ಬೆಂಗಳೂರು:ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕರಿಸಿ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಹಿಂದಿನ ಬಿಜೆಪಿ ಸರ್ಕಾರದ ಬಿಬಿಎಂಪಿ ವ್ಯಾಪ್ತಿಯ ಯೋಜನೆಗಳಿಗೆ ಸಿದ್ದರಾಮಯ್ಯ ಅವರು ಬ್ರೇಕ್ ಹಾಕಿದ್ದಾರೆ.
ಯಾವುದೇ ಹೊಸ ಯೋಜನೆಗೆ ಟೆಂಡರ್ ಆಹ್ವಾನಿಸದಂತೆ ಸಿಎಂ ಸಿದ್ದರಾಮಯ್ಯ ಆದೇಶ ಮಾಡಿದ್ದಾರೆ. 4,969 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಿಎಂ ಆಗಿದ್ದ ಬವಸರಾಜ ಬೊಮ್ಮಾಯಿ ಅವರು ಅನುಮೋದನೆ ನೀಡಿದ್ದರು. ಆದರೆ ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಎಲ್ಲ ಯೋಜನೆಗಳಿಗೂ ತಡೆ ನೀಡಲಾಗಿದೆ.
ಇದನ್ನೂ ಓದಿ:ಕಾಂಗ್ರೆಸ್​ನವರು ಬೈಯೋದು ಬೇಡ, ಬಿಜೆಪಿಯವರು ಬೊಬ್ಬೆ ಹೊಡೆಯೋದು ಬೇಡ: ಸಿಎಂ ಸಿದ್ದುಗೆ ಪ್ರತಾಪ್ ಸಿಂಹ ಸಲಹೆ​
ಯಾವುದೇ ಹೊಸ ಟೆಂಡರ್ ನೀಡದಂತೆ ಪಾಲಿಕೆ ಆಯುಕ್ತರಿಗೆ ಸಿದ್ದರಾಮಯ್ಯ ಅವರು ಮೌಖಿಕ ಆದೇಶ ಹೊರಡಿಸಿದ್ದಾರೆ. ನೂತನ ಬೆಂಗಳೂರು ಅಭಿವೃದ್ಧಿ ಸಚಿವ ನೇಮಕವಾದ ಬಳಿಕ ಟೆಂಡರ್ ಆಹ್ವಾನಿಸುವಂತೆ ಸೂಚನೆ ನೀಡಿದ್ದಾರೆ.
ಇದಿಷ್ಟೇ ಅಲ್ಲದೆ, ಮೇ 30ರ ಒಳಗೆ ಹೊಸ ಯೋಜನೆಗಳಿಗೆ ಕ್ರಿಯಾ ಯೋಜನೆ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಬೊಮ್ಮಾಯಿ ಸರ್ಕಾರ ಈ ಬಾರಿ ಅನುಮೋದಿಸಿದ ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ಯೋಜನೆಗಳಿಗೂ ಇದೀಗ ಬ್ರೇಕ್ ಬಿದ್ದಂತಾಗಿದೆ. ಆದರೆ, ತುರ್ತು ಕಾಮಗಾರಿ ಮಾತ್ರ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಖಾಸಗಿ ಫೋಟೋ, ವಿಡಿಯೋಗಳನ್ನು ಹರಿಬಿಟ್ಟವರಿಗೆ ಕಾಂಗ್ರೆಸ್​ ಶಾಸಕಿ ನಯನಾ ಮೋಟಮ್ಮ ತಿರುಗೇಟು!

ಡಿ.ಕೆ.ಶಿವಕುಮಾರ್ ಪಟ್ಟು, ಸಚಿವ ಸಂಪುಟಕ್ಕೆ ಆಯ್ಕೆ ಕಗ್ಗಂಟು: ತಡರಾತ್ರಿಯಾದರೂ ಮೂಡದ ಒಮ್ಮತ

ಉಗ್ರ ಕೃತ್ಯಕ್ಕೆ ಕಡಿವಾಣ; ಇಂದು ಭಯೋತ್ಪಾದನಾ ವಿರೋಧಿ ದಿನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 15 =
Remember me
