ಬೆಂಗಳೂರು:ವಿಧಾನಮಂಡಲ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿಯೇ ಸಚಿವರೊಂದಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಹತ್ವದ ಅನೌಪಚಾರಿಕ ಸಭೆ ನಡೆಸಿದರು.
ಸಂಪುಟ ಸಭೆಯಲ್ಲಿ ಚರ್ಚಿಸುವ ಹೊರತಾಗಿ ಇತರ ಪ್ರಾಮುಖ್ಯ ವಿಚಾರಗಳನ್ನು ತುರ್ತಾಗಿ ಚರ್ಚಿಸುವ ಉದ್ದೇಶದಿಂದ ಸಭೆ ಕರೆದಿದ್ದರು ಎಂದು ಮೂಲಗಳು ತಿಳಿಸಿದೆ.
ಈವರೆಗೂ ಸರ್ಕಾರದ ಕಡೆಯಿಂದ ಸಭೆಯ ಅಧಿಕೃತ ಮಾಹಿತಿ ಹೊರಬಂದಿಲ್ಲ. ಸದನದಲ್ಲಿ ಸಚಿವರ ನಡವಳಿಕೆಗಳ ಕುರಿತು ಸಿಎಂ ಬುದ್ಧಿವಾದ ಹೇಳಿದರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿರಿ:ನಾನು ಜೆಡಿಎಸ್ ನಲ್ಲೇ ಇದ್ದೇನೆ
ಕಲಾಪದಲ್ಲಿ ಪ್ರತಿಪಕ್ಷದಿಂದ ದಾಳಿ ನಡೆಯುವಾಗ ಸದನದಲ್ಲಿ ಒಂದಿಬ್ಬರು ನಿಂತರೇ ಸಾಲದು, ಎಲ್ಲರೂ ನಿಂತು ಮಾತನಾಡಬೇಕು ಎಂದು ಸಿಎಂ ತಾಕೀತು ಮಾಡಿದರೆನ್ನಲಾಗಿದೆ.
ಸಿಡಿ ಸೇರಿದಂತೆ ಮತ್ತಿತರ ವಿಷಯವನ್ನಿಟ್ಟುಕೊಂಡು ಕಾಂಗ್ರೆಸ್ ನವರು ಸರ್ಕಾರದ ವಿರುದ್ಧ ಮುಗಿಬೀಳುತ್ತಿದ್ದಾರೆ. ಕಾಂಗ್ರೆಸ್‌ನವರ ಈ ದಾಳಿತಡೆಯಲು ಎಲ್ಲರೂ ಸಜ್ಜಾಗಬೇಕು. ಅವರ ಅವಧಿ ವಿಚಾರವನ್ನೂ ಪ್ರಸ್ತಾಪಿಸಬೇಕೆಂದು ಸಲಹೆ ನೀಡಿದ್ದಾರೆ.
ಇಂತಹ ಸಂದರ್ಭದಲ್ಲಿ ಒಂದಿಬ್ಬರು ನಿಂತು ಮಾತಾಡಿದರೆ ಸಾಲದು. ಉಳಿದ ಸಚಿವರು ಕೂಡ ಸದನದಲ್ಲಿ ನಿಂತು ಮಾತನಾಡಬೇಕು. ಸರ್ಕಾರದ ಆಡಳಿತ ಹಾಗೂ ತೀರ್ಮಾನನ್ನು ಸಮರ್ಥನೆ ಮಾಡಿಕೊಳ್ಳಬೇಕು. ಬಜೆಟ್ ಮೇಲಿನ ಚರ್ಚೆ ವೇಳೆ ಸಮಗ್ರವಾಗಿ ಉತ್ತರ ನೀಡಬೇಕು. ತಮ್ಮ ತಮ್ಮ ಇಲಾಖೆಗಳ ಪ್ರಗತಿ ಬಗ್ಗೆ ಸಮಗ್ರವಾದ ಮಾಹಿತಿ ಮೂಲಕ ಉತ್ತರಿಸಬೇಕು. ಯಾವುದೇ ಕಾರಣಕ್ಕೂ ವಿಪಕ್ಷಗಳ ದಾಳಿಗೆ ಒಳಗಾಗಬಾರದು ಎಂದು ಸಲಹೆ ನೀಡಿದ್ದಾರೆ.
ಇದನ್ನೂ ಓದಿರಿ:ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳು! ಕರುಗೆ ಹಾಲುಣಿಸಲಾಗದೆ ನರಳುತ್ತಿದೆ ಮೂಕಜೀವಿ
ಸದನ ಮುಗಿದ ನಂತರ ಜಿಲ್ಲಾ ಪ್ರವಾಸ ಮಾಡಬೇಕು. ಜಿಲ್ಲೆಯಲ್ಲಿ ಕೆಡಿಪಿ ಸಭೆ ಸೇರಿದಂತೆ ಅಭಿವೃದ್ಧಿ ಕಾರ್ಯಗಳ ಅನುಷ್ಠಾನ ಮಾಡಿಸಬೇಕು. ಸ್ಥಳೀಯ ಶಾಸಕರ ವಿಶ್ವಾಸದೊಂದಿಗೆ ಜಿಲ್ಲೆಯ ಅಭಿವೃದ್ಧಿ ಮಾಡಬೇಕು ಎಂದು ತಿಳಿ ಹೇಳಿದ್ದಾರೆ.
ಶೀಘ್ರವೇ ಉಪ‌ ಚುನಾವಣೆ ದಿನಾಂಕ ಘೋಷಣೆ ಯಾಗುತ್ತಿದೆ. ಈ ಚುನಾವಣೆಯಲ್ಲಿ ನಾವು ಗೆಲ್ಲಲೇಬೇಕು. ಹೀಗಾಗಿ ಚುನಾವಣಾ ಉಸ್ತುವಾರಿ ಹೊತ್ತವರು ಚುನಾವಣೆ ಸಿದ್ದತೆ ಕಡೆ ಗಮನ ಕೊಡಬೇಕು. ಜಿಲ್ಲೆಯಲ್ಲಿ ಆಡಳಿತ ವನ್ನು ಚುರುಕುಗೊಳಿಸಬೇಕು. ಈ ನಿಟ್ಟಿನಲ್ಲಿ ಎಲ್ಲರು ಕೆಲಸ ಮಾಡುವಂತೆ ಸೂಚನೆ ನೀಡಿದ್ದಾರೆ.
8ನೇ ತರಗತಿ ವಿದ್ಯಾರ್ಥಿ ಜತೆ ಓಡಿಹೋದ ಮೂರು ಮಕ್ಕಳ ತಾಯಿ! 1 ವರ್ಷದ ರಹಸ್ಯ ಬಿಚ್ಚಿಟ್ಟ ಪಾಲಕರು

ಜಯಲಲಿತಾ ಸಾವಿಗೆ ಯಾರು ಹೊಣೆ? ಸ್ಫೋಟಕ ಹೇಳಿಕೆ ನೀಡಿದ ಸಿಎಂ ಪಳನಿಸ್ವಾಮಿ!

ಗೂಗಲ್ ಉದ್ಯೋಗಿ ಸಿ.ಡಿ. ವಿಜಯಕುಮಾರ್ ಈಗ ಕೃಷಿಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
