ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ, ಸರಣಿ ಟ್ವೀಟ್​ ಮೂಲಕ ಹಲವು ಆರೋಪಗಳನ್ನು ಎಸಗಿದ್ದಾರೆ. ನಾವು ನುಡಿದಂತೆ ನಡೆದಿದ್ದೇವೆ, ನೀವು ಯಾವಾಗ ನಿಮ್ಮ ಘೋಷಣೆಯ ಅನುಗುಣವಾಗಿ ನುಡಿದಂತೆ ನಡೆದುಕೊಳ್ಳುವಿರಿ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:ಸೊಳ್ಳೆ ನಿಯಂತ್ರಣದಿಂದ ರೋಗಮುಕ್ತ ಜೀವನ
ಈ ಕುರಿತು ಟ್ವೀಟ್​ ಮಾಡಿರುವ ಸಿಎಂ, “ಮಾನ್ಯ ನರೇಂದ್ರ ಮೋದಿ ಅವರೇ, ಹಿಂದಿನ ನಿಮ್ಮ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯದ ಗುತ್ತಿಗೆದಾರರು ಮಾಡಿರುವ 40% ಕಮಿಷನ್ ಆರೋಪದ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ನೇತೃತ್ವದ ಸಮಿತಿಯನ್ನು ರಚನೆ ಮಾಡುವ ಮೂಲಕ ನಾವು ನುಡಿದಂತೆ ನಡೆದಿದ್ದೇವೆ. ನಿಮ್ಮ ಮೂಗಿನಡಿಯಲ್ಲಿಯೇ ದ್ವಾರಕಾ ಎಕ್ಸ್‌ಪ್ರೆಸ್‌ ಹೈವೇ ಯೋಜನೆಯಲ್ಲಿ ಪ್ರತಿ ಕಿ.ಮೀ.ಗೆ 250 ಕೋಟಿ ರೂ. ಕೊಳ್ಳೆ ಹೊಡೆಯಲಾಗಿದೆ, 5 ಟೋಲ್‌ ಪ್ಲಾಜಾಗಳಲ್ಲಿ 132 ಕೋಟಿ ರೂ. ಹಣವನ್ನು ಲೂಟಿ ಮಾಡಲಾಗಿದೆ” ಎಂದು ಹೇಳಿದ್ದಾರೆ.
ಮಾನ್ಯ@narendramodiಅವರೇ, ಹಿಂದಿನ ನಿಮ್ಮ ರಾಜ್ಯ@BJP4Karnatakaಸರ್ಕಾರದ ವಿರುದ್ಧ ರಾಜ್ಯದ ಗುತ್ತಿಗೆದಾರರು ಮಾಡಿರುವ 40% ಕಮಿಷನ್ ಆರೋಪದ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ನೇತೃತ್ವದ ಸಮಿತಿಯನ್ನು ರಚನೆ ಮಾಡುವ ಮೂಲಕ ನಾವು ನುಡಿದಂತೆ ನಡೆದಿದ್ದೇವೆ.
ನಿಮ್ಮದೇ ಸರ್ಕಾರದಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ…pic.twitter.com/cvZ5hjHVk0
— Siddaramaiah (@siddaramaiah)August 18, 2023

“ನೀವು ಪದೇ ಪದೇ ಉಲ್ಲೇಖಿಸುವ ‘ಆಯುಷ್ಮಾನ್‌ ಭಾರತ್‌’ ಯೋಜನೆಯಲ್ಲಂತೂ ಮೃತಪಟ್ಟ ಸುಮಾರು 88,೦೦೦ ಫಲಾನುಭವಿಗಳ ಹೆಸರಿನಲ್ಲಿ ಹೊಸದಾಗಿ ಬಿಲ್‌ಗಳನ್ನು ಕ್ಲೈಮ್‌ ಮಾಡಿ ಹಣ ನುಂಗಲಾಗಿದೆ ಎಂದು ಸಿಎಜಿ ವರದಿ ಮಾಡಿದೆ. ಇದರ ಬಗ್ಗೆ ತನಿಖೆ ನಡೆಸುವ ಧೈರ್ಯ ತೋರಿಸುವಿರಾ? ನಿಮ್ಮದೇ ಸರ್ಕಾರದಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಸಿಎಜಿ ನೀಡಿರುವ ವರದಿಯ ಬಗ್ಗೆ ನೀವು ಯಾವಾಗ ತನಿಖೆ ನಡೆಸಿ ‘ನಾ ಖಾವೂಂಗಾ ನಾ ಖಾನೆ ದೂಂಗಾ’ ಎಂಬ ನಿಮ್ಮ ಘೋಷಣೆಗೆ ಅನುಗುಣವಾಗಿ ನುಡಿದಂತೆ ನಡೆಯುವಿರಿ?” ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:ಇಸ್ವ ಆಂಪಿಯರ್ ಇಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮಾರಾಟ- ಸೇವಾ ಮಳಿಗೆ ಆರಂಭ
