ಬೆಂಗಳೂರು:ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳ ಸಭೆಯನ್ನು ಕರೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಅಧಿಕಾರಿಗಳಿಗೆ ಕೆಲವು ಸಲಹೆ ಹಾಗೂ ಸೂಚನೆಗಳನ್ನು ನೀಡಿದ್ದಾರೆ. ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು ಒಂದಷ್ಟು ವಿಷಯಗಳನ್ನು ಹಂಚಿಕೊಂಡರು.
ಆಡಳಿತದಲ್ಲಿ ಸುಧಾರಣೆ ತರಲು, ಪಾರದರ್ಶಕ ಆಡಳಿತ ನೀಡಲು ಅಧಿಕಾರಿಗಳ ಸಹಕಾರ ಕೋರಿದ್ದೇವೆ. ಆಡಳಿತದಲ್ಲಿ ಪಾರದರ್ಶಕತೆ ತರಬೇಕು, ಉತ್ತಮ ಆಡಳಿತ ನೀಡಲು ಸೂಕ್ತ ಕ್ರಮವಹಿಸಿ ಎಂದು ಸೂಚನೆ ನೀಡಿದ್ದೇನೆ ಎಂದು ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದರು.
ಇದನ್ನೂ ಓದಿ:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮತ್ತೊಂದು ನಿರ್ಧಾರ; ಇದು ಎಲ್ಲ ಕಡೆಗೂ ಅನ್ವಯ ಎಂದ ಸಿಎಂ

ಕಾಲಮಿತಿಯೊಳಗೆ ಕಡತಗಳನ್ನು ವಿಲೇವಾರಿ ಮಾಡಬೇಕು, ಎಲ್ಲ ಕಡತವೂ ತ್ವರಿತವಾಗಿ ವಿಲೇ ಆಗಬೇಕು. ಜನರಿಗೆ ಸರ್ಕಾರಿ ಯೋಜನೆಗಳನ್ನ ತಲುಪಿಸಲು ಕ್ರಮವಹಿಸಬೇಕು. ಸರ್ಕಾರದ ಯೋಜನೆಗಳನ್ನು ನಿಗದಿತ ಕಾಲಾವಧಿಯೊಳಗೆ ಅನುಷ್ಠಾನಗೊಳಿಸಬೇಕು, ತಡವಾದರೆ ಭ್ರಷ್ಟಾಚಾರಕ್ಕೆ ಆಸ್ಪದವಾಗುತ್ತದೆ. ಜೊತೆಗೆ ಯೋಜನೆ ಅನುದಾನ ವೆಚ್ಚವೂ ಹೆಚ್ಚಳವಾಗುತ್ತದೆ. ಹೀಗಾಗಿ ಸೂಕ್ತ ಸಮಯಕ್ಕೆ ಯೋಜನೆಯನ್ನ ಜನರಿಗೆ ತಲುಪಿಸಿ ಎಂದು ಸೂಚನೆ ನೀಡಿದ್ದಾಗಿ ಸಿಎಂ ತಿಳಿಸಿದರು.

22 ವರ್ಷ ತನ್ನೊಳಗಿದ್ದ ಹೃದಯವನ್ನು 16 ವರ್ಷಗಳ ಬಳಿಕ ಮ್ಯೂಸಿಯಮ್​ನಲ್ಲಿ ಕಣ್ಣೆದುರೇ ಕಂಡಳು!

2000 ರೂ. ನೋಟು ಹಿಂಪಡೆದ ಆರ್​ಬಿಐ ವಿರುದ್ಧ ಕೋರ್ಟ್​ ಮೆಟ್ಟಿಲೇರಿದ ಬಿಜೆಪಿ ಮುಖಂಡ: ಆಕ್ಷೇಪವೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
