ಬೆಂಗಳೂರು:ಸಿಎಂ ಆಗಿ ಚೊಚ್ಚಲ ಬಜೆಟ್​ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಿಯು ಅತಿಥಿ ಉಪನ್ಯಾಸಕರಿಗೆ ಬಂಪರ್​ ಕೊಡುಗೆಯನ್ನು ನೀಡಿದ್ದಾರೆ.
ರಾಜ್ಯ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಬೋಧನಾ ಅವಧಿಯನ್ನು ಹೆಚ್ಚಿಸಿ ಮಾಸಿಕ ಗೌರವ ಧನವನ್ನು 11 ಸಾವಿರದಿಂದ 32 ಸಾವಿರಕ್ಕೆ ಏರಿಕೆ ಮಾಡುವ ಮೂಲಕ ಸಿಎಂ ಬೊಮ್ಮಾಯಿ ಸಿಹಿ ಸುದ್ದಿಯನ್ನು ನೀಡಿದ್ದಾರೆ. ಅಲ್ಲದೆ, ಹೊಸ ರೀತಿಯಲ್ಲಿ 7 ವಿಶ್ವ ವಿದ್ಯಾಲಯಗಳ ಸ್ಥಾಪನೆ ಮಾಡಲು ಸರ್ಕಾರ ನಿರ್ಧರಿಸಿದೆ. ಬೆಳಗಾವಿ, ಬಳ್ಳಾರಿಯಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆಗೆ ಅನುದಾನ ಮೀಸಲಿಟ್ಟಿದ್ದಾರೆ. ಕೃಷಿ ವಲಯಕ್ಕೆ ಬಜೆಟ್​​ನಲ್ಲಿ 33,700 ಕೋಟಿ ರೂಪಾಯಿ ಅನುದಾನವನ್ನು ನೀಡಿದ್ದಾರೆ.
ಮಹಿಳಾ ಸಬಲೀಕರಣ ಕ್ಷೇಮಾಭಿವೃದ್ಧಿಗೆ 43,188 ಕೋಟಿ, ಹೊಸ ಯೋಜನೆಯಾದ ರೈತ ಶಕ್ತಿ ಯೋಜನೆಗೆ 500 ಕೋಟಿ ರೂಪಾಯಿ, ಪ್ರವಾಹದಿಂದ ಹಾನಿಯಾದ ಕೆರೆಗಳ ಅಭಿವೃದ್ಧಿಗೆ 200 ಕೋಟಿ ರೂ., ಸಂಸ್ಕೃತಿ, ಪರಂಪರೆ ಮತ್ತು ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆಗೆ 3,102 ಕೋಟಿ ರೂಪಾಯಿ ಹಾಗೂ ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆಗೆ 56,710 ಕೋಟಿ ರೂಪಾಯಿಯನ್ನು ಬಜೆಟ್​ನಲ್ಲಿ ಸಿಎಂ ಬೊಮ್ಮಾಯಿ ಮೀಸಲಿರಿಸಿದ್ದಾರೆ.
ಬಜೆಟ್​ನ ನೇರ ಪ್ರಸಾರಕ್ಕೆ ಇಲ್ಲಿ ಕ್ಲಿಕ್ಕಿಸಿ:
LIVE| ಬಜೆಟ್​ ಮಂಡನೆ… ತಜ್ಞರ ಚರ್ಚೆ-ವಿಶ್ಲೇಷಣೆ ಜತೆಗೆ ಕ್ಷಣ ಕ್ಷಣದ ಮಾಹಿತಿಯ ನೇರಪ್ರಸಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 15 =
Remember me
