ಬೆಂಗಳೂರು: ಇಂದುಬರ ನಿರ್ವಹಣೆ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ, ಅಗತ್ಯ ಸಲಹೆ ಸೂಚನೆ ನೀಡಿದ ಸಿಎಂ ಸಿದ್ದರಾಮಯ್ಯ,ಪೂರ್ವ ಮುಂಗಾರು ಮಳೆ ಪ್ರಾರಂಭವಾಗಿದೆ. ಈ ಬಾರಿ ನೀತಿ ಸಂಹಿತೆ ಅನುಷ್ಠಾನದ ಅವಧಿ ಸುದೀರ್ಘವಾಗಿತ್ತು. ಸರ್ಕಾರದ ಆಡಳಿತವನ್ನು ನಿಧಾನವಾಗಿಸಿತ್ತು. ಎಲ್ಲ ಜಿಲ್ಲಾಧಿಕಾರಿಗಳು ಚುನಾವಣಾಧಿಕಾರಿಗಳಾಗಿದ್ದರು. ಚುನಾವಣಾ ಕೆಲಸದಲ್ಲಿ ನಿರತರಾಗಿದ್ದರಿಂದ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡಲು ಸಾಧ್ಯವಾಗಿರಲಿಲ್ಲ. ವಾಡಿಕೆಗಿಂತ ಹೆಚ್ಚು ಮಳೆ ಮೇ ತಿಂಗಳಲ್ಲಿ ಆಗಿದೆ ಎಂದರು.
“ಈಗಾಗಲೇ ಬಿತ್ತನೆ ಕೆಲಸವೂ ಪ್ರಾರಂಭವಾಗಿದೆ. ಮೇ ತಿಂಗಳಲ್ಲಿ 2.95 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ ಇತ್ತು, 68,000 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಇನ್ನೂ 13 ದಿನ ಬಾಕಿಯಿದೆ. ಜೂನ್‌ 6 ರವರೆಗೆ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಕಾರಣದಿಂದ ತುರ್ತು ಕೆಲಸಗಳಿಗೆ ಗಮನ ಕೊಡಬೇಕು. ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಲು ಪ್ರಾರಂಭಿಸಬೇಕು” ಎಂದರು.
ಇದನ್ನೂ ಓದಿ:ಪ್ರತಿ ರನ್​ಗೆ 27 ಲಕ್ಷ ರೂಪಾಯಿ! ಐಪಿಎಲ್​ ಇತಿಹಾಸದಲ್ಲೇ ದುಬಾರಿಯಾದ ಆರ್​ಸಿಬಿ ಆಟಗಾರ
“ಫೆಬ್ರವರಿಯಲ್ಲಿ ಬಜೆಟ್‌ ಮಂಡಿಸಲಾಗಿದೆ. ಆರ್ಥಿಕ ವರ್ಷದ ಎರಡು ತಿಂಗಳು ಕಳೆದು ಹೋಗುತ್ತಿದೆ. ಒಂದು ವರ್ಷದಲ್ಲಿ ಮಾಡುವ ಕೆಲಸವನ್ನು 10 ತಿಂಗಳಲ್ಲಿ ಮಾಡಿ ಮುಗಿಸುವ ಅನಿವಾರ್ಯತೆ ಇದೆ. ಈ ಹಿನ್ನೆಲೆಯಲ್ಲಿ ಎಲ್ಲ ಕಾರ್ಯದರ್ಶಿಗಳ ಸಭೆ ನಡೆಸಲಾಯಿತು. ಜೂನ್‌ ಕೊನೆಯವರೆಗೆ ಎಲ್ಲ ಹೊಸ ಘೋಷಣೆಗಳಿಗೆ ಸರ್ಕಾರಿ ಆದೇಶ ಹೊರಡಿಸಬೇಕು ಎಂದು ಸೂಚಿಸಲಾಗಿದೆ. ಟೆಂಡರ್‌ ಕರೆಯಲು ಯಾವುದೇ ನೀತಿ ಸಂಹಿತೆ ಅಡ್ಡ ಬರುವುದಿಲ್ಲ. ಟೆಂಡರ್‌ ಕರೆದು, ಅಂತಿಮಗೊಳಿಸಿ, ಕಾರ್ಯಾದೇಶ ನೀಡಲು ಪ್ರಯತ್ನಿಸಬೇಕು. ಇದರಲ್ಲಿ ವಿಳಂಬವಾದರೆ ರಾಜ್ಯದ ಅಭಿವೃದ್ಧಿಯಲ್ಲಿ ವಿಳಂಬವಾಗುತ್ತದೆ. 500 ಕ್ಕೂ ಹೆಚ್ಚು ಘೋಷಣೆಗಳನ್ನು ಮಾಡಲಾಗಿದೆ. ಈ ಬಗ್ಗೆ ಎಲ್ಲ ಅಧಿಕಾರಿಗಳು ಹೆಚ್ಚು ಗಮನ ಹರಿಸಬೇಕು” ಎಂದು ಹೇಳಿದರು.
