ಬೆಂಗಳೂರು: ಕಳಸಾ ಬಂಡೂರಿ ಯೋಜನೆಗೆ ಉಂಟಾಗಿರುವ ತೊಡಕು ನಿವಾರಿಸಲು ಹಾಗೂ ಕೇಂದ್ರ ಸರ್ಕಾರದಿಂದ ಬರಬೇಕಾದ ಬಾಕಿ ಅನುದಾನ ಬಿಡುಗಡೆಗೆ ಒತ್ತಾಯಿಸಲು ಸಿಎಂ ಯಡಿಯೂರಪ್ಪ ಶೀಘ್ರವೇ ದೆಹಲಿಗೆ ಪ್ರಯಾಣ ಬೆಳಸುವರು.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಮಹದಾಯಿ ಸಂಬಂಧ ಕೇಂದ್ರ ಸಚಿವರನ್ನು ಇನ್ನು 4-5 ದಿನದಲ್ಲೇ ಭೇಟಿಯಾಗಲಿದ್ದೇನೆ. ಯೋಜನೆ ಕಾರ್ಯಗತಕ್ಕೆ ಸರ್ಕಾರ ಉತ್ಸುಕವಾಗಿದೆ. ಅಡೆ ತಡೆ ನಿವಾರಿಸಿಕೊಡುವಂತೆ ಕೇಂದ್ರವನ್ನು ಒತ್ತಾಯಿಸುವೆ. ಗೋವಾ, ಮಹಾರಾಷ್ಟ್ರ ಜತೆ ಮಾತುಕತೆ ನಡೆಸಿ ಯೋಜನೆ ಅನುಷ್ಠಾನಕ್ಕೆ ಪ್ರಯತ್ನ ಮಾಡಲಾಗುತ್ತದೆ ಎಂದರು.
ಜಿಎಸ್​ಟಿ ನಷ್ಟ ಭರ್ತಿ ಬಾಬ್ತು ಎರಡು ಕಂತು ಬರಬೇಕಾಗಿದೆ. ಅಕ್ಟೋಬರ್-ನವೆಂಬರ್ ತಿಂಗಳ ಕಂತು ಬಂದಿದೆ. ನವೆಂಬರ್-ಡಿಸೆಂಬರ್​ನ ಕಂತು ಜನವರಿಯಲ್ಲಿ ಬರಬಹುದು. ಮಾರ್ಚ್ ವೇಳೆಗೆ ಕೊನೆಯ ಕಂತು ಬರಲಿದೆ. ತಡ ಮಾಡದೆ ಬಿಡುಗಡೆ ಮಾಡುವಂತೆ ಕೇಂದ್ರವನ್ನು ಕೋರಿದ್ದೇವೆ, ಅವರೂ ಹಣ ಬಿಡುಗಡೆಗೆ ಒಪ್ಪಿದ್ದಾರೆ ಎಂದು ಹೇಳಿದರು. ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಬಂದಿದ್ದಾಗ ಹಣ ಬಿಡುಗಡೆಗೆ ಒತ್ತಾಯಿದ್ದೆವು, ತಕ್ಷಣದಲ್ಲೇ ಜಲಸಂಪನ್ಮೂಲ ಇಲಾಖೆಗೆ ಸಂಬಂಧಿಸಿದಂತೆ  155 ಕೋಟಿ ರೂಪಾಯಿ ಬಿಡುಗಡೆಯಾಯಿತು ಎಂದು ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − one =
Remember me
