ಬೆಂಗಳೂರು:ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ 20 ಸ್ಥಾನಗಳನ್ನೂ ಗೆಲ್ಲುವ ಗುರಿ ಹೊಂದಿರುವ ಕಾಂಗ್ರೆಸ್​ ಪಕ್ಷ ತಂತ್ರಗಳನ್ನೂ ಹೆಣೆಯುವುದರಲ್ಲಿ ನಿರತವಾಗಿದೆ. ಇದರ ಫಲವಾಗಿಯೇ ಪಕ್ಷದೊಳಗಿನ ಬೇಗುದಿಯನ್ನೂ ತಣಿಸಲು ಮುಂದಾಗಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್​ ಆರು ಜಿಲ್ಲೆಗಳ ಕಾಂಗ್ರೆಸ್ ಶಾಸಕರೊಂದಿಗೆ ಸಭೆ ನಡೆಸಿದ್ದಾರೆ.
ಅದರಂತೆ ಮೊದಲ ಹಂತದಲ್ಲಿ ತುಮಕೂರು, ಚಿತ್ರದುರ್ಗ, ಬಾಗಲಕೋಟೆ, ಧಾರವಾದ, ಬಳ್ಳಾರಿ ಮತ್ತು ಯಾದಗಿರಿ ಕ್ಷೇತ್ರಗಳ ಶಾಸಕರು, ಉಸ್ತುವಾರಿ ಸಚಿವರ ಜೊತೆ ಸಿಎಂ ಹಾಗೂ ಡಿಸಿಎಂ ಸಭೆ ನಡೆಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಈ ಬಾರಿ ಹೆಚ್ಚಿನ ಅನುದಾನ ನಿರೀಕ್ಷೆ ಮಾಡಬೇಡಿ. ಇರುವ ಆರ್ಥಿಕ ವ್ಯವಸ್ಥೆಯಲ್ಲಿ ನಿಮ್ಮ ಕ್ಷೇತ್ರದ ಅಭಿವೃದ್ಧಿಗೆ ಹಂತಹಂತವಾಗಿ ಅನುದಾನ ಕೊಡ್ತೀವಿ. ನಿಮ್ಮ ಎಲ್ಲಾ ಸಮಸ್ಯೆಗಳಿಗೂ ಸ್ಪಂದಿಸುತ್ತೇನೆ. ಸಂಬಂಧಪಟ್ಟ ಸಚಿವರಿಗೆ ಆಯಾ ಇಲಾಖೆಯ ಕೆಲಸ ಮಾಡಿಕೊಡುವಂತೆ ಸೂಚಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.
ಇದನ್ನೂ ಓದಿ:ಪೊಲೀಸರ ಭರ್ಜರಿ ಕಾರ್ಯಾಚರಣೆ; ಕೋಟ್ಯಂತರ ರೂಪಾಯಿ ಮೌಲ್ಯದ 77 ಕೆಜಿ ಹೆರಾಯಿನ್​ ವಶಕ್ಕೆ
ಬಿಜೆಪಿ ಸರ್ಕಾರದ ಅವಧಿಯಲ್ಲಿ ಟೆಂಡರ್​ ಕರೆಯದೆ ಕಾಮಗಾರಿ ನಡೆಸಿರುವ ಬಗ್ಗೆ ಶಾಸಕರು ಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ. ಕಲಸ ಮಾಡಿದ ಗುತ್ತಿಗೆದಾರರು ಹಣ ಬಿಡುಗಡೆ ಮಾಡಿಸುವಂತೆ ಈಗಿನ ಶಾಸಕರಿಗೆ ದುಂಬಾಲು ಬಿದ್ದಿರುವ ಕುರಿತು ಸಭೆಯಲ್ಲಿ ಸಿಎಂ ಗಮನಕ್ಕೆ ಶಾಸಕರು ತಂದಿದ್ದಾರೆ. ಈ ವಿಚಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಏನೇ ಅಸಮಾಧಾನಗಳಿದ್ದರೂ ನನ್ನ ಬಳಿ ಹೇಳಿ ಅಥವಾ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ. ಏನೇ ಒತ್ತಡ ಇದ್ದರೂ ತಿಂಗಳಿಗೊಮ್ಮೆ ಜಿಲ್ಲಾವಾರು ಶಾಸಕರ ಸಭೆ ನಡೆಸಿ ಅವರ ಕುಂದುಕೊರತೆಗಳನ್ನೂ ಆಲಿಸುತ್ತೇನೆ. ಸರ್ಕಾರದಿಂದ ಆಗಬೇಕಾಗಿರುವ ಕೆಲಸಗಳೂ ಸಮಪರ್ಕವಾಗಿ ಆಗುವಂತೆ ನೋಡಿಕೊಳ್ಳುತ್ತೇನೆ ಎಂದು ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಶಾಸಕರಿಗೆ ಭರವಸೆ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 11 =
Remember me
