ಬೆಂಗಳೂರು: ನೆರೆ ರಾಜ್ಯವು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದಾಕ್ಷಣ ರಾಜ್ಯ ಸರ್ಕಾರ ನೀರು ಹರಿಸುವ ನಿರ್ಧಾರ ಕೈಗೊಳ್ಳುವ ಬದಲು ತಮಿಳುನಾಡು ಅರ್ಜಿಗೆ ಪ್ರತಿಯಾಗಿ ಕೂಡಲೇ ತಕರಾರು ಅರ್ಜಿ ಸಲ್ಲಿಸಬೇಕಿತ್ತು. ಈ ವಿಷಯದಲ್ಲಿ ಸರ್ಕಾರದಿಂದ ಲೋಪವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನೇರ ಮಾತುಗಳಲ್ಲಿ ಹೇಳಿದರು.
ಕಾವೇರಿ ವಿಷಯಕ್ಕೆ ಸಂಬಂಧಿಸಿ ವಿಧಾನಸಭೆ ಸಮ್ಮೇಳನ ಸಭಾಂಗಣದಲ್ಲಿ ಕರೆಯಲಾಗುತ್ತಿದ್ದ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿ ಅವರು ತಮ್ಮ ಅಭಿಪ್ರಾಯ ಮಂಡಿಸಿದರು. ನಮ್ಮ ನೆಲ ಜಲ ಭಾಷೆ ರಕ್ಷಣೆ ಹಾಗೂ ನಮ್ಮ ನೀರಿನ ಹಕ್ಕು, ರೈತರ ಪ್ರಶ್ನೆ ಬಂದಾಗ ಪ್ರತಿಪಕ್ಷಗಳು ಮಾತನಾಡದೆ ಮೌನವಾಗಿರಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದರು.
ರಾಜ್ಯದ ನೆಲ ಜಲ ಭಾಷೆ ವಿಚಾರದಲ್ಲಿ ಪ್ರತಿಪಕ್ಷಗಳು ಪ್ರಶ್ನೆ ಮಾಡಿದರೆ, ಅದನ್ನು ರಾಜಕೀಯ ಎಂದು ಭಾವಿಸುವುದು ತಪ್ಪು. ಹಾಗೇ ಭಾವಿಸುವ ಪ್ರಶ್ನೆಯೇ ಬೇಕಿಲ್ಲ. ನೀರನ್ನು ಹರಿಸುವ ಮೊದಲೇ ಸರ್ವಪಕ್ಷ ಸಭೆ ಕರೆದಿದ್ದರೆ ಅದಕ್ಕೊಂದು ಅರ್ಥ ಇರುತ್ತಿತ್ತು. ಈಗ ನೀವು ತಮಿಳುನಾಡಿಗೆ ನೀರು ಹರಿಸುತ್ತಿದ್ದೀರಿ. ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಅದಕ್ಕೆ ಈಗ ಏನು ಸಮಜಾಯಿಷಿ ನೀಡುತ್ತೀರಿ? ಎಂದು ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಅವರು ಬೇಸರ ವ್ಯಕ್ತಪಡಿಸಿದರು.
ನೀರು ಬೇಕಾದರೆ ರೈತರೇ ನ್ಯಾಯಾಲಯಕ್ಕೆ ಹೋಗಲಿ ಎಂದು ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಅವರು ಹೇಳಿಕೆ ನೀಡಿದ್ದಾರೆ. ಇಂಥ ಹೇಳಿಕೆ ಸರಿ ಅಲ್ಲ. ರೈತರೇ ನ್ಯಾಯಾಲಕ್ಕೆ ಹೋಗುವುದಾದರೆ ಸರ್ಕಾರ ಏತಕ್ಕೆ ಬೇಕು? ಇಷ್ಟೆಲ್ಲಾ ವ್ಯವಸ್ಥೆ ಅಗತ್ಯ ಏನಿದೆ? ಈ ಬಗ್ಗೆ ತಪ್ಪು ತಿಳಿಯುವ ಅಗತ್ಯ ಇಲ್ಲ ಎಂದು ಕುಮಾರಸ್ವಾಮಿ ಅವರು ನೇರವಾಗಿ ಚಾಟಿ ಬೀಸಿದರು.
