ಬೆಂಗಳೂರು:ಸಮಾಜಘಾತುಕತನ ಹಾಗೂ ದೇಶದ್ರೋಹಿ ಮನಸ್ಥಿತಿಯ ಪೊಲೀಸ್ ಪೇದೆಯೊಬ್ಬರ ಹೆಸರು ಮುಖ್ಯಮಂತ್ರಿಗಳ ಪದಕ ಪಟ್ಟಿಯಲ್ಲಿ ಪ್ರಕಟವಾಗಿರುವುದು ಗೃಹ ಇಲಾಖೆ ಅಧಃಪತನಕ್ಕೀಡಾಗಿರುವುದಕ್ಕೆ ನಿದರ್ಶನವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟೀಕಿಸಿದ್ದಾರೆ.
ಇದನ್ನೂ ಓದಿ:ಹಾಸನ: ಸಾಲಭಾದೆ ತಾಳದೇ 13 ವರ್ಷದ ಮಗಳೊಂದಿಗೆ ಹೇಮಾವತಿ ನಾಲೆಗೆ ಹಾರಿ ದಂಪತಿ ಆತ್ಮಹತ್ಯೆ!
ಅಮಾನತುಗೊಂಡಿರುವ ಮೈಸೂರು ಸಿಸಿಬಿ ಘಟಕದ ಹೆಡ್ ಕಾನ್ಸಟೇಬಲ್ ಸಲೀಂ ಪಾಷಾಗೆ ಸಿಎಂ ಪದಕ ನೀಡಿದ್ದು, ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು ಕರ್ನಾಟಕ ಸರ್ಕಾರವನ್ನು ವಿಜಯೇಂದ್ರ ತರಾಟೆ ತೆಗೆದುಕೊಂಡಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಟ್ಟೀಟ್ ಮಾಡಿರುವ ಅವರು, ಕೆಲ ನಾಮಧೇಯಗಳನ್ನು ಕಂಡರೆ ಈ ಕಾಂಗ್ರೆಸ್ ಸರ್ಕಾರ ಕಣ್ಣು ಮುಚ್ಚಿಕೊಳ್ಳುತ್ತದೆ. ಅಪರಾಧಿಯಾಗಿದ್ದರೂ ಸರಿ, ಕಳ್ಳರಾಗಿದ್ದರೂ ಸರಿ, ಕೊನೆಗೆ ಭಯೋತ್ಪಾದಕರಾದರೂ ಸರಿ, ಅವರ ಬಗೆಗಿನ ಕಾಳಜಿಯಲ್ಲಿ ರಾಜೀ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎನ್ನುವುದನ್ನು ಸಾಬೀತುಪಡಿಸುವ ರೀತಿಯಲ್ಲಿ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಕೊಡಮಾಡುವ “ಮುಖ್ಯಮಂತ್ರಿಗಳ ಪದಕ” ಪಟ್ಟಿಯಲ್ಲಿ ಮೈಸೂರಿನ ಅಮಾನತ್ತಿಗೊಳಗಾದ ಪೊಲೀಸ್ ಪೇದೆಯೊಬ್ಬರ ಹೆಸರು ಪ್ರಕಟವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಲೀಂ ಪಾಷಾ ಎಂಬ ಪೇದೆ ಪದಕ ಪಟ್ಟಿಗೆ ಸೇರ್ಪಡೆಗೊಂಡ ಅದೃಷ್ಟವಂತನಾಗಿದ್ದು, ಅಪರಾಧಿಗಳೊಂದಿಗೆ ಕೈಜೋಡಿಸಿ ಕಳ್ಳತನಗಳಿಗೆ ನೆರವಾಗುತ್ತಿದ್ದ ಹಾಗೂ ಇಲಾಖೆಯ ದಾಖಲೆಗಳನ್ನು ಸೋರಿಕೆ ಮಾಡುವ ವಿದ್ರೋಹ ಕೃತ್ಯದ ಆರೋಪದ ಮೇಲೆ ಅಮಾನತಿಗೊಳಗಾಗಿದ್ದುದ್ದೇ ಈತನ ಅರ್ಹತೆಯಾಗಿರುವಂತಿದೆ.
ಸಮಾಜಘಾತುಕತನ ಹಾಗೂ ದೇಶದ್ರೋಹಿ ಮನಸ್ಥಿತಿಯ ಪೊಲೀಸ್ ಪೇದೆಯೊಬ್ಬರ ಹೆಸರು ಮುಖ್ಯಮಂತ್ರಿಗಳ ಪದಕ ಪಟ್ಟಿಯಲ್ಲಿ ಪ್ರಕಟವಾಗಿರುವುದು ಗೃಹ ಇಲಾಖೆ ಅಧಃಪತನಕ್ಕೀಡಾಗಿರುವುದಕ್ಕೆ ನಿದರ್ಶನವಾಗಿದೆ.
ಪೊಲೀಸ್ ಇಲಾಖೆಯು ಶಿಸ್ತು ಹಾಗೂ ಪಾರದರ್ಶಕತೆಯ ವ್ಯಾಪ್ತಿಯ ಪರಿಧಿಯ ಸಮತೋಲನವನ್ನು ಕಾಯ್ದುಕೊಳ್ಳದೇ ಇರುವುದನ್ನು ಬಿಜೆಪಿ ಎಚ್ಚರಿಸುತ್ತಲೇ ಇತ್ತು. ಅದು ನಿಜ ಎನ್ನುವುದನ್ನು ದುಷ್ಕೃತ್ಯಗಳ ಆರೋಪದ ಮೇಲೆ ಅಮಾನತಿಗೊಳಗಾಗಿದ್ದ ಪೊಲೀಸ್ ಪೇದೆ ಸಲೀಂ ಪಾಷಾಗೆ ಪದಕ ಪ್ರಕಟವಾಗಿರುವುದು ಸಾಕ್ಷೀಕರಿಸಿದೆ.
ಮುಖ್ಯಮಂತ್ರಿಗಳ ಪದಕ ಲಭಿಸಲು ಪೊಲೀಸ್ ಇಲಾಖೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ದಕ್ಷತೆ ಹಾಗೂ ತ್ಯಾಗ ಮನೋಭಾವ ಪ್ರದರ್ಶಿಸುವ ಸಮರ್ಥರನ್ನು ಆಯ್ಕೆ ಮಾಡುವ ಮಾನದಂಡವನ್ನು ಹೊಂದಿರುತ್ತದೆ. ಆದರೆ ಇದೀಗ ಪೊಲೀಸ್ ಇಲಾಖೆಯಲ್ಲಿ ವಿದ್ರೋಹ ಎಸಗುವವರಿಗೂ ಮುಖ್ಯಮಂತ್ರಿಗಳ ಪದಕ ಪಡೆಯಲು ಅರ್ಹತೆಯಾಗಿ ಪರಿಗಣಿಸಿರುವುದು ಕರ್ನಾಟಕ ಎತ್ತ ಸಾಗುತ್ತಿದೆ ಎನ್ನುವುದನ್ನು ಸೂಚಿಸುತ್ತದೆ. ಪೊಲೀಸ್ ಇಲಾಖೆಯನ್ನು ದೇವರೇ ಕಾಪಾಡಬೇಕಿದೆ ಎಂದು ಟೀಕಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್ ಆಧುನಿಕ ಸ್ವಾತಂತ್ರ್ಯ ಹೋರಾಟಗಾರ: ಗೃಹ ಸಚಿವ ಕೈಲಾಶ್ ಗೆಹ್ಲೋತ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
