ಬೆಂಗಳೂರು:ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್​) ಹಾಲಿನ ದರ ಹೆಚ್ಚಳ ಮಾಡುವ ಕುರಿತು ಕಳೆದ ಕೆಲವು ದಿನಗಳಿಂದ ಚರ್ಚೆಯಲ್ಲಿದ್ದು, ಇಂದು ಆ ಕುರಿತು ನಿರ್ಧಾರವೊಂದು ಹೊರಬಿದ್ದಿದೆ.
ನಂದಿನಿ ಹಾಲು ಹಾಗೂ ಮೊಸರಿನ ದರ ಪರಿಷ್ಕರಣೆ ಸಂಬಂಧ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಹಾಲು ಹಾಗೂ ಮೊಸರಿನ ದರವನ್ನು ಪ್ರತಿ ಲೀಟರ್‌ಗೆ ಮೂರು ರೂಪಾಯಿಯಂತೆ ಹೆಚ್ಚಿಸಲು ಹಾಲು ಒಕ್ಕೂಟಗಳು ಒತ್ತಾಯಿಸಿದ್ದವು.
ಆರೇಳು ತಿಂಗಳಿನಿಂದಲೂ ಮಹಾಮಂಡಳ ಸರ್ಕಾರವನ್ನು ಈ ಬಗ್ಗೆ ಒತ್ತಾಯಿಸುತಿದ್ದು, ಅನುಮತಿ ದೊರೆಯದಿದ್ದರೂ ಹೆಚ್ಚಳದ ಪ್ರಕಟಣೆ ಹೊರಡಿಸಿತ್ತು. ಆದರೆ, ಮುಖ್ಯಮಂತ್ರಿ ಬೊಮ್ಮಾಯಿ ಈ ನಿರ್ಧಾರಕ್ಕೆ ತಾತ್ಕಾಲಿಕ ತಡೆ ನೀಡಿ ನ.20ರಂದು ತೀರ್ಮಾನ ಮಾಡೋಣ ಎಂದು ಹೇಳಿದ್ದರು.
ಅದರಂತೆ ಇಂದು ಸಭೆ ನಡೆಸಿದ ಸಿಎಂ ಬೊಮ್ಮಾಯಿ, ಒಂದು ಸೂತ್ರ ರೂಪಿಸಿ ಬೋರ್ಡ್ ಮೀಟಿಂಗ್ ಕರೆದು ನೀವೇ ತೀರ್ಮಾನಿಸಿ ಅಂದಿದ್ದೇನೆ. ಆದರೆ ಹಿಂದಿನ ದರ ಬೇಡ ಎಂದು ಕೆಎಂಎಫ್​​ಗೆ ಸೂಚನೆ ನೀಡಿದ್ದೇನೆ. ಕೆಎಂಎಫ್​ನವರು 2 ದಿನ ಸಮಯ ತೆಗೆದುಕೊಂಡಿದ್ದಾರೆ ಎಂದು ತಿಳಿಸಿರುವ ಸಿಎಂ, ಸದ್ಯಕ್ಕೆ ಹಾಲಿನ ದರ ಹೆಚ್ಚಳ ಇಲ್ಲ ಎಂದೂ ಹೇಳಿದ್ದಾರೆ. ಗ್ರಾಹಕರಿಗೆ, ರೈತರಿಗೆ ಸಮಸ್ಯೆ ಆಗದಂತೆ ತೀರ್ಮಾನಿಸಲು ಕೆಎಂಎಫ್​​ಗೆ ಜವಾಬ್ದಾರಿ ವಹಿಸಿದ್ದಾಗಿ ಅವರು ತಿಳಿಸಿದ್ದಾರೆ.

ಶಾಸಕರಿಗೇ ಹೊಡೆದು ಬಟ್ಟೆ ಹರಿದು ಹಾಕಿದ ಜನರು; ಕತ್ತಲಲ್ಲಿ ಹರಿದ ಅಂಗಿಯಲ್ಲೇ ಪರಿಸ್ಥಿತಿ ವಿವರಿಸಿದ ಕುಮಾರಸ್ವಾಮಿ..

ಸಿದ್ದರಾಮಯ್ಯ ಅರ್ಜಿ, ಹೈಕಮಾಂಡ್ ಮರ್ಜಿ: ಮುಂದಿನ ಚುನಾವಣೆಯಲ್ಲಿ ಸಿದ್ದು ಸ್ಪರ್ಧೆ ಎಲ್ಲಿಂದ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
