ಬೆಂಗಳೂರು:ವಯನಾಡಿನಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಲ್ಲಿ 320ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚಾರಣೆ ಬಿರುಸಿನಿಂದ ಸಾಗಿದ್ದು, ಅಗತ್ಯ ನೆರವು ಒದಗಿಸುವುದಾಗಿ ಹಾಗೂ ಸಂತ್ರಸ್ತರಿಗಾಗಿ ನೂರು ಮನೆಗಳನ್ನು ನಿರ್ಮಿಸಿ ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು, ಕೇರಳ ಸರ್ಕಾರದೊಂದಿಗೆ ನಾವು ಇದ್ದೇವೆ. ಅಗತ್ಯ ನೆರವು ಒದಗಿಸುವುದರೊಂದಿಗೆ ಸಂತ್ರಸ್ತರಿಗಾಗಿ 100 ಮನೆಗಳನ್ನು ನಿರ್ಮಿಸಿಕೊಡುವ ಮೂಲಕ ನಾವು ಒಟ್ಟಾಗಿ ಅಲ್ಲಿನ ಜನರ ಬದುಕಿನಲ್ಲಿ ಮತ್ತೊಮ್ಮೆ ಭರವಸೆಯ ಆಶಾಕಿರಣವನ್ನು ಮೂಡಿಸೋಣ ಎಂದು ಬರೆದುಕೊಂಡಿದ್ದಾರೆ.
In light of the tragic landslide in Wayanad, Karnataka stands in solidarity with Kerala. I have assured CM Shri@pinarayivijayanof our support and announced that Karnataka will construct 100 houses for the victims. Together, we will rebuild and restore hope.
ಇದನ್ನೂ ಓದಿ:ಜೀವಂತ ಸಮಾಧಿ ಮಾಡಲಾಗಿದ್ದ ಯುವಕನನ್ನು ಮಣ್ಣು ಅಗೆದು ಬದುಕಿಸಿದ ಬೀದಿ ನಾಯಿಗಳು
ಭೂಕುಸಿತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿದ್ದ ಲೋಕಸಭೆ ವಿಪಕ್ಷ ನಾಯಕ ರಾಹುಲ್​ ಗಾಂಧಿ  ಕಾಂಗ್ರೆಸ್​ ವತಿಯಿಂದ 100ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲಾಗುವುದು ಎಂದು ಘೋಷಿಸಿದ್ದರು. ಇದಲ್ಲದೆ ಈ ವಿಚಾರವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಿ ಸರ್ಕಾರದ ಗಮನವನ್ನು ಸೆಳೆಯುವುದಾಗಿ ತಿಳಿಸಿದ್ದರು.
ಜುಲೈ 30ರಂದು ಮುಂಡಕ್ಕೈ, ಚೂರಲ್‌ಮಲ ಪ್ರದೇಶಗಳಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತರ ಸಂಖ್ಯೆ 320ರ ಗಡಿ ದಾಟಿದೆ. ಇನ್ನೂ 350ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ. ಭಾರಿ ಯಂತ್ರಗಳ ಮೂಲಕ ಕಲ್ಲುಬಂಡೆಗಳನ್ನು ತೆರುವುಗೊಳಿಸಿ, ಅವಶೇಷಗಳಡಿ ಸಿಲುಕಿರುವವರನ್ನು ಹೊರಕ್ಕೆ ತರಲು ರಕ್ಷಣಾ ತಂಡಗಳು ಎಡಬಿಡದೆ ಕಾರ್ಯಾಚರಣೆ ನಡೆಸುತ್ತಿದೆ. 5ನೇ ದಿನವೂ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 14 =
Remember me