“ನೀವು ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯ ಅಧ್ಯಕ್ಷರೂ ಆಗಿದ್ದೀರಿ. ಭಾರತ್ ಮಾಲಾ ಯೋಜನೆಯಲ್ಲಿ ಪ್ರತಿ ಕಿ.ಮೀಗೆ 15.37 ಕೋಟಿ ರೂ.ಗಳಿಂದ, 32 ಕೋಟಿ ರೂ.ವರೆಗೆ ಹೆಚ್ಚುವರಿ ಖರ್ಚು ತೋರಿಸಲಾಗಿದೆ ಎಂದು ಸಿಎಜಿ ವರದಿ ಮಾಡಿದೆ. ಇದಕ್ಕೆ ನಿಮ್ಮ ಪ್ರತಿಕ್ರಿಯೆ ಏನು? ಸಂಪರ್ಕ ವ್ಯವಸ್ಥೆ ಸುಧಾರಣೆಯ ಅತಿ ಪ್ರಚಾರದ ಭಾರತ ಮಾಲಾ ಯೋಜನೆಯ ಟೆಂಡರ್ ಪ್ರಕ್ರಿಯೆಯಲ್ಲಿಯೇ ಅಕ್ರಮ ನಡೆದಿದೆ ಮತ್ತು ಆ ಯೋಜನೆ ಬಗೆಗೆ ವಿಸ್ತೃತವಾದ ವರದಿಯೇ ಸಲ್ಲಿಕೆಯಾಗಿಲ್ಲ” ಎಂದು ಟ್ವೀಟ್​ನಲ್ಲಿ ಹೇಳಿದ್ದಾರೆ.
ಪ್ರಧಾನಿ@narendramodiಅವರೇ,ನೀವು ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯ ಅಧ್ಯಕ್ಷರೂ ಆಗಿದ್ದೀರಿ. ಭಾರತ್ ಮಾಲಾ ಯೋಜನೆಯಲ್ಲಿ ಪ್ರತಿ ಕಿ.ಮೀ.ಗೆ ರೂ.15.37 ಕೋಟಿ ಗಳಿಂದ ರೂ.32 ಕೋಟಿ ವರೆಗೆ ಹೆಚ್ಚುವರಿ ಖರ್ಚು ತೋರಿಸಲಾಗಿದೆ ಎಂದು ಸಿಎಜಿ ವರದಿ ಮಾಡಿದೆ.ಇದಕ್ಕೆ ನಿಮ್ಮ ಪ್ರತಿಕ್ರಿಯೆ ಏನು? 3/7#AnswerMadiModi
— Siddaramaiah (@siddaramaiah)August 18, 2023

“ಹೀಗಿದ್ದರೂ 3,500 ಕೋಟಿ ರೂ. ಹಣವನ್ನು ವರ್ಗಾಯಿಸಲಾಗಿದೆ ಎಂದು ಸಿಎಜಿ ಲೋಪವನ್ನು ಎತ್ತಿ ತೋರಿಸಿದೆ. ಈ ಬಗ್ಗೆ ನಿಮ್ಮ ಮೌನವನ್ನು ಅಕ್ರಮದಲ್ಲಿ ಷಾಮೀಲಾಗಿದ್ದೀರಿ ಎಂದು ವ್ಯಾಖ್ಯಾನಿಸಬಹುದೇ? ದಿಲ್ಲಿ-ಗುರುಗ್ರಾಮ ಗಡಿಯಲ್ಲಿರುವ ದ್ವಾರಕಾ ಎಕ್ಸ್ಪ್ರೆಸ್ ವೇ ಯೋಜನೆಯಲ್ಲಿ ಅಕ್ರಮ ನಡೆದಿರುವ ವರದಿಗಳಿವೆ. ಪ್ರತಿ ಕಿ.ಮೀ.ಗೆ 18.2 ಕೋಟಿ ರೂ.ಗಳಿಂದ 251 ಕೋಟಿ ರೂ.ಗಳ ವರಗೆ ನಿರ್ಮಾಣ ವೆಚ್ಚವನ್ನು ಅವೈಜ್ಞಾನಿಕ ರೀತಿಯಲ್ಲಿ ಏರಿಸಲಾಗಿರುವ ಆರೋಪಗಳಿವೆ. ಈ ಬಗ್ಗೆ ಸಮಗ್ರ ರೂಪದ ತನಿಖೆಯ ಅಗತ್ಯವಿದೆ ಎಂದು ನಿಮಗೆ ಅನಿಸುವುದಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:ಹೃದಯಾಘಾತದಿಂದ ಸಾವು: ಪುರುಷರಿಗೆ ಸಂಬಂಧಿಸಿದಂತೆ ಹೊರಬಿದ್ದಿದೆ ಆತಂಕಕಾರಿ ಮಾಹಿತಿ!
