ಬೆಂಗಳೂರು:ನಮ್ಮ ಸರ್ಕಾರವನ್ನು ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು. ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟು ಅಭದ್ರತೆಯ ಆತಂಕ ಇರಲೇಬಾರದೆಂದು ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ರಾಜ್ಯದ ಮತದಾರರ ಪ್ರಜ್ಞಾವಂತಿಕೆ ಎಂದರು.
ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ಕೊಟ್ಟ ‘ಉಲ್ಲಾಸ ಉತ್ಸಾಹ’ ನಟಿ ಯಾಮಿ ಗೌತಮ್; ಕಂದಮ್ಮನಿಗೆ ಇಟ್ಟ ಹೆಸರೇನು ಗೊತ್ತಾ?
“ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುವಾದಗಳಿಂದಾಗಿ ನಲುಗಿಹೋಗಿದ್ದ ರಾಜ್ಯದ ಆಡಳಿತವನ್ನು ಮತ್ತೆ ಸರಿದಾರಿಗೆ ತರುವ ದೊಡ್ಡ ಜವಾಬ್ದಾರಿಗೆ ಹೆಗಲು ಕೊಟ್ಟಾಗ ಅದರ ಭಾರದ ಅರಿವು ನಮಗಿತ್ತು. ಜನತೆಗೆ ನೀಡಿದ ಭರವಸೆಯನ್ನು ಈಡೇರಿಸಲು ನಾವು ಹೋರಾಟವನ್ನೇ ಮಾಡಬೇಕಾಯಿತು. ನಮ್ಮ ಕೈಗಳ ಬಲಕುಂದಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಕೇಂದ್ರ ಸರ್ಕಾರದ ಜೊತೆಗೂಡಿ ರಾಜ್ಯ ಬಿಜೆಪಿ ನಡೆಸಿದೆ. ಇಂತಹ ಸವಾಲುಗಳ ನಡುವೆಯೂ ನಮ್ಮ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದು ನಮ್ಮ ಮಾತು ಉಳಿಸಿಕೊಂಡಿದ್ದೇವೆ” ಎಂದು ಹೇಳಿದರು.
ಇದನ್ನೂ ಓದಿ:ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಗಳನ್ನು ಖಂಡಿತ ಈಡೇರಿಸುತ್ತೇವೆ: ಪ್ರಧಾನಿ ಮೋದಿ
“ನಮ್ಮ ಸಂಕಲ್ಪ ಕೇವಲ ಗ್ಯಾರಂಟಿ ಯೋಜನೆಗಳಲ್ಲ, ಅಭಿವೃದ್ದಿಯ ರಥವನ್ನು ಗ್ಯಾರಂಟಿಗಳ ಆಚೆಗೆ ಕೊಂಡೊಯ್ದು ರಾಜ್ಯವನ್ನು ಸುಖಿ ಮತ್ತು ಸ್ವಾವಲಂಬಿಯನ್ನಾಗಿ ಮಾಡುವುದು. ಸಾಧನೆಯ ಬಲದಲ್ಲಿ ನಮ್ಮನ್ನು ಎದುರಿಸಲಾಗದ ನಮ್ಮ ವಿರೋಧಪಕ್ಷಗಳು ಜಾತಿ -ಧರ್ಮಗಳನ್ನು ರಾಜಕೀಯದ ಅಸ್ತ್ರಗಳನ್ನಾಗಿ ಬಳಸಿಕೊಂಡು ನಮ್ಮ ಮೇಲೆ ಎರಗುತ್ತಿದ್ದಾರೆ” ಎಂದರು.
https://x.com/siddaramaiah/status/1792434875414548988
“ರಾಜ್ಯದ ಪ್ರಜ್ಞಾವಂತ ಜನತೆ ಈ ವಿಭಜನಕಾರಿ ಮತ್ತು ವಿನಾಶಕಾರಿ ಅಜೆಂಡಾಗೆ ಬಲಿಯಾಗದೆ ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿಯೇ ಉಳಿಸಿಕೊಳ್ಳಲು ಸಹಕರಿಸಬೇಕೆಂದಷ್ಟೇ ನನ್ನ ಕೋರಿಕೆ. ಉಳಿದಂತೆ ರಾಜ್ಯದ ಸರ್ವತೋಮುಖ ಅಭಿವೃದ್ದಿಯ ಕಾಯಕವನ್ನು ನಮಗೆ ಬಿಟ್ಟು ಬಿಡಿ. ನುಡಿದಂತೆ ನಡೆದಿದ್ದೆವು, ನುಡಿದಂತೆ ನಡೆಯುತ್ತಿರುವೆವು, ಮುಂದೆಯೂ ನುಡಿದಂತೆಯೇ ನಡೆಯುವೆವು” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಲೀಗ್​ನಿಂದ ಹೊರಬಿದ್ದ MI​ಗೆ ನೀತಾ ಅಂಬಾನಿ ಕ್ಲಾಸ್​; ರೋಹಿತ್​, ಹಾರ್ದಿಕ್​ಗೆ ವಿಶೇಷ ಕಿವಿಮಾತು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 3 =
Remember me
