ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಕಾಣಿಸಿಕೊಂಡಿರುವ ಈ ಮಹಿಳೆ ಯಾರು ಎಂಬುದು ಕೆಲವರಿಗೆ ಈಗಾಗಲೇ ಗೊತ್ತಾಗಿರಬಹುದು. ಇನ್ನು ಕೆಲವರಿಗೆ ಯಾರು ಎಂಬುದು ತಕ್ಷಣಕ್ಕೆ ನೆನಪಾಗಿರಲಿಕ್ಕಿಲ್ಲ.
ಆದರೆ ಕಾಂಗ್ರೆಸ್​​ನ ಐದು ಗ್ಯಾರಂಟಿಗಳಲ್ಲಿ ಒಂದಾದ, ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಯನ್ನು ಸ್ಮರಿಸಿಕೊಂಡರೆ ಈಕೆ ಯಾರು ಎಂಬುದು ನೆನಪಾಗಿಬಿಡುತ್ತದೆ. ನಿಜ.. ಇದು ಅವರೇ.. ಬೆಳಗಾವಿ ಜಿಲ್ಲೆಯ ಸಂಗೊಳ್ಳಿಯ ಸಂಗವ್ವ. ಶಕ್ತಿ ಯೋಜನೆ ಜಾರಿಗೆ ಬಂದ ದಿನ ಬಸ್​ನ ಫುಟ್​ಬೋರ್ಡ್​ ಭಕ್ತಿಯಿಂದ ನಮಸ್ಕರಿಸಿ ಬಸ್​​ ಏರಿದ್ದ ಈಕೆ ಅಂದು ರಾಜ್ಯದ ಗಮನ ಸೆಳೆದಿದ್ದರು.
ಇದನ್ನೂ ಓದಿ:ಈಕೆಯ ಕೈ ಸ್ಕ್ಯಾನ್ ಮಾಡಿದ್ರೆ ಸಾಕು ಹಣ ಕಳಿಸಿಕೊಡಬಹುದು; ಇದಕ್ಕಿಂತ ‘ಡೈರೆಕ್ಟ್ ಟ್ರಾನ್ಸ್​ಫರ್’​ ಅಸಾಧ್ಯ ಅನಿಸುತ್ತೆ!
ಆ ಸಂಗವ್ವಗೆ ಇಂದು ಮುಖ್ಯಮಂತ್ರಿಯವರೊಂದಿಗೇ ಕೆಲ ಕ್ಷಣಗಳನ್ನು ಕಳೆಯುವ ಅವಕಾಶ ಸಿಕ್ಕಿದೆ. ಇಂದು ಖಾಸಗಿ ವಾಹಿನಿಯೊಂದರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿಎಂ ಭಾಗಿಯಾಗಿದ್ದು, ಅಲ್ಲೇ ಈಕೆಯನ್ನು ಭೇಟಿ ಮಾಡಿದ ಅವರು ಆ ಕುರಿತು ಅಪಾರ ಸಂತೋಷ ಹಂಚಿಕೊಂಡಿದ್ದಾರೆ.
ಮಹಿಳೆಯರ ಸಬಲೀಕರಣಕ್ಕೆ ನಾವು ಬೆಂಬಲವಾಗಿ ನಿಲ್ಲಬೇಕು ಎನ್ನುವ ಕಾಳಜಿಯಿಂದ ಜಾರಿಗೆ ತಂದಿರುವ ಶಕ್ತಿ ಯೋಜನೆಯ ಮೊದಲ ದಿನವೇ ಸಂಗವ್ವ ಅವರಿಂದ ದೊರೆತ ಪ್ರತಿಕ್ರಿಯೆ ಕಂಡು ನಮ್ಮ ಯೋಜನೆ ನೂರಕ್ಕೆ ನೂರರಷ್ಟು ಯಶಸ್ವಿಯಾಗಲಿದೆ ಎಂಬ ಭರವಸೆ ನನ್ನಲ್ಲಿ ಮೂಡಿತ್ತು ಎಂದು ಸಿಎಂ ಹೇಳಿದ್ದಾರೆ.
ಶಕ್ತಿ ಯೋಜನೆ ಜಾರಿಯಾದ ದಿನ ಅತ್ಯಂತ ಸಂತಸದಿಂದ ಸರ್ಕಾರಿ ಬಸ್ಸಿನ ಮೆಟ್ಟಿಲುಗಳಿಗೆ ನಮಸ್ಕರಿಸಿ ಪ್ರಯಾಣ ಬೆಳೆಸಿದ್ದ ಬೆಳಗಾವಿ ಜಿಲ್ಲೆಯ ಸಂಗೊಳ್ಳಿಯ ಸಂಗವ್ವ ಅವರನ್ನು ಇಂದು ಕಲರ್ಸ್ ಕನ್ನಡದ ಅನುಬಂಧ ಅವಾರ್ಡ್ ಕಾರ್ಯಕ್ರಮದಲ್ಲಿ ಭೇಟಿಯಾದದ್ದು ನನ್ನಲ್ಲಿ ಅಚ್ಚರಿ ಮತ್ತು ಖುಷಿಯ ಜೊತೆಗೆ ಸಾರ್ಥಕ್ಯದ ಭಾವ ಮೂಡಿಸಿತು.
ಮಹಿಳೆಯರ ಸಬಲೀಕರಣಕ್ಕೆ…pic.twitter.com/oYoHT1UL9k
— Siddaramaiah (@siddaramaiah)September 3, 2023

ಬಸ್​ನಲ್ಲಿನ ಚಿಲ್ಲರೆ ಸಮಸ್ಯೆಗೆ ಕಂಡಕ್ಟರ್ ಕೊರಳಲ್ಲೇ ಪರಿಹಾರ!; ಅಂತೂ ಜಾರಿಗೆ ಬಂತು ಹಳೇ ಬೇಡಿಕೆ…

ಅಬ್ಬಬ್ಬಾ.. ಇದೇನಿದು ‘ಸರ್ಪ’ರೈಸ್!: ದೇವರಕೋಣೆಯಲ್ಲಿ ಕಾಳಿಂಗ ಸರ್ಪ, ಸ್ಕೂಲ್​ಬ್ಯಾಗ್​ನಲ್ಲಿ ನಾಗರಹಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − two =
Remember me
