ಕಲಬುರಗಿ:545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಹಗರಣ ನಡೆಸಿದ ಆರೋಪ ಎದುರಿಸುತ್ತಿರುವ ಜ್ಞಾನಜ್ಯೋತಿ ಆಂಗ್ಲಮಾಧ್ಯಮ ಶಾಲೆಯ ಮುಖ್ಯಸ್ಥೆ ದಿವ್ಯಾ ಹಾಗರಗಿ ಅವರನ್ನು ಶೀಘ್ರ ಬಂಧಿಸಲಾಗುವುದು. ಈ ಬಗ್ಗೆ ಸಿಐಡಿ ಅಧಿಕಾರಿಗಳು ಚುರುಕಿನ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಗರಣದಲ್ಲಿ ಯಾರೇ ಭಾಗಿಯಾಗಿದ್ದರೂ ಹಿಂಜರಿಯುವ ಪ್ರಶ್ನೆಯೇ ಇಲ್ಲ. ಆರೋಪ ಕೇಳಿಬಂದ ತಕ್ಷಣ ನಾವೇ ಸಿಐಡಿ ತನಿಖೆಗೆ ಆದೇಶ ನೀಡಿದ್ದೇವೆ. ಇದು ಗೊತ್ತಿದ್ದರೂ ಕಾಂಗ್ರೆಸ್ ಮುಖಂಡರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಇವರ ಸರ್ಕಾರ ಇದ್ದಾಗ ನಡೆದ ಹಗರಣಗಳ ಬಗ್ಗೆ ಯಾವತ್ತಾದರೂ ತನಿಖೆಗೆ ಆದೇಶ ನೀಡಿದ್ದಾರೆಯೇ ಎಂದು ಪ್ರಶ್ನಿಸಿದರು.
ಅವರ ಆಡಳಿತದಲ್ಲಿ ನಡೆದ ಅಕ್ರಮಗಳ ತನಿಖೆ ಮಾತೇ ಎತ್ತಲಿಲ್ಲ. ಹಿಂದೆ ಆರಂಭವಾದ ಕೆಲ ತನಿಖೆಗಳನ್ನು ಪೂರ್ಣಗೊಳಿಸಲಿಲ್ಲ. ಆದರೆ ನಾನು ಅಕ್ರಮದ ಆರೋಪ ಬಂದ ಕ್ಷಣದಿಂದಲೇ ಕ್ಷಿಪ್ರ ಕ್ರಮ ವಹಿಸಿದ್ದೇನೆ ಎಂದರು.ದಿವ್ಯಾ ಅವರು ಕರ್ನಾಟಕ ನರ್ಸಿಂಗ್ ಕೌನ್ಸಿಲ್ ಹಾಗೂ ದಿಶಾ ಸಮಿತಿ ಸದಸ್ಯೆ ಆಗಿದ್ದಾರೆ. ಅವರ ಮೇಲೆ ಅಕ್ರಮ ಆರೋಪ ಕಂಡುಬಂದ ಕಾರಣ ಅವರನ್ನು ಎರಡೂ ಸ್ಥಾನದಿಂದ ಪದಚ್ಯುತಿಗೊಳಿಸಲಾಗುವುದು ಎಂದರು.ಈಗಾಗಲೇ ದಿವ್ಯಾ ಅವರ ಪತಿ ಸೇರಿ 12 ಮಂದಿಯನ್ನು ಬಂಧಿಸಲಾಗಿದೆ. ನಾವು ತನಿಖೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಚರಿಸಿದರು.
ಪ್ರಕರಣದಲ್ಲಿ ಕಾಂಗ್ರೆಸ್ಸಿನ ಅಫಜಲಪುರ ಶಾಸಕ ಎಂ.ವೈ. ಪಾಟೀಲ ಅವರ ಗನ್ ಮ್ಯಾನ್ ಹಯ್ಯಾಳಿ ಎಂಬಾತನನ್ನೂ ಬಂಧಿಸಲಾಗಿದೆ. ಇಂತಹವರೇ ಗನ್ ಮ್ಯಾನ್ ಬೇಕು ಎಂದು ಶಾಸಕರು ಕೇಳಿದ್ದಾರೆ. ನಾವು ನಿಯೋಜನೆ ಮಾಡಿದ್ದೇವೆ. ಆದರೆ, ಈಗ ಗನ್ ಮ್ಯಾನ್ ಸರ್ಕಾರಿ ಕೆಲಸಗಾರ. ಅವರ ಅಕ್ರಮಕ್ಕೆ ಸರ್ಕಾರವೇ ಜವಾಬ್ದಾರಿ ಎನ್ನುತ್ತಿದ್ದಾರೆ. ಯಾವಾಗಲೂ ತಮ್ಮೊಂದಿಗೆ ಇರುತ್ತಿದ್ದ ಗನ್ ಮ್ಯಾನ್ ಯಾರು, ಏನು,ಅವನ ಹಿನ್ನೆಲೆ ಬಗ್ಗೆ ಇವರಿಗೆ ಗೊತ್ತೇ ಇತ್ತಲ್ಲ. ಈಗ ಏಕೆ ನುಸುಳಿಕೊಳ್ಳುವ ಹೇಳಿಕೆ ನೀಡಬೇಕು ಎಂದೂ ಬಸವರಾಜ ಬೊಮ್ಮಾಯಿ ಖಾರವಾಗಿ ಪ್ರಶ್ನಿಸಿದರು.
ಸಿನಿಮಾದಲ್ಲಿ ಸಿಗರೇಟ್​ ಸೇದುವುದು ತಪ್ಪಾದರೆ ಇದಕ್ಕೆ ಸರ್ಕಾರ ತೆರಿಗೆ ಹಣ ಕೇಳೋದು ಸರಿನಾ ಹೀಗೆಂದು ಉಪೇಂದ್ರ ಟ್ವೀಟ್​ ಮಾಡಿದ್ದು ಏಕೆ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
