ಚಿತ್ರದುರ್ಗ:24 ಗಂಟೆಗಳ ಒಳಗಾಗಿ ಮುಖ್ಯಮಂತ್ರಿ ಸಿದ್ದರಾಮುಯ್ಯ, ಕುರಿ ಕಾಯುತ್ತಿದ್ದ ಬಾಲಕನನ್ನು ಮರಳಿ ಶಾಲೆಗೆ ಸೇರಿಸಿದ್ದಾರೆ.
ಇಲ್ಲೊಬ್ಬ ಮಹೇಂದ್ರ ಸ್ಥಳೀಯರು ಶಾಲೆ ತೊರೆದು ಕುರಿಕಾಯುತ್ತಿದ್ದ 11ರ ಯೋಗೀಶ್ ಎಂಬ ಬಾಲಕನನ್ನು ಗಮನಿಸಿದ್ದಾರೆ. ತಕ್ಷಣವೇ ಅವರು ಮೊಬೈಲ್‍ನಲ್ಲಿ ಫೋಟೊ ತೆಗೆದು ಮುಖ್ಯಮಂತ್ರಿಗಳನ್ನು ಟ್ಯಾಗ್‍ ಮಾಡಿ ಎಕ್ಸ್ಅಲ್ಲಿ (ಹಿಂದೆ ಟ್ವಿಟರ್‍) ಪೋಸ್ಟ್ ಮಾಡಿದ್ದಾರೆ. ತಕ್ಷಣವೇ ಇದನ್ನು ಗಮನಿಸಿದ ಮುಖ್ಯಮಂತ್ರಿಗಳು ಬಾಲಕನನ್ನು ಮರಳಿ ಶಾಲೆಯ ಕಡೆ ಮುಖ ಮಾಡಿಸುವಲ್ಲಿ ಯಶಸ್ವಿ ಆಗಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ, ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಸಾಪುರ ಗ್ರಾಮದ ಮಂಜಣ್ಣ ಎಂಬುವರ ಪುತ್ರ ಯೋಗೇಶ್ ವಯಸ್ಸು (11) 2 ವರ್ಷದಿಂದ ಕುರಿ ಕಾಯುತ್ತ ಇದ್ದಾನೆ. ನಾಗರಿಕ ಜನಗಳ ಮದ್ಯ ಸ್ವಂತ ಮಗನನ್ನೇ ಅನಾಗರಿಕ ಮಾಡಲು ಹೊರಟಿರುವುದು ನೋವಿನ ಸಂಗತಿ .@osd_cmkarnataka@SWDGokpic.twitter.com/Zaw6amzKRO
— Mahendra (@Mahendr85260219)September 10, 2023

ಚಿತ್ರದುರ್ಗ ಚಳ್ಳಕೆರೆ ತಾಲೂಕಿನ ಬಸಾಪುರ ಗ್ರಾಮದ ಬಾಲಕ ಯೋಗೀಶ್, ಶಾಲೆ ಬಿಟ್ಟು ಕುರಿಕಾಯಲು ಹೋಗುತ್ತಿದ್ದ. ಕಳೆದ 2 ವರ್ಷದಿಂದ ಯೋಗೀಶ್ ಶಾಲೆಗೆ ಹೋಗದೆ ಕುರಿಕಾಯಲು ತೆರಳುತ್ತಿದ್ದ ಎನ್ನಲಾಗಿದೆ. ಈ ಕುರಿತಾಗಿ ಸಿಎಂ ಆಫ್ ಕರ್ನಾಟಕ ಎಕ್ಸ್ ಖಾತೆಯನ್ನು ಟ್ಯಾಗ್‍ ಮಾಡಿ “ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ, ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಸಾಪುರ ಗ್ರಾಮದ ಮಂಜಣ್ಣ ಎಂಬುವರ ಪುತ್ರ ಯೋಗೇಶ್ (11) 2 ವರ್ಷದಿಂದ ಕುರಿ ಕಾಯುತ್ತ ಇದ್ದಾನೆ. ನಾಗರಿಕ ಜನಗಳ ಮದ್ಯ ಸ್ವಂತ ಮಗನನ್ನೇ ಅನಾಗರಿಕ ಮಾಡಲು ಹೊರಟಿರುವುದು ನೋವಿನ ಸಂಗತಿ” ಎಂದು ಪೋಸ್ಟ್ ಮಾಡಿದ್ದರು. ಇದನ್ನು ಗಮನಿಸಿದ ಸಿಎಂ, ತಮ್ಮ ಕಾರ್ಯಾಲಯದ ಸಿಬ್ಬಂದಿ ಮೂಲಕ 23 ಗಂಟೆಗಳ ಒಳಗಾಗಿ ಬಾಲಕನನ್ನು ಶಾಲೆಗೆ ಸೇರಿಸಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ತಮ್ಮ ಬಾಲ್ಯದ ಅನುಭವವನ್ನು