ಚಿಕ್ಕಬಳ್ಳಾಪುರ:ಬಿಜೆಪಿಯ ಪ್ರಬಲ ನಾಯಕ ಹಾಗೂ ಮಾಜಿ ಸಚಿವ ಕೆ.ಸುಧಾಕರ್​ ವಿರುದ್ಧ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್​ ಪಕ್ಷದಿಂದ ಕಣಕ್ಕಿಳಿದು ಭರ್ಜರಿ ಗೆಲುವು ದಾಖಲಿಸುವ ಮೂಲಕ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಪ್ರದೀಪ್​ ಈಶ್ವರ್​ಗೆ ಇಂದು ಮಾತೃವಿಯೋಗ ಆಗಿದೆ.
ಪ್ರದೀಪ್​ ಈಶ್ವರ್​ ಅವರ ಸಾಕು ತಾಯಿ ರತ್ನಮ್ಮ ಅವರು ತುಂಬಾ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು (ಮೇ 20) ಬೆಳಗ್ಗೆ ಪೇರೇಸಂದ್ರ ಗ್ರಾಮದಲ್ಲಿ ರತ್ಮಮ್ಮ (72) ಅವರು ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿ:ಪಕ್ಕದ ಸೀಟಲ್ಲಿ ಕುಳಿತಿದ್ದ ಯುವತಿಗೆ ಗುಪ್ತಾಂಗ ಪ್ರದರ್ಶಿಸಿದ ಪ್ರಯಾಣಿಕ ಅರೆಸ್ಟ್​: KSRTC ಬಸ್​ನಲ್ಲಿ ಘಟನೆ
ಸಾಕು ತಾಯಿ ಇನ್ನಿಲ್ಲ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಸಿದ್ದರಾಮಯ್ಯ ಪ್ರಮಾಣ ವಚನ ಕ್ರಾರ್ಯಕ್ರಮದಲ್ಲಿ ಭಾಗಿಯಾಗಲು ಬೆಂಗಳೂರಿಗೆ ಬಂದಿದ್ದ ಪ್ರದೀಪ್​ ಈಶ್ವರ್​ ವಾಪಸ್​ ಪೇರೇಸಂದ್ರ ಗ್ರಾಮಕ್ಕೆ ಮರಳಿದ್ದು, ತಾಯಿಯ ಅಂತಿಮ ದರ್ಶನವನ್ನು ಪಡೆದು ವಿಧಿವಿಧಾನಗಳನ್ನು ನೆರವೇರಿಸಲಿದ್ದಾರೆ.
ಪ್ರದೀಪ್​ ಈಶ್ವರ್​ ಶಾಸಕರಾಗಿ ಆಯ್ಕೆಯಾದ ದಿನದಿಂದ ಕ್ಷೇತ್ರದಲ್ಲಿ ಸುತ್ತಾಟ ನಡೆಸುತ್ತಿದ್ದಾರೆ. ಕಾಂಗ್ರೆಸ್​ ಸರ್ಕಾರ ಇನ್ನು ರಚನೆಯಾಗದಿದ್ದರೂ ಕ್ಷೇತ್ರದಲ್ಲಿ ಜನರ ಜೊತೆ ನಿಕಟ ಸಂಪರ್ಕ ಬೆಳೆಸುತ್ತಿರುವ ಪ್ರದೀಪ್​ ಈಶ್ವರ್​, ಮನೆಗೆ ಮನೆಗಳಿಗೆ ತೆರಳಿ ಕ್ಷೇತ್ರದ ಜನರ ಕಷ್ಟ-ಸುಖಗಳನ್ನು ಆಲಿಸುತ್ತಿದ್ದಾರೆ. ಅಲ್ಲದೆ, ಸ್ಥಳದಲ್ಲೇ ಪರಿಹಾರವನ್ನು ನೀಡುವ ಮೂಲಕ ಸಮಸ್ಯೆಗಳನ್ನು ಪಟ್ಟಿ ಮಾಡಿಕೊಂಡು ಪರಿಹರಿಸುವ ಭರವಸೆಯನ್ನು ನೀಡುವ ಮೂಲಕ ಜನನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗುತ್ತಿದ್ದಾರೆ.
ಪ್ರದೀಪ್​ ಈಶ್ವರ್​ ಅವರು ಮನೆ ಮನೆಗೆ ತೆರಳಿ ಜನರೊಂದಿಗೆ ಮಾತನಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಕಳೆದ ಎರಡ್ಮೂರು ದಿನಗಳಿಂದ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದ್ದು, ಪ್ರದೀಪ್​ ಈಶ್ವರ್​ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಇದನ್ನೂ ಓದಿ:ಬಸ್ಸಿನಲ್ಲಿ ಮಹಿಳೆಯರಿಬ್ಬರ ಮಧ್ಯೆ ಕುಳಿತು ಕಾಮಚೇಷ್ಟೆ: ವಿಡಿಯೋ ಹರಿಬಿಟ್ಟು ಘಟನೆ ವಿವರಿಸಿದ ನಟಿ
ಇನ್ನೊಂದೆಡೆ ಇಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್​ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಲ್ಲದೆ, 8 ಸಚಿವರು ಕೂಡ ಪದಗ್ರಹಣ ಮಾಡಲಿದ್ದಾರೆ. ಕಂಠೀರವ ಸ್ಟೇಡಿಯಂನಲ್ಲಿ ಮಧ್ಯಾಹ್ನ 12.30ಕ್ಕೆ ಪದಗ್ರಹಣ ಸಮಾರಂಭ ನಡೆಯಲಿದೆ.
ಮಾನವರ ನಡುವೆ ಮೊದಲ ಚುಂಬನ ನಡೆದಿದ್ದು ಯಾವಾಗ? ಬಹಿರಂಗವಾಯ್ತು ಅಚ್ಚರಿಯ ಉತ್ತರ!

ಪದಗ್ರಹಣ ಸಮಾರಂಭಕ್ಕೆ ರೈಲಿನಲ್ಲಿ ಆಗಮಿಸಿದ ಶಾಸಕ: ಸರಳತೆ ಮೆರೆದ ದರ್ಶನ್ ಪುಟ್ಟಣ್ಣಯ್ಯ

ಸಿದ್ದು, ಡಿಕೆಶಿ ಜತೆ 8 ಸಚಿವರಿಂದ ಪ್ರಮಾಣ ವಚನ: ಮೊದಲ ಸಚಿವ ಸಂಪುಟದಲ್ಲಿ 6 ಸಮುದಾಯಕ್ಕೆ ಅವಕಾಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
