ಬೆಂಗಳೂರು:ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಬೆಳೆಸಾಲ ಪಡೆದು ಸುಸ್ತಿದಾರರಾಗಿರುವ ರೈತರಿಗೆ ಓ.ಟಿ.ಎಸ್ (One Time Settlement) ಯೋಜನೆಯಡಿ ಅನುಕೂಲ ಕಲ್ಪಿಸುವ ಕುರಿತು ಬ್ಯಾಂಕಿನ ಮುಖ್ಯಸ್ಥರು, ನಬಾರ್ಡ್‌ ಹಾಗೂ ಪ್ರವರ್ತಕ ಬ್ಯಾಂಕ್‌ ಆದ ಕೆನರಾ ಬ್ಯಾಂಕ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪರಿಹಾರ ಕಂಡುಕೊಳ್ಳಲು ಮುಖ್ಯ ಕಾರ್ಯದರ್ಶಿ ಹಾಗೂ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತ ಮುಖಂಡರಿಗೆ ಭರವಸೆ ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಶಾಸಕರಾದ ಬಿ.ಆರ್. ಪಾಟೀಲ ಹಾಗೂ ದರ್ಶನ್‌ ಪುಟ್ಟಣ್ಣಯ್ಯ ಅವರ ನೇತೃತ್ವದಲ್ಲಿ ಭೇಟಿಯಾದ ರೈತ ಮುಖಂಡರ ನಿಯೋಗದಿಂದ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳು ಚರ್ಚೆ ನಡೆಸಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಬೆಳೆ ಸಾಲ ಪಡೆದ ರೈತರು, ಅತಿವೃಷ್ಟಿ, ಅನಾವೃಷ್ಟಿ, ಬೆಲೆ ಕುಸಿತ ದಂತಹ ಸಮಸ್ಯೆಗಳಿಂದಾಗಿ ಸಕಾಲದಲ್ಲಿ ಸಾಲ ತೀರಿಸಲಾಗದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬ್ಯಾಂಕಿನ ಸಿಬ್ಬಂದಿ ಸಾಲ ಮರುಪಾವತಿಗೆ ನೋಟೀಸು, ಲೀಗಲ್‌ ನೋಟೀಸುಗಳನ್ನು ಕಳುಹಿಸಿ, ಅದರ ವೆಚ್ಚವನ್ನೂ ರೈತರ ಮೇಲೆಯೇ ಹಾಕುತ್ತಿದ್ದಾರೆ. ಇಂತಹ ಕ್ರಮಗಳಿಂದಾಗಿ 30,000 ರೂ. ಮೊತ್ತದ ಸಾಲಕ್ಕೆ 2.8 ಲಕ್ಷ ರೂ. ಪಾವತಿಸುವಂತೆ, 3 ಲಕ್ಷ ರೂ. ಸಾಲಕ್ಕೆ 3೦ ಲಕ್ಷ ರೂ. ಪಾವತಿಸುವಂತೆ ಕಿರುಕುಳ ನೀಡಲಾಗುತ್ತಿದೆ.
ಇದನ್ನು ಪ್ರತಿಭಟಿಸಿ, 8 ತಿಂಗಳಿನಿಂದ ರೈತ ಹೋರಾಟಗಾರರು ಧರಣಿ ನಡೆಸುತ್ತಿದ್ದಾರೆ. ರೈತರು ಓ.ಟಿ.ಎಸ್. ಅಡಿ ಶೇ. 50 ರಷ್ಟು ಅಸಲು ಪಾವತಿಸಲು ಸಿದ್ಧರಿದ್ದಾರೆ. ರೈತರ ಸಮಸ್ಯೆ ಬಗೆಹರಿಸಿ, ಅನುಕೂಲ ಮಾಡಿಕೊಡುವಂತೆ ಮನವಿ ಮಾಡಿದರು. ಹಲವು ರಾಷ್ಟ್ರೀಕೃತ ಬ್ಯಾಂಕುಗಳು ರೈತರಿಗೆ ಈ ಅನುಕೂಲ ಕಲ್ಪಿಸಿವೆ ಎಂದು ಹೇಳಿದ್ಧಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಬ್ಯಾಂಕ್‌ ಅಧಿಕಾರಿಗಳು, ಬ್ಯಾಂಕಿನ ಆಡಳಿತ ಮಂಡಳಿ ಇದಕ್ಕೆ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಬ್ಯಾಂಕಿನಲ್ಲಿ 6500 ಕೋಟಿ ರೂ. ಸುಸ್ತಿ ಸಾಲವಿದ್ದು, ಅದರಲ್ಲಿ 5000 ಕೋಟಿ ರೂ. ಬೆಳೆ ಸಾಲವಾಗಿದೆ ಎಂದರು. ಬ್ಯಾಂಕಿನ ಅಧ್ಯಕ್ಷರು ಗೈರು ಹಾಜರಾದ ಕುರಿತು ಮುಖ್ಯಮಂತ್ರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಅನುಮಾನಾಸ್ಪದ ರೀತಿಯಲ್ಲಿ ಮಹಿಳಾ ಪೊಲೀಸ್​ ಅಧಿಕಾರಿ ಸೇರಿ ಮೂವರ ಮೃತ್ಯು
ರೈತರ ಜೊತೆ ಮಾನವೀಯತೆಯಿಂದ ವರ್ತಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರಲ್ಲದೆ, ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಂಬಂಧಿಸಿದ ಬ್ಯಾಂಕ್​ಗಳ ಜೊತೆ ಚರ್ಚೆ ನಡೆಸಿ ಪರಿಹಾರ ಸೂತ್ರ ಕಂಡುಕೊಂಡ ನಂತರ ಮತ್ತೊಮ್ಮೆ ರೈತ ಪ್ರತಿನಿಧಿಗಳೊಂದಿಗೆ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಭೆಯಲ್ಲಿ ಶಾಸಕರಾದ ಬಿ.ಆರ್. ಪಾಟೀಲ, ದರ್ಶನ್​ ಪುಟ್ಟಣ್ಣಯ್ಯ, ಕೃಷಿ ತಜ್ಞ ಡಾ. ಪ್ರಕಾಶ್‌ ಕಮ್ಮರಡಿ, ರೈತ ಮುಖಂಡರಾದ ಬಡಗಲಪುರ ನಾಗೇಂದ್ರ, ಜಿ.ಸಿ. ಬಯ್ಯಾರೆಡ್ಡಿ, ಮಾಧವರೆಡ್ಡಿ, ಚಾಗನೂರು ಮಲ್ಲಿಕಾರ್ಜುನ ರೆಡ್ಡಿ, ಝಾನ್ಸಿಲಕ್ಷ್ಮಿ, ಟಿ.ಯಶವಂತ್, ಅಲಿಬಾಬ ಸೇರಿ ಹಲವು ರೈತ ಮುಖಂಡರು ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