“ನೀವು I.N.D.I.A ಒಕ್ಕೂಟವನ್ನು ಭ್ರಷ್ಟರ ಒಕ್ಕೂಟವೆಂದು ಸುಳ್ಳು ಆರೋಪ ಹೊರಿಸಿ ಸಂಭ್ರಮಿಸುತ್ತೀರಿ, ನಿಮ್ಮದೇ ಸರ್ಕಾರ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ತೊಡಗಿರುವ ಬಗ್ಗೆ ಸಿಎಜಿ ವರದಿಯು ಬಟಾಬಯಲು ಮಾಡಿದ್ದರೂ ಕಣ್ಣು, ಬಾಯಿಮುಚ್ಚಿ ಕೂತಿದ್ದೀರಿ. ಇದು ಆತ್ಮವಂಚಕ ನಡವಳಿಕೆ ಅಲ್ಲವೇ? ಅಯೋಧ್ಯೆಯ ರಾಮ ಮಂದಿರ ನಿರ್ಮಾಣದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಬಗ್ಗೆ ನಿಮ್ಮದೇ ಪರಿವಾರ ಆರೋಪಗಳನ್ನು ಮಾಡತೊಡಗಿದೆ” ಎಂದು ಟ್ವೀಟ್​ನಲ್ಲಿ ಉಲ್ಲೇಖಿಸಿದ್ದಾರೆ.
ಮಾನ್ಯ@narendramodiಅವರೇ,ನೀವು I.N.D.I.A ಒಕ್ಕೂಟವನ್ನು ಭ್ರಷ್ಟರ ಒಕ್ಕೂಟವೆಂದು ಸುಳ್ಳು ಆರೋಪ ಹೊರಿಸಿ ಸಂಭ್ರಮಿಸುತ್ತೀರಿ, ನಿಮ್ಮದೇ ಸರ್ಕಾರ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ತೊಡಗಿರುವ ಬಗ್ಗೆ ಸಿಎಜಿ ವರದಿಯು ಬಟಾಬಯಲು ಮಾಡಿದ್ದರೂ ಕಣ್ಣು, ಬಾಯಿಮುಚ್ಚಿ ಕೂತಿದ್ದೀರಿ. ಇದು ಆತ್ಮವಂಚಕ ನಡವಳಿಕೆ ಅಲ್ಲವೇ? 6/7#AnswerMadiModi
— Siddaramaiah (@siddaramaiah)August 18, 2023

“ಪಿಎಂ ಕೇರ್ಸ್‌ ಫಂಡ್ ಅನ್ನು ಸರ್ಕಾರದ್ದೆಂದು ಭಾವಿಸಿ ಮುಗ್ಧ ಜನತೆ ಅಪಾರ ಪ್ರಮಾಣದಲ್ಲಿ ಹಣವನ್ನು ದಾನವಾಗಿ ನೀಡುತ್ತಿದ್ದಾರೆ. ಆದರೆ, ನಿಮ್ಮ ಸರ್ಕಾರ ಅದನ್ನು ಸಾರ್ವಜನಿಕ ದತ್ತಿ ಟ್ರಸ್ಟ್‌ ಎಂದು ಹೆಸರಿಸಿ ಅದನ್ನು ಮಾಹಿತಿ ಹಕ್ಕಿನಿಂದ ಹೊರಗಿರಿಸಿರಿದೆ. ಈ ದುಡ್ಡಿನಿಂದ ಯಾರಿಗೆ ಲಾಭವಾಗುತ್ತಿದೆ ಹೇಳಬಲ್ಲಿರಾ?” ಎಂದು ಸರಣಿ ಟ್ವೀಟ್​ ಮೂಲಕ ಪ್ರಧಾನಿ ಮೋದಿಗೆ ಸಿಎಂ ಪ್ರಶ್ನಿಸಿದ್ದಾರೆ.
ವಿಜಯ್​ ದೇವರಕೊಂಡ-ಸಮಂತಾ ನಟನೆಯ ‘ಖುಷಿ’ ಚಿತ್ರಕ್ಕೆ ಸಿಕ್ತಾ ‘ಯು’ ಸರ್ಟಿಫಿಕೆಟ್​?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 3 =
Remember me
