ಬೆಂಗಳೂರು: ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 2023-24ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಬಹುಪೌಷ್ಠಿಕಾಂಶವುಳ್ಳ  ರಾಗಿ ಮಾಲ್ಟ್ ಹೆಲ್ತ್ ಮಿಕ್ಸ್ ವಿತರಿಸುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದಾರೆ.
ಈ ವೇಳೆ ಮಾತನಾಡಿದ ಅವರು, 55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ ಮಾಡಲು ಶುರು ಮಾಡಿದ್ದೇವೆ. ಉತ್ತಮ ಪೌಷ್ಠಿಕಾಂಶ ಉತ್ತಮ ಶಿಕ್ಷಣಕ್ಕೆ ರಹದಾರಿಯಾಗಲಿದೆ. 2013 ರಲ್ಲಿ ನಮ್ಮ ಸರ್ಕಾರ ಬಂದಾಗ ನಮ್ಮಲ್ಲಿ ಹಾಲು ಉತ್ಪಾದನೆ ಹೆಚ್ಚಾಯಿತು. ಈ ಹೆಚ್ಚುವರಿ ಹಾಲಿನ ಮಾರಾಟ ಮತ್ತು ಹಾಲಿನ ಉಪ ಉತ್ಪನ್ನಗಳನ್ನು ಹೆಚ್ಚುವರಿಯಾಗಿ ಉತ್ಪಾದನೆ ಮಾಡಲು ಸಾಧ್ಯವಿರಲಿಲ್ಲ. ಹೀಗಾಗಿ ಆ ಕೂಡಲೇ ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಐದು ದಿನ ಹಾಲು ಕೊಡುವ ಕ್ಷೀರಭಾಗ್ಯ ಯೋಜನೆಯನ್ನು ಆರಂಭಿಸಿದೆ ಎಂದಿದ್ದಾರೆ.
KMF ಮೂಲಕ ಮಕ್ಕಳಿಗೆ ಹಾಲು ಹೋಗುತ್ತದೆ. ಈ ಹಾಲಿನ ಹಣವನ್ನು ಸರ್ಕಾರ KMF ಗೆ ನೀಡುತ್ತದೆ. ಆ ಮೂಲಕ KMF ಗೆ ಹಾಲು ಸರಬರಾಜು ಮಾಡುವ ರೈತರಿಗೆ ನೆರವಾಗುವ ತೀರ್ಮಾನ ಮಾಡಿದೆವು. ಇದರ ಜತೆಗೆ ಕಳೆದ ಬಜೆಟ್ ನಲ್ಲಿ ಶಾಲಾ  ಮಕ್ಕಳಿಗೆ ವಾರಕ್ಕೆ ಎರಡು ದಿನ ಮೊಟ್ಟೆ ಕೊಡುವ ಕಾರ್ಯಕ್ರಮ ಶುರು ಮಾಡಿದೆವು.ಈಗ ಅತ್ಯಂತ ಪೌಷ್ಠಿಕವಾದ ರಾಗಿ ಮಾಲ್ಟ್ ಕೊಡುವ ಕಾರ್ಯಕ್ರಮ ಶುರುವಾಗಿದೆ. ಇದರಿಂದ ಮಕ್ಕಳ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ. ಮಕ್ಕಳಿಗೆ ರಕ್ತಹೀನತೆ ಬರಲೇಬಾರದು. ಪೌಷ್ಠಿಕಾಂಶ ಕೊರತೆ ಆಗಲೇಬಾರದು. ಆಗ ಮಾತ್ರ ಮಕ್ಕಳು ಮಾನಸಿಕವಾಗಿ ಸದೃಡವಾಗಿ ಓದಿನಲ್ಲಿ ಹೆಚ್ಚು ಚುರುಕಾಗುತ್ತಾರೆ. ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳುತ್ತಾರೆ. ಶ್ರೀಮಂತರ ಮಕ್ಕಳ ರೀತಿ ಬಡವರು, ಶ್ರಮಿಕರು, ದಲಿತ, ಶೂದ್ರರ ಮಕ್ಕಳಿಗೂ ಉತ್ತಮ ಶಿಕ್ಷಣ ದೊರೆಯಬೇಕು. ಏಕೆಂದರೆ ಮಕ್ಕಳೇ ದೇಶದ, ಸಮಾಜದ ಭವಿಷ್ಯವನ್ನು ರೂಪಿಸುತ್ತಾರೆ ಎಂದು ಹೇಳಿದ್ದಾರೆ.
ಶಿಕ್ಷಣದಿಂದ ಮಾತ್ರ ಸ್ವಾಭಿಮಾನ ಹೆಚ್ಚಾಗಲು ಸಾಧ್ಯ. ಜ್ಞಾನದ ಬೆಳವಣಿಗೆ ಶಿಕ್ಷಣದಿಂದ ಸಾಧ್ಯ. ಶಿಕ್ಷಣ ಅಂದರೆ ಕೇವಲ ಓದು, ಬರಹ ಕಲಿಸುವುದಲ್ಲ. ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ವೈಚಾರಿಕತೆಯುಳ್ಳ ಶಿಕ್ಷಣ ಅಗತ್ಯ. ಉನ್ನತ ಶಿಕ್ಷಣ ಪಡೆದ ವೈದ್ಯರು, ಎಂಜಿನಿಯರ್ ಗಳೂ ಈಗ ಮೌಡ್ಯಕ್ಕೆ ಜೋತು ಬಿದ್ದಿದ್ದಾರೆ. ಬಸವಾದಿ ಶರಣರು ಮೌಡ್ಯಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದರು. ವೈಚಾರಿಕ ಶಿಕ್ಷಣದಿಂದ ಮಾತ್ರ ಮೌಡ್ಯಮುಕ್ತ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ನುಡಿದಿದ್ದಾರೆ.
ಈ ಕಾರ್ಯಕ್ರಮದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್.ಮುನಿಯಪ್ಪ, ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಸೇರಿ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