ಹಂಚಿಕೊಂಡಿದ್ದಾರೆ. ಅವರು ತಮ್ಮ ಪೋಸ್ಟ್‍ನಲ್ಲಿ, “ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕು ಬಸಾಪುರದ ಯೋಗೇಶ್‌ ಎಂಬ ಬಾಲಕನನ್ನು ಆತನ ತಂದೆ ತಾಯಿ ಒತ್ತಾಯಪೂರ್ವಕವಾಗಿ ಶಾಲೆ ಬಿಡಿಸಿ ಕಳೆದ 2 ವರ್ಷದಿಂದ ಕುರಿ ಮೇಯಿಸಲು ತೊಡಗಿಸಿದ್ದರು. ಈ ವಿಚಾರವು ಸ್ಥಳೀಯರೊಬ್ಬರಿಂದ ನಮ್ಮ ಗಮನಕ್ಕೆ ಬಂದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳನ್ನು ಬಾಲಕನ ಮನೆಗೆ ಕಳುಹಿಸಿ, ಆತನ ತಂದೆ ತಾಯಿಗೆ ಶಿಕ್ಷಣದ ಮಹತ್ವದ ಬಗ್ಗೆ ಅರಿವು ಮೂಡಿಸಿ, ಕೇವಲ 24 ಗಂಟೆಗಳ ಒಳಗೆ ಬಾಲಕನನ್ನು ಶಾಲೆಗೆ ಸೇರ್ಪಡೆ ಮಾಡಿಸಲಾಗಿದೆ. ಬಡತನದ ಕಾರಣಕ್ಕೆ ಶಿಕ್ಷಣದಿಂದ ವಂಚಿತನಾಗಿದ್ದ ಯೋಗೇಶ್‌ ಈಗ ಇತರ ಮಕ್ಕಳಂತೆ ಶಾಲೆಯಲ್ಲಿ ಕಲಿಯುತ್ತಾ, ನಲಿಯುತ್ತಾ ಉಜ್ವಲ ಭವಿಷ್ಯದೆಡೆಗೆ ಹೆಜ್ಜೆ ಹಾಕುತ್ತಿದ್ದಾನೆ.
ಬಾಲ್ಯದಲ್ಲಿ ನಾನು ಕೂಡ ಯೋಗೇಶ್‌ ನಂತೆ ಶಾಲೆಯಿಂದ ವಂಚಿತನಾಗಿದ್ದೆ, ರಾಜಪ್ಪ ಮೇಸ್ಟ್ರು ನನ್ನನ್ನು ನೇರವಾಗಿ 5ನೇ ತರಗತಿಗೆ ದಾಖಲಾತಿ ಮಾಡಿ ಶಿಕ್ಷಣ ಸಿಗುವಂತೆ ಮಾಡಿದ್ದರಿಂದ ಇಂದು ಮುಖ್ಯಮಂತ್ರಿಯಾಗಲು ಸಾಧ್ಯವಾಗಿದೆ. ಮರಳಿ ಶಿಕ್ಷಣದತ್ತ ಮುಖಮಾಡಿರುವ ಈ ಬಾಲಕನ ಭವಿಷ್ಯವೂ ಉಜ್ವಲವಾಗಲಿ ಎಂಬ ಹಾರೈಕೆ ನನ್ನದು. ಇಂತಹ ಸಾರ್ವಜನಿಕ ಹಿತಾಸಕ್ತಿಯ ಸಮಸ್ಯೆಗಳು ನಿಮಗೂ ಕಂಡು ಬಂದರೆ ನಮ್ಮ ಕಚೇರಿಯ @osd_cmkarnataka ಟ್ವಿಟರ್ ಖಾತೆಯನ್ನು ಸಂಪರ್ಕಿಸಿ” ಎಂದು ಬರೆದುಕೊಂಡಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕು ಬಸಾಪುರದ ಯೋಗೇಶ್‌ ಎಂಬ ಬಾಲಕನನ್ನು ಆತನ ತಂದೆ ತಾಯಿ ಒತ್ತಾಯಪೂರ್ವಕವಾಗಿ ಶಾಲೆ ಬಿಡಿಸಿ ಕಳೆದ 2 ವರ್ಷದಿಂದ ಕುರಿ ಮೇಯಿಸಲು ತೊಡಗಿಸಿದ್ದರು. ಈ ವಿಚಾರವು ಸ್ಥಳೀಯರೊಬ್ಬರಿಂದ ನಮ್ಮ ಗಮನಕ್ಕೆ ಬಂದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳನ್ನು ಬಾಲಕನ ಮನೆಗೆ ಕಳುಹಿಸಿ, ಆತನ ತಂದೆ ತಾಯಿಗೆ ಶಿಕ್ಷಣದ ಮಹತ್ವದ…https://t.co/iIjnPw5QjEpic.twitter.com/JcL6NzVIfy
— CM of Karnataka (@CMofKarnataka)September 11, 2023

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