ಪ್ರತಿಪಕ್ಷಗಳನ್ನು ರಾಜಕೀಯ ಮಾಡಬೇಡಿ ಎಂದು ಹೇಳುತ್ತೀರಿ, ಆದರೆ ಇಂಥ ಸೂಕ್ಷ್ಮ ವಿಷಯಗಳಲ್ಲಿ ನಿಮ್ಮ ಜವಾಬ್ದಾರಿ ಏನಿದೆ? ಎಂದು ಅವರು ಮತ್ತೆ ಮತ್ತೆ ಖಾರವಾಗಿ ಪ್ರಶ್ನಿಸಿದ ಅವರು; ನೆಲ ಜಲ ಭಾಷೆ ವಿಷಯದಲ್ಲಿ ರಾಜಕೀಯದ ಅಗತ್ಯ ಇಲ್ಲ. ನಾವೆಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕು. ಆದರೆ, ಸರ್ಕಾರ ಹೊಣೆಗಾರಿಕೆಯಿಂದ ವರ್ತಿಸಬೇಕು ಎಂದರು.
ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ನಮ್ಮ ಅಧಿಕಾರಿಗಳು ಉತ್ತಮ ರೀತಿಯಲ್ಲಿ ರಾಜ್ಯದ ಪರ ಅಭಿಪ್ರಾಯ ತಿಳಿಸಿದ್ದಾರೆ. ಜಲ ಸಂಕಷ್ಟದ ಬಗ್ಗೆ ವಿವರಿಸಿದ್ದಾರೆ. ಆದರೆ, ಅಲ್ಲಿ ತಮಿಳುನಾಡು ಅಧಿಕಾರಿಗಳು ಪಟ್ಟು ಹಿಡಿದು ಸಭೆಯಿಂದ ಹೊರ ನಡೆದಿದ್ದಾರೆ. ಆದರೆ, ಸರ್ವೋಚ್ಚ ನ್ಯಾಯಾಲಯಕ್ಕೆ ತಮಿಳುನಾಡು ಅರ್ಜಿ ಹಾಕಿದಾಗ ನಾವು ಅಷ್ಟೇ ವೇಗದಿಂದ ಆಕ್ಷೇಪಣಾ ಅರ್ಜಿ ಸಲ್ಲಿಸಬೇಕಿತ್ತು ಎಂದು ಮಾಜಿ ಮುಖ್ಯಮಂತ್ರಿ ಅವರು ಪ್ರತಿಪಾದಿಸಿದರು.
ಹಿಂದೆ ದೇವೇಗೌಡರು ಸೇರಿದಂತೆ ಇನ್ನೂ ಹಲವರು ಮುಖ್ಯಮಂತ್ರಿಗಳಾಗಿದ್ದಾಗ ಇಂಥ ಪರಿಸ್ಥಿತಿ ಎದುರಾದಾಗ ಅದನ್ನು ಹೇಗೆ ಎದುರಿಸಲಾಯಿತು ಎಂಬುದನ್ನು ಕಾನೂನು ತಜ್ಞರ ತಂಡದ ಮುಖ್ಯಸ್ಥ ಮೋಹನ್ ಕಾತರಕಿ ಅವರು ಈ ಸಭೆಯಲ್ಲಿಯೇ ಹೇಳಿದ್ದಾರೆ. ಅದೆಲ್ಲಾ ವಿಷಯಗಳನ್ನು ಈ ಸರ್ಕಾರ ತಿಳಿದುಕೊಳ್ಳಬೇಕು ಎಂದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three × five =
Remember me
