ಬೆಳಗಾವಿ:ಕೇಂದ್ರ ಸಚಿವ ದಿ. ಸುರೇಶ್​ ಅಂಗಡಿ ನಿವಾಸಕ್ಕೆ ತೆರಳಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಇಲ್ಲಿನ ವಿಶ್ವೇಶ್ವರಯ್ಯ ನಗರದಲ್ಲಿರುವ ಅಂಗಡಿ ನಿವಾಸಕ್ಕೆ ಬುಧವಾರ ಬೆಳಗ್ಗೆ ಭೇಟಿ ನೀಡಿದ್ದ ಬಿಎಸ್​ವೈ ಅವರು ಸುರೇಶ್​ ಅಂಗಡಿ ಪತ್ನಿ ಮಂಗಳಾ, ತಾಯಿ ಸೋಮವ್ವ, ಮಕ್ಕಳಾದ ಸ್ಪರ್ಧಾ, ಸ್ಫೂರ್ತಿ ಸೇರಿದಂತೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಸುರೇಶ್​ ಅಂಗಡಿ ಅಂತ್ಯಕ್ರಿಯೆ ನಡೆದ ದೆಹಲಿಯಲ್ಲಿ ಅವರ ಸಮಾಧಿ ಸ್ಥಳ ಅಭಿವೃದ್ಧಿ ಪಡಿಸಿ ಅಲ್ಲಿಯೇ ಸ್ಮಾರಕ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಸುರೇಶ್​ ಅಂಗಡಿ ಸ್ಮಾರಕವನ್ನು ಬೆಳಗಾವಿಯಲ್ಲೇ ನಿರ್ಮಿಸುವಂತೆ ಅವರ ಅಭಿಮಾನಿಗಳು ಒತ್ತಾಯ ಮಾಡಿರುವುದು ಗಮನಕ್ಕಿದೆ. ಈ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಸಿಎಂ ಹೇಳಿದರು.
ಸಚಿವ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ರಮೇಶ್​ ಜಾರಕಿಹೊಳಿ ಹಾಗೂ ಸಚಿವ ಜಗದೀಶ ಶೆಟ್ಟರ್, ಶಾಸಕ ಅನಿಲ್ ಬೆನಕೆ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
ನನ್ನ ಮಗನನ್ನು ಅವರ ಮನೆಯಲ್ಲೇ ಕೂರಿಸಿಕೊಳ್ಳಲಿ… ನಮಗೆ ಊಟ ಕೊಟ್ಟರೆ ಸಾಕೆಂದ ಡಿಕೆಶಿ ತಾಯಿ

PHOTO GALLERY| ಚಿರು ಫೋಟೋ ಇಟ್ಟುಕೊಂಡು ಸೀಮಂತ ಶಾಸ್ತ್ರ ಮಾಡಿಸಿಕೊಂಡ ಮೇಘನಾ ರಾಜ್​

ಎಲ್ಲ ಪ್ರಜೆಗಳಿಗೂ ಕೋವಿಡ್​ಗೆ ಉಚಿತ ಲಸಿಕೆ ಕೊಡಲಿದೆ ಈ ದೇಶ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − eight =
Remember me
