ಬೆಂಗಳೂರು:ದೇವನಹಳ್ಳಿ ತಾಲೂಕಿನಲ್ಲಿ ವಿವಿಧ ಯೋಜನೆ ಮತ್ತು ಕಟ್ಟಡ ಕಾಮಗಾರಿಗಳಿಗೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ಶನಿವಾರ ಚಾಲನೆ ನೀಡಿದರು.
ಆವತಿ ಗ್ರಾಮದ 35 ಎಕರೆ ಪ್ರದೇಶದಲ್ಲಿ ಬ್ಯೂರೋ ಆಫ್​​ ಪೊಲೀಸ್​ ರಿಸರ್ಚ್​ ಆ್ಯಂಡ್​ ಡೆವಲಪ್​ಮೆಂಟ್​ ಸಂಸ್ಥೆಯಡಿ ಕಾರ್ಯನಿರ್ವಹಿಸುವ ಕೇಂದ್ರೀಯ ಪತ್ತೆದಾರಿ ತರಬೇತಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶಾ ಅವರು ಶಂಕುಸ್ಥಾಪನೆ ನೆರವೇರಿಸಿದರು. ಬೆಂಗಳೂರಿನ ಸೆಂಟ್ರಲ್​ ಡಿಟೆಕ್ಟಿವ್​ ಟ್ರೇನಿಂಗ್​ ಇನ್ಸ್​ಟಿಟ್ಯೂಟ್​ (ಸಿಡಿಟಿಐ) ಸಂಸ್ಥೆಯನ್ನು ಅರ್ಬನ್​ ಪೊಲೀಸಿಂಗ್​ (ಸ್ಮಾಟ್​ ಸಿಟಿ ಪೊಲೀಸಿಂಗ್​) ಹಾಗೂ ಬ್ಲಾಕ್​ ಚೈನ್​ ತಂತ್ರಜ್ಞಾನದೊಂದಿಗೆ ಉತ್ಕೃಷ್ಟತಾ ಕೇಂದ್ರವನ್ನಾಗಿ ಅಭಿವೃದ್ಧಿ ಪಡಿಸಲಾಗುವುದು. ಈ ಕೇಂದ್ರದಲ್ಲಿ ಎಲ್ಲ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು, ಸಿಪಿಒಗಳು ಹಾಗೂ ಸಿಎಪಿಎಫ್​ಗಳ ಪೊಲೀಸ್​ ಅಧಿಕಾರಿಗಳಿಗೆ ತರಬೇತಿ ಕೋರ್ಸ್​ ಒದಗಿಸುವ ಉದ್ದೇಶ ಹೊಂದಲಾಗಿದೆ.

ಕೇಂದ್ರೀಯ ಪತ್ತೆದಾರಿ ತರಬೇತಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಆವತಿ ಗ್ರಾಮದಿಂದ ಅತ್ತಿಬೆಲೆ ಸಮೀಪದ ಅನಂತ ವಿದ್ಯಾನಿಕೇತನ ಶಾಲಾ ಆವರಣಕ್ಕೆ ತೆರಳಿದ ಅಮಿತ್​ ಶಾ, ಇಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವರ್ಚುವಲ್​ ಮೂಲಕ ಬೆಂಗಳೂರಿನಲ್ಲಿರುವ ಇಂಡೋ ಟಿಬೆಟಿಯನ್​ ಬಾರ್ಡರ್​ ಪೊಲೀಸ್​ ಪ್ರಾದೇಶಿಕ ಪ್ರಧಾನ ಕಚೇರಿಯ ಹಲವು ಯೋಜನೆಗಳನ್ನು ಉದ್ಘಾಟಿಸಿದರು. 120 ಸೈನಿಕರ ಬ್ಯಾರಕ್​ಗಳು, 42 ವಸತಿ ಕಟ್ಟಡಗಳು, ಜಂಟಿ ಆಡಳಿತಾತ್ಮಕ ಕಟ್ಟಡಗಳು ಹಾಗೂ ಅಧಿಕಾರಿಗಳ ಹಾಗೂ ಅಧೀನ ಅಧಿಕಾರಿಗಳ ಮೆಸ್​ ಅನ್ನು ಆನ್​ಲೈನ್​ ಮೂಲಕ ಉದ್ಘಾಟಿಸಿದರು.
HDKಗೆ ನಾಣ್ಯ​, ನೇಗಿಲು, ಸ್ಕೂಲ್​ ಬ್ಯಾಗ್​, ಕಬ್ಬು, ಬೆಲ್ಲದ ಹಾರ… ಏಷ್ಯಾ​ ಬುಕ್​ ಆಫ್​ ರೆಕಾರ್ಡ್ಸ್​- ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಪಂಚರತ್ನ ಯಾತ್ರೆ

ಎಸ್​ಐಗೆ ಧಮ್ಕಿ ಹಾಕುತ್ತಲೇ ನಾಲಗೆ ಹರಿಯಬಿಟ್ಟ ಮಾಜಿ ಶಾಸಕ ಸುರೇಶ್​ಗೌಡ! ಒಂದು ಸಲ ನಿಮ್ಮ ಸ್ಟೇಷನ್ ಬಳಿ ಮಲಗಿದ್ದೆ, ಇನ್ನೊಂದು ಬಾರಿ ಮಲಗಬೇಕಾಗುತ್ತೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
