ಬಿ.ವೈ. ರಾಘವೇಂದ್ರ ಅವರ ವಿರುದ್ಧ ಮಾಜಿ ಸಿಎಂ ದಿವಂಗತ ಬಂಗಾರಪ್ಪ ಅವರ ಪುತ್ರಿ ಹಾಗೂ ನಟ ಶಿವರಾಜ್​ಕುಮಾರ್​ ಅವರ ಧರ್ಮಪತ್ನಿ ಗೀತಾ ಶಿವರಾಜ್​​ಕುಮಾರ್​ ಅವರು ಕಾಂಗ್ರೆಸ್​ನಿಂದ ಕಣಕ್ಕಿಳಿದಿದ್ದಾರೆ. ಶಿವರಾಜ್​ಕುಮಾರ್​ ಕೂಡ ತಮ್ಮ ಪತ್ನಿ ಪರವಾಗಿ ಶಿವಮೊಗ್ಗ ಜಿಲ್ಲೆಯಾದ್ಯಂತ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.
ಇದರ ನಡುವೆ ಚುನಾವಣೆ ಮುಗಿಯುವವರೆಗೂ ಶಿವರಾಜ್​ಕುಮಾರ್ ಅವರ ಸಿನಿಮಾಗಳು ಮತ್ತು ಜಾಹೀರಾತುಗಳನ್ನು ಪ್ರಸಾರ ಮಾಡದಂತೆ ತಡೆಯಬೇಕೆಂದು ಕೋರಿ​ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಾಧ್ಯಕ್ಷ ಆರ್​. ರಘು ಎಂಬುವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಆಯೋಗ ಉತ್ತರ ನೀಡಿದೆ.
ಚುನಾವಣಾ ಆಯೋಗ ಹೇಳಿದ್ದೇನು?ಚುನಾವಣೆಯಲ್ಲಿ ಸ್ಪರ್ಧಿಸುವ ನಟರನ್ನು ಒಳಗೊಂಡಂತಹ ಚಲನಚಿತ್ರಗಳು ಮತ್ತು ಜಾಹೀರಾತುಗಳ ಪ್ರಸಾರವನ್ನು ಖಾಸಗಿ ಟಿವಿ ಚಾನೆಲ್‌ಗಳು ಅಥವಾ ಚಿತ್ರಮಂದಿರಗಳಲ್ಲಿ ನಿರ್ಬಂಧಿಸಲಾಗುವುದಿಲ್ಲ ಎಂದು ಭಾರತೀಯ ಚುನಾವಣಾ ಆಯೋಗದ ನಿರ್ದೇಶನವನ್ನು ರಾಜ್ಯ ಚುನಾವಣಾ ಅಧಿಕಾರಿಗಳು ಉಲ್ಲೇಖಿಸಿದ್ದಾರೆ. ಆದಾಗ್ಯೂ, ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವಾಗ ದೂರದರ್ಶನದಲ್ಲಿ ಚಲನಚಿತ್ರಗಳ ಪ್ರಸಾರಕ್ಕೆ ಅನುಮತಿ ನೀಡಲಾಗುವುದಿಲ್ಲ ಎಂದು ಹೇಳಿದೆ.
ಅಂದಹಾಗೆ ಗೀತಾ ಶಿವರಾಜ್​ಕುಮಾರ್​ ಅವರಿಗೆ ಶಿವಮೊಗ್ಗ ಕ್ಷೇತ್ರದಲ್ಲಿ ಇದು ಎರಡನೇ ಪ್ರಯತ್ನವಾಗಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್​ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ವಿರುದ್ಧ ಸ್ಫರ್ಧಿಸಿ ಸೋಲುಂಡಿದ್ದರು. ಆದರೆ, ಈ ಬಾರಿ ಬಿಎಸ್​ವೈ ಪುತ್ರ ರಾಘವೇಂದ್ರಗೆ ಗೀತಾ ಅವರು ಕಠಿಣ ಸ್ಪರ್ಧೆ ಕೊಡುವ ಸಾಧ್ಯತೆ ಇದೆ. ಏಕೆಂದರೆ, ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರವಿದೆ ಮತ್ತು ತಮ್ಮ ಸಹೋದರ ಮಧು ಬಂಗಾರಪ್ಪ ಶಿಕ್ಷಣ ಸಚಿವರಾಗಿದ್ದು, ಶಿವಮೊಗ್ಗ ಜಿಲ್ಲೆಯ ಉಸ್ತುವರಿಯು ಆಗಿದ್ದಾರೆ. ಹೀಗಾಗಿ ಈ ಬಾರಿ ಗೀತಾ ಅವರ ಗೆದ್ದರೆ ಅಚ್ಚರಿಪಡಬೇಕಿಲ್ಲ.(ಏಜೆನ್ಸೀಸ್​)
ಖರೀದಿಯಾಗದೇ ಉಳಿದಿದ್ದ ಒಂದೇ ಒಂದು ಲಾಟರಿಯಿಂದ ಬಡವನ ಬಾಳಲ್ಲಿ ನಡೆಯಿತು ಪವಾಡ! ಇಷ್ಟೊಂದು ಹಣನಾ?

ಸೆ… ಅಲ್ಲೂ ಇದೇ ರೀತಿ ಎಂಜಾಯ್​ ಮಾಡಿದ್ರಾ? ಆ್ಯಂಕರ್​ ಪ್ರಶ್ನೆಗೆ ನಟ ಸಿದ್ದು ಶಾಕ್​! ಉತ್ತರ ಕೊಟ್ರು ಅನುಪಮಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − three =
Remember me