“ಮೈಸೂರಿನ ಎರಡು ಹಳ್ಳಿಗಳಲ್ಲಿ ಕಾಲರಾ ತಲೆದೋರಿದೆ. ಟಿ. ನರಸೀಪುರ ತಾಲ್ಲೂಕು, ತಗಡೂರು ಹಾಗೂ ಕೆ.ಸಾಲುಹುಂಡಿ ಗ್ರಾಮಗಳಲ್ಲಿ ಕಾಲರಾ ಕಂಡುಬಂದಿದೆ. ಕಲುಷಿತ ನೀರು ಕುಡಿದು ಕಾಲರಾ ಉಂಟಾಗಿದೆ. ಸಂಬಂಧಪಟ್ಟ ಎಂಜಿನಿಯರುಗಳು ಕುಡಿಯಲು ಯೋಗ್ಯ ನೀರು ಒದಗಿಸುವಲ್ಲಿ ವಿಫಲವಾಗಿದ್ದಾರೆ. ಕುಡಿಯುವ ನೀರಿನ ಮೂಲ ಕುಡಿಯಲು ಯೋಗ್ಯವಾಗಿದೆಯೇ ಇಲ್ಲವೇ ಎಂದು ಪರಿಶೀಲಿಸದೆ ಇರುವುದು ದೊಡ್ಡ ಅಪರಾಧ. ಕೆ. ಸಾಲುಹುಂಡಿಯಲ್ಲಿ 40ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿ, ಒಬ್ಬ ಯುವಕ ಮೃತಪಟ್ಟಿದ್ದಾನೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಆಗಿರುವುದು. ಕಾಲರಾ ಅಥವಾ ಇನ್ನಿತರ ಸಾಂಕ್ರಾಮಿಕಗಳು ಕಾಣಿಸಿಕೊಂಡರೆ ಹಿರಿಯ ಅಧಿಕಾರಿಗಳನ್ನೇ ಜವಾಬ್ದಾರರನ್ನಾಗಿ ಮಾಡಲಾಗುವುದು” ಎಂದು ಹೇಳಿದ್ದಾರೆ.
ಇದನ್ನೂ ಓದಿ:ಈ ಧರ್ಮದಲ್ಲಿದೆ ಒತ್ತಡ ನಿವಾರಣೆಗೆ ಮದ್ದು! ಖ್ಯಾತ ಪಾಪ್ ತಾರೆ ಕ್ಯಾಮಿಲಾ ಕ್ಯಾಬೆಲ್ಲೊ ಹೇಳಿಕೆ ವೈರಲ್​​​​
“ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು ಖಾತರಿಪಡಿಸಬೇಕು. ಈ ವರ್ಷದ ಸಾಲ ಯೋಜನೆ ಕಳುಹಿಸಲಾಗಿದೆ. ಜಿಲ್ಲಾ ಬ್ಯಾಂಕರುಗಳೊಂದಿಗೆ ಸಮನ್ವಯ ವಹಿಸಿ, ಕ್ರಮ ಕೈಗೊಳ್ಳಬೇಕು. ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಬೆಳೆ ವಿಮೆ ಕ್ಲೇಮ್‌ ಮಾಡುವ ಸಂದರ್ಭದಲ್ಲಿ ಕಂಪೆನಿಗಳ ಸ್ಯಾಂಪಲ್‌ ಪರಿಶೀಲನೆಯ ಕುರಿತು ರೈತರು ಹಲವು ಸಂದೇಹಗಳನ್ನು ಹೊಂದಿದ್ದಾರೆ. ವಿಮಾ ಕಂಪನಿಗಳ ನಡವಳಿಕೆಯಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುವ ಅಪಾಯವಿದೆ. ಆದ್ದರಿಂದ ಈ ಕುರಿತು ಮುಂಚಿತವಾಗಿಯೇ ಕಂಪೆನಿಗಳೊಂದಿಗೆ ಚರ್ಚಿಸಿ, ರೈತರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಬೇಕು” ಎಂದಿದ್ದಾರೆ.
ಇವರಿಬ್ಬರಿಲ್ಲ ಅಂದ್ರೆ IPL​ಗೆ ಕಳೆಯೇ ಇಲ್ಲ! ಮುಂದೆ ಯಾರೂ ಹೀಗೆ ಹುಚ್ಚೆದ್ದು ನೋಡೋದಿಲ್ಲ: ನವಜೋತ್ ಸಿಂಗ್ ಸಿಧು

ಆರ್​ಸಿಬಿ ಸೋತ ಬೆನ್ನಲ್ಲೇ ಡಿವಿಲಿಯರ್ಸ್​ ಬಿಚ್ಚುಮಾತು! ಟೀಕಾಕಾರರ ಬಾಯಿ ಮುಚ್ಚಿಸಿದ ಮಿಸ್ಟರ್. 360

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
