ಬೆಂಗಳೂರು:ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಅಡಿಯಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ (ಐಟಿಐ) ಖಾಲಿ ಇರುವ ಕಿರಿಯ ತರಬೇತಿ ಅಧಿಕಾರಿಗಳು (ಜೆಟಿಒ) ಹುದ್ದೆಯ ಆಯ್ಕೆ ಪಟ್ಟಿಯನ್ನು ಹೈಕೋರ್ಟ್​ ಆದೇಶದಂತೆ ಪರಿಷ್ಕರಿಸಿ ತಾತ್ಕಾಲಿಕ ಪಟ್ಟಿ ಪ್ರಕಟಿಸಿರೂ, ಅಂತಿಮ ಪಟ್ಟಿ ಪ್ರಕಟಿಸಲು ಕೆಪಿಎಸ್​ಸಿ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ಕೆಪಿಎಸ್​ಸಿ ಮುಂಭಾಗ ನೂರಾರು ಅಭ್ಯರ್ಥಿಗಳು ಸೋಮಾವಾರ ಪ್ರತಿಭಟಿಸಿರು.
ನೊಂದ ಅಭ್ಯರ್ಥಿಗಳು ಕೆಪಿಎಸ್​ಸಿ ಮುಂಭಾಗ ಜಮಾಯಿಸಿ ಕಣ್ಣೀರು ಹಾಕಿದ್ದು, ಆಯೋಗದ ವಿಳಂಬ ಧೋರಣೆ ಖಂಡಿಸಿದ್ದಾರೆ. 2019ರಲ್ಲಿ ಪ್ರಕಟಿಸಿದ್ದ ಅಂತಿಮ ಆಯ್ಕೆ ಪಟ್ಟಿಯನ್ನು ಹೈಕೋರ್ಟ್​ ನಿರ್ದೇಶನದಂತೆ ಕೆಪಿಎಸ್​ಸಿ ಪರಿಷ್ಕರಿಸಿದೆ. ಆದರೆ, ಅಂತಿಮ ಪಟ್ಟಿ ಪ್ರಕಟಿಸಲು ಕೆಪಿಎಸ್​ಸಿ ವಿಳಂಬ ಮಾಡುತ್ತಿರುವುದರಿಂದ, ಹುದ್ದೆಗೆ ಆಯ್ಕೆಯಾದರೂ ಕೆಲಸ ಸಿಗದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಐಟಿಐಗಳಲ್ಲಿ 23 ವಿವಿಧ ವೃಂದಗಳಲ್ಲಿ ಖಾಲಿ ಇರುವ ಜೆಟಿಒಗಳ ನೇಮಕಾತಿಗೆ 2018 ಫೆ. 19 ರಂದು ಕೆಪಿಎಸ್​ಸಿ ಅಧಿಸೂಚನೆ ಹೊರಡಿಸಿತ್ತು. ಅರ್ಜಿ ಸಲ್ಲಿಸಿದ್ದ 50 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ 2018 ಡಿ. 27 ರಿಂದ 2019 ಜ. 3ರವರೆಗೆ ಪರೀಕ್ಷೆ ನಡೆದಿತ್ತು. 399 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲಾಗಿತ್ತು. ಆದರೆ, ಅತಿ ಹೆಚ್ಚು ಅಂಕ ಪಡೆದಿದ್ದರೂ ಸೇವಾನುಭವ ಪ್ರಮಾಣಪತ್ರದ ಕಾರಣಕ್ಕೆ ಆಯ್ಕೆಯಾದವರು ಹೈಕೋರ್ಟ್​ ಮೆಟ್ಟಿಲೇರಿದ್ದರು.
2023ರ ಜುಲೈ 24ರಂದು ಮಧ್ಯಂತರ ಆದೇಶ ನೀಡಿದ್ದ ಹೈಕೋರ್ಟ್​, ಪಟ್ಟಿ ಪರಿಷ್ಕರಿಸಲು ಸೂಚಿಸಿತ್ತು. ಅದರಂತೆ, ಇದೇ ಮೇ 7ರಂದು ಆಯ್ಕೆ ಪಟ್ಟಿಯನ್ನು ಪರಿಷ್ಕರಿಸಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ. ಹೈಕೋರ್ಟ್​ ಆದೇಶ ನೀಡಿ 11 ತಿಂಗಳು ಕಳೆದಿದ್ದರೂ, ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲು ಕೆಪಿಎಸ್​ಸಿಗೆ ಇನ್ನೂ ಸಾಧ್ಯವಾಗಿಲ್ಲ. ಈ ಹುದ್ದೆಗಳಿಗೆ ಮಾಜಿ ಸೈನಿಕ ಕೋಟಾದಲ್ಲಿ ಆಯ್ಕೆಯಾದ ಕೆಲವರ ವಯಸ್ಸು 57 ದಾಟಿದೆ. ವಯೋಮಿತಿ ಸಡಿಲಿಕೆಯ ಅವಕಾಶದಲ್ಲಿ ಆಯ್ಕೆ ಆದವರ ವಯಸ್ಸು 49 ದಾಟಿದೆ. ಕೆಲವರು ಮೃತಪಟ್ಟಿದ್ದಾರೆ. ಕೆಪಿಎಸ್​ಸಿಯ ವಿಳಂಬ ಧೋರಣೆಗೆ ಬೇಸತ್ತು, ದಯಾ ಮರಣಕ್ಕೆ ಅನುಮತಿ ನೀಡುವಂತೆ ಕೆಪಿಎಸ್​ಸಿ ಕಾರ್ಯದರ್ಶಿಗೆ ಮನವಿ ಸಲ್ಲಿಸಿದ್ದೇವೆ’ ಎಂದು ಪ್ರತಿಭಟನೆ ನಿರತರು ಅಳಲು ತೋಡಿಕೊಂಡರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + thirteen =
Remember me
