ಹೊಸದುರ್ಗ:ಪಟ್ಟಣದ ಎಪಿಎಂಸಿ ಮಾರುಕಟ್ಟೆ ಮುಂಭಾಗದಲ್ಲಿರುವ ಪುರಸಭೆಯ ನೀರು ಶುದ್ಧೀಕರಣ ಘಟಕದಲ್ಲಿ ಸೋಮವಾರ ಸಂಜೆ ಕ್ಲೋರಿನ್ (ಕ್ಲೋರೋಫಾರಂ) ಅನಿಲ ಸೋರಿಕೆಯಾಗಿ ನೂರಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ಸಂಭವಿಸಿದೆ.
ಇದನ್ನೂ ಓದಿ:ರಾಜಸ್ಥಾನದಲ್ಲಿ ಭಾರತ ಮತ್ತು ಅಮೆರಿಕ ಸೇನೆಗಳ ಜಂಟಿ ಸಮಾರಾಭ್ಯಾಸ ಆರಂಭ!
ಪಟ್ಟಣಕ್ಕೆ ಸರಬರಾಜು ಆಗುವ ನೀರು ಶುದ್ಧೀಕರಣಕ್ಕೆ ಬಳಸುವ ಕ್ಲೋರಿನ್ ಅನಿಲ ತುಂಬಿದ ಸಿಲೆಂಡರ್ ನಿಂದ ಸಂಜೆ 6:00 ಸುಮಾರಿಗೆ ಅನಿಲ ಸೋರಿಕೆಯಾಗಿದೆ. ಘಟಕದ ಸುತ್ತಮುತ್ತ ಸುಮಾರು ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಗಾಳಿಗೆ ಅನಿಲ ಸೋರಿಕೆಯಾದ ಹಿನ್ನೆಲೆಯಲ್ಲಿ ಸುತ್ತಮುತ್ತಲ ಬಡಾವಣೆಯ ಜನರು ಅಸ್ವಸ್ಥಗೊಂಡಿದ್ದಾರೆ.

ಒಮ್ಮೆಲೇ ಉಸಿರು ಕಟ್ಟಿದ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಜನರ ಮನೆಯಿಂದ ಹೊರಗೆ ಬಂದು ಎಪಿಎಂಸಿ ಮೈದಾನ ಹಾಗೂ ಶಾಲಾ ಮೈದಾನದ ಸೇರಿದಂತೆ ಕಾಲಿ ಜಾಗಕ್ಕೆ ಓಡಿ ಹೋಗಿದ್ದಾರೆ.
ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸಿಲೆಂಡರ್ ನಿಂದ ಅನಿಲ ಸೋರಿಕೆಯಾಗುವುದನ್ನು ತಡೆಯಲು ತೀವ್ರ ಪ್ರಯತ್ನ ನಡೆಸಿದರು. ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಸಿಬ್ಬಂದಿಗಳು ಕೂಡ ಉಸಿರಾಟದ ತೊಂದರೆಯಿಂದ ಅಸ್ವಸ್ಥಗೊಂಡರೂ ಸಿಲೆಂಡರ್​ನ್ನು ಭೂಮಿಯಲ್ಲಿ ಗುಂಡಿ ತೆಗೆದು ಮುಚ್ಚುವ ಮೂಲಕ ಅನಿಲ ತೋರಿಕೆಯನ್ನ ನಿಲ್ಲಿಸುವಲ್ಲಿ ಯಶಸ್ವಿಯಾದರು.

ಘಟನೆಯಲ್ಲಿ ತೀವ್ರವಾಗಿ ಅಸ್ವಸ್ಥಗೊಂಡ ನೂರಕ್ಕೂ ಹೆಚ್ಚು ಜನರು ಪಟ್ಟಣದ ಸರ್ಕಾರಿ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಉಸಿರಾಟದ ಸಮಸ್ಯೆ ಇರುವವರಿಗೆ ಆಕ್ಸಿಜನ್ ಹಾಗೂ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಒಮ್ಮೆಲೆ ಆಸ್ಪತ್ರೆಗೆ ನೂರಕ್ಕೂ ಹೆಚ್ಚು ಅಸ್ವಸ್ಥರು ದಾಖಲಾದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ರೋಗಿಗಳ ದಟ್ಟಣೆ ಹೆಚ್ಚಾಗಿತ್ತು. ಸರ್ಕಾರಿ ಆಸ್ಪತ್ರೆಯ ಎಲ್ಲಾ ವೈದ್ಯರು ಸಕಾಲದಲ್ಲಿ ಕರ್ತವ್ಯಕ್ಕೆ ಹಾಜರಾಗಿ ಚಿಕಿತ್ಸೆ ನೀಡಿದ ಹಿನ್ನೆಲೆಯಲ್ಲಿ ಹೆಚ್ಚಿನ ಅಪಾಯ ತಪ್ಪಿದೆ.

ಪುರಸಭೆ ಕರ್ತವ್ಯ ನಿರ್ವಹಣೆಯಲ್ಲಿ ಜವಾಬ್ದಾರಿಯಿಂದ ನಡೆದುಕೊಳ್ಳದೆ ಇರುವುದು ಘಟನೆ ಸಂಭವಿಸಲು ಕಾರಣವಾಗಿದೆ. ಇನ್ನಾದರೂ ಅಧಿಕಾರಿಗಳು ಸಾರ್ವಜನಿಕರ ಹಿತ ರಕ್ಷಿಸುವ ಕೆಲಸಕ್ಕೆ ಮುಂದಾಗಬೇಕು. ಬೇಜವಾಬ್ದಾರಿ ತೋರಿದ ಅಧಿಕಾರಿಗಳ ವಿರುದ್ಧ ಜಿಲ್ಲಾಡಳಿತ ಸೂಕ್ತ ಕ್ರಮ ಜರುಗಿಸಬೇಕು ಎಂದು ನಾಗರೀಕರು ಆಕ್ರೋಶ ವ್ಯಕ್ತಪಡಿಸಿದರು. ತಹಶೀಲ್ದಾರ್ ತಿರುಪತಿ ಪಾಟೀಲ್, ಪೊಲೀಸ್ ಪಿ ಐ ತಿಮಣ್ಣ, ಸ್ಥಳದಲ್ಲಿದ್ದು ಪರಿಸ್ಥಿತಿ ಸುಧಾರಣೆಗೆ ಕ್ರಮ ತೆಗೆದುಕೊಂಡರು.
Mpox Case ಭಾರತದಲ್ಲಿ ಎಂಪಾಕ್ಸ್ ಪ್ರಕರಣ ದೃಢ; ಕೇಂದ್ರದ ಸ್ಪಷ್ಟನೆ ಏನು?

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:nine + seventeen =
Remember me
