ಬೆಂಗಳೂರು:ಸ್ವಾತಂತ್ರ್ಯವೀರ ಸಂಗೊಳ್ಳಿರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದುಕೊಟ್ಟವರು ನಮ್ಮವರೇ. ಇಂದಿಗೂ ನಮ್ಮ ನಡುವೆ ಬ್ರಿಟಿಷರ ಏಜೆಂಟರುಗಳು ಇದ್ದಾರೆ. ಅವರು ನಮ್ಮ ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುತ್ತಾರೆ. ಇಂಥವರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಷ್ಠಾನ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಡೆದ 226ನೇ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಜಯಂತೋತ್ಸವದಲ್ಲಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.
ಇದನ್ನೂ ಓದಿ:77ನೇ ಸ್ವಾತಂತ್ರ್ಯೋತ್ಸವ; ಇಂದಿನಿಂದ ಮೆಟ್ರೋ ನಿಲ್ದಾಣಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ
ಆಗಸ್ಟ್ 15 ದೇಶದ ಸ್ವಾತಂತ್ರ್ಯ ದಿನ. ಇದೇ ದಿನ ಸಂಗೊಳ್ಳಿರಾಯಣ್ಣ ಅವರ ಜನ್ಮ ದಿನವೂ ಹೌದು. ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಅವರ ಆಶಯವೂ ಇದೇ ಆಗಿತ್ತು. ಆಗಸ್ಟ್ 15ಕ್ಕೆ ರಾಯಣ್ಣರ ಹುಟ್ಟು ದಿನವಾದರೆ, ಜನವರಿ 26 ಬ್ರಿಟಿಷರು ರಾಯಣ್ಣರನ್ನು ಗಲ್ಲಿಗೇರಿಸಿದ ದಿನ. ಈ ಎರಡೂ ದಿನಗಳೂ ದೇಶದ ಚರಿತ್ರೆಯಲ್ಲಿ ಪ್ರಮುಖವಾದ ದಿನ ಎಂದರು.
ರಾಯಣ್ಣ ಹೆಸರಿನಲ್ಲಿ ಸೈನಿಕ ಶಾಲೆ, ಸಂಗೊಳ್ಳಿ ಹಾಗೂ ರಾಯಣ್ಣರನ್ನು ಗಲ್ಲಿಗೆ ಏರಿಸಿದ ಸ್ಥಳಗಳ ಅಭಿವೃದ್ಧಿಗಾಗಿ 280 ಕೋಟಿ ರೂ. ಅನುದಾನವನ್ನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ನೀಡಿದ್ದೆ. ಸದ್ಯದಲ್ಲೇ ನಾನೇ ಸೈನಿಕ ಶಾಲೆಯನ್ನು ಉದ್ಘಾಟಿಸುತ್ತೇನೆ ಎಂದರು.
ಸರ್ವರಿಗೂ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ, ಧಾರ್ಮಿಕ ಸ್ವಾತಂತ್ರ್ಯ ಸಿಕ್ಕರೆ ಮಾತ್ರ ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮರ ತ್ಯಾಗಕ್ಕೆ ಬೆಲೆ ಬರುತ್ತದೆ. ಪ್ರಜಾಪ್ರಭುತ್ವ ದೇಶ ನಿರ್ಮಿಸಬೇಕು ಎನ್ನುವುದು ಗೆರಿಲ್ಲಾ ಹೋರಾಟಗಾರ ಸಂಗೊಳ್ಳಿರಾಯಣ್ಣರ ಆಶಯವಾಗಿತ್ತು. ಪ್ರಜಾಪ್ರಭುತ್ವ ಗಟ್ಟಿಗೊಳಿಸಿಕೊಳ್ಳುವುದು ಎಂದರೆ ನಮ್ಮ ಸಂವಿಧಾನವನ್ನು ಕಾಪಾಡಿಕೊಳ್ಳುವುದೇ ಆಗಿದೆ. ಈಗ ನಮ್ಮ ಸಂವಿಧಾನವನ್ನು ಬದಲಾಯಿಸುತ್ತೇವೆ ಎನ್ನುವ ದುಷ್ಟ ಶಕ್ತಿಗಳನ್ನು ಬೆಳೆಯಲು ಬಿಡಬಾರದು ಎಂದು ಹೇಳಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಿಡುಮಾಮಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಗೋವಿಂದರಾಜ್, ಮಾಜಿ ಸಚಿವ ಎಚ್.ಎಂ.ರೇವಣ್ಣ ಮತ್ತಿತರರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 13 =
Remember me
