ಚಿಕ್ಕಮಗಳೂರು: ಕರೊನಾ ಸೋಂಕು ಹರಡುವುದನ್ನು ತಡೆಯಲು ತಮ್ಮ ಗ್ರಾಮಕ್ಕೆ ದಿಗ್ಬಂಧನ ಹಾಕಲು ಮುಂದಾದ ಯುವಕರಿಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅವರು ಈಗ ಕಾಡು ಸೇರಿದ್ದಾರೆ.
ಮೂಡಿಗೆರೆ ತಾಲೂಕಿನ ಮರ್ಕುಲೆ ಗ್ರಾಮದ ಯುವಕರ ತಂಡ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳನ್ನು ಮುಚ್ಚಲು ಮುಂದಾಯಿತು. ಇದಕ್ಕೆ ಕೆಲವು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದರು. ಇದರಿಂದ ಬೇಸರಗೊಂಡ ಯುವಕರು ಕಾಡಿಗೆ ತೆರಳಲು ನಿರ್ಧರಿಸಿದರು.
ಒಂದು ತಿಂಗಳಿಗೆ ಅಗತ್ಯವಾದಷ್ಟು ಆಹಾರ ಧಾನ್ಯ, ಹೊದಿಕೆ ಸೇರಿದಂತೆ ನಿತ್ಯ ಬಳಸುವ ವಸ್ತುಗಳನ್ನು ಸಂಗ್ರಹಿಸಿ ಬಣಕಲ್ ಸಮೀಪದ ಬಪ್ಲಿ ಗುಡ್ಡಕ್ಕೆ ಯುವಕರ ತಂಡ ತೆರಳಿತು. ಸ್ವತಃ ಅಡುಗೆ ಮಾಡಿಕೊಂಡು ಕಾಡಿನಲ್ಲೇ ತಿಂಗಳು ವಾಸ ಮಾಡಿ ನಂತರ ಗ್ರಾಮಕ್ಕೆ ಹಿಂದಿರುಗುವುದಾಗಿ ಚರಣ್​ ತಿಳಿಸಿದ್ದಾರೆ. (ದಿಗ್ವಿಜಯ ನ್ಯೂಸ್​)
ಪ್ರಯಾಣಿಕರ ಗಮನಕ್ಕೆ – ನೀವು ಈ ಬಸ್​ನಲ್ಲಿ ಪ್ರಯಾಣಿಸಿದ್ದೀರಾ? ಹಾಗಿದ್ದರೆ ಇಲ್ಲಿದೆ ನಿಮಗೊಂದು ಸೂಚನೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
