ದಾವಣಗೆರೆ: ಎತ್ತಿಗೆ ಜ್ವರ, ಎಮ್ಮೆಗೆ ಬರೆ ಎಂಬ ಗಾದೆಮಾತು ಇಲ್ಲಿ ಅಕ್ಷರಶಃ ನಿಜವಾಗಿದೆ. ಕೋವಿಡ್ ನಿಯಮವನ್ನು ಉಲ್ಲಂಘಿಸಿ ಪುತ್ರಿಯ ಮದುವೆ ಮಾಡಿಸಿದ ಶಾಸಕರ ಮೇಲೆ ಪ್ರಕರಣ ದಾಖಲಿಸುವ ಬದಲು, ಅವರ ಪುತ್ರನ ಮೇಲೆ ಕೇಸ್​ ಜರುಗಿಸಿ, ದಂಡ ವಿಧಿಸಿದ ವಿಷಯ ಬಹಿರಂಗಗೊಂಡಿದೆ. ಇಂಥದ್ದೊಂದು ಮದುವೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಸಾಕ್ಷಿಯಾಗಿದ್ದಾರೆ.
ಹರಿಹರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ರಾಮಪ್ಪ ಅವರ ಪುತ್ರಿಯ ಮದುವೆ ಜುಲೈ 2ರಂದು ಸ್ಥಳೀಯ ಕಲ್ಯಾಣಮಂಟಪವೊಂದರಲ್ಲಿ ನಡೆದಿದೆ. ಈ ಸಂದರ್ಭದಲ್ಲಿ ನೂರಾರು ಜನರು ಭಾಗಿಯಾಗಿದ್ದು, ಕೋವಿಡ್ ಮಾರ್ಗಸೂಚಿಗಳ ಪಾಲನೆಯಾಗಿಲ್ಲ. ಅಲ್ಲದೆ ಈ ವಿವಾಹಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಿದ ಸಂದರ್ಭದಲ್ಲಂತೂ ಭಾರಿ ನೂಕುನುಗ್ಗಲು ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಹರಿಹರ ಪೊಲೀಸ್ ಠಾಣೆ ಎಸ್​ಐ ಸುನೀಲ್ ಬಿ. ತೇಲಿ ಸ್ವಯಂಪ್ರೇರಿತ ದೂರು ದಾಖಲಿಸಿದ್ದರು.
ಇದನ್ನೂ ಓದಿ:ಈ ರೋಗ ಮಕ್ಕಳಲ್ಲಿ ಕಂಡುಬಂದಿರುವುದು ಇದೇ ಮೊದಲು!; ಇದರಲ್ಲಿ ಶೇ. 60ರಷ್ಟಿದೆ ಸಾವಿನ ಸಾಧ್ಯತೆ!
ವಿಚಿತ್ರವೆಂದರೆ ಈ ಪ್ರಕರಣದಲ್ಲಿ ಮದುವೆ ಮಾಡಿಸಿದ್ದ ಶಾಸಕರ ಬದಲು, ಅವರ ಪುತ್ರ ಯತಿರಾಜ್​​ ವಿರುದ್ಧ ದೂರು ದಾಖಲಿಸಲಾಗಿದೆ. ಆ ಮೂಲಕ ಶಾಸಕರನ್ನು ಈ ಪ್ರಕರಣದಿಂದ ಬಚಾವಾಗಿಸಲು ತಾಲೂಕು ಹಾಗೂ ಜಿಲ್ಲಾಡಳಿತ ಪ್ರಯತ್ನ ನಡೆಸಿದೆ ಎಂಬ ಆರೋಪ ಕೇಳಿಬಂದಿದೆ. ಶಾಸಕರ ಪುತ್ರ ಯತಿರಾಜ್​ಗೆ 10 ಸಾವಿರ ರೂ. ಹಾಗೂ ಕಲ್ಯಾಣಮಂಟಪದ ಮಾಲೀಕ ಅರುಣ್​ಕುಮಾರ್​ಗೆ 5 ಸಾವಿರ ರೂ. ದಂಡ ವಿಧಿಸಿ, ನೋಟಿಸ್ ನೀಡಲಾಗಿದೆ.
ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜಯವಾಗಲಿ: ಅಭಿಮಾನಿಗಳ ಘೋಷಣೆ

ಮಕ್ಕಳನ್ನೇ ಹೆಚ್ಚಾಗಿ ಕಾಡುವ ಮಾರಕ ಮೆಸ್​-ಸಿ; ಪಾಲಕರೇ ಈ ವೈದ್ಯರ ಮಾತನ್ನು ಆಲಿಸಿ, ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ..

ಐದೂವರೆ ವರ್ಷಗಳಿಂದ ಒಂದೂ ವಾರ ತಪ್ಪದೇ ನಡೆದಿದೆ ಸಸ್ಯಾಗ್ರಹ; ಇದರ ಹಿಂದಿದೆ ‘ಅದಮ್ಯ ಚೇತನ’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
