ಮದ್ದೂರು:ಸ್ಯಾಂಡಲ್​ವುಡ್​ನ ಡಿಂಪಲ್​ ಕ್ವೀನ್ ರಚಿತಾ ರಾಮ್ ವಿರುದ್ಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.
ಸಂವಿಧಾನಕ್ಕೆ ಮತ್ತು ಗಣರಾಜ್ಯೋತ್ಸವ ದಿನಕ್ಕೆ ಖ್ಯಾತ ಚಿತ್ರನಟಿ ರಚಿತರಾಮ್​ ಅಪಮಾನ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸಿ. ಶಿವಲಿಂಗಯ್ಯ ಒತ್ತಾಯಿಸಿದ್ದಾರೆ.
ಇತ್ತೀಚೆಗೆ ನಡೆದ ‘ಕ್ರಾಂತಿ’ ಸಿನಿಮಾದ ಬೃಹತ್ ಬಹಿರಂಗ ಕಾರ್ಯಕ್ರಮದಲ್ಲಿ ರಚಿತಾ ರಾಮ್ ಅವರು ಪ್ರತಿ ವರ್ಷ ಜನವರಿ 26ಕ್ಕೆ ಗಣರಾಜ್ಯೋತ್ಸವ ಆಚರಿಸುತ್ತಿದ್ದೀರಿ. ಈ ಬಾರಿ ಗಣರಾಜ್ಯೋತ್ಸವ ಮರೆತು ಕ್ರಾಂತಿಯೋತ್ಸವ ಮಾಡಿ ಎಂದಿದ್ದಾರೆ. ಇದು ಸಂವಿಧಾನ ವಿರೋಧಿ ಹೇಳಿಕೆಯಾಗಿದೆ. ಸಂವಿಧಾನ ಜಾರಿಯಾದ ದಿನಕ್ಕೆ ಮಾಡಿದ ಅಪಮಾನ ಎಂದು ಸುದ್ದಿಗೋಷ್ಠಿಯಲ್ಲಿ ಶಿವಲಿಂಗಯ್ಯ ಆರೋಪಿಸಿದರು.
ರಚಿತಾರಾಮ್​ ಅವರ ಹೇಳಿಕೆ ದೇಶ ದ್ರೋಹ ಹೇಳಿಕೆಯಾಗಿದ್ದು, ಇವರ ಮೇಲೆ ದೇಶ ದ್ರೋಹ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು. ರಚಿತಾ ರಾಮ್ ವಿರುದ್ಧ ಮದ್ದೂರು ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಗೌರವ ಮಾರ್ಗದರ್ಶಕ ಎಂ.ಸಿ. ಬಸವರಾಜು, ತಾಲೂಕು ಅಧ್ಯಕ್ಷ ಡಿ.ಸಿ. ಮಹೇಂದ್ರ, ಉಪಾಧ್ಯಕ್ಷ ಮರಳಿಗ ಶಿವರಾಜು ಸುದ್ದಿಗೋಷ್ಠಿಯಲ್ಲಿ ಇದ್ದರು.
ಬೆಂಗಳೂರಿನ ಆಸ್ಪತ್ರೆಯಲ್ಲಿ ವೈದ್ಯೆ ಸೋಗಲ್ಲಿ ರೋಗಿಗಳ ಚಿನ್ನಾಭರಣ ಕದ್ದ ನರ್ಸ್! ದಿಕ್ಕಿತಪ್ಪಿಸಲು ಪೊಲೀಸರ ಬಳಿ ಈಕೆ ಕಟ್ಟಿದ ಕಥೆ ಅಂತಿಂಥದ್ದಲ್ಲ

15 ದಿನಗಳಿಂದ ಮಾಗಡಿ ತಹಸೀಲ್ದಾರ್​ ನಾಪತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + four =
Remember me
