ಬೆಂಗಳೂರು:ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದು, ಕೈ ಪಾಳಯದಲ್ಲಿ ತಲ್ಲಣವನ್ನುಂಟು ಮಾಡಿದೆ. ಇತ್ತ ರಾಜ್ಯಪಾಲರ ನಡೆಗೆ ಕಾಂಗ್ರೆಸ್​ ನಾಯಕರು ಕೌಂಟರ್​ ಕೊಡಲು ಸಜ್ಜಾಗಿದ್ದು, ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.
ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ಸಂಬಂಧ ಸಿಎಂ ಸಿದ್ದರಾಮಯ್ಯ ಅಡ್ವೊಕೇಟ್ ಜನರಲ್ ಜತೆ ಸಮಾಲೋಚನೆ ನಡೆಸುತ್ತಿದ್ದು, ಇದರ ಭಾಗವಾಗಿ ಕಾನೂನು ಸಲಹೆಗಾರ ಪೊನ್ನಣ್ಣ ಜತೆ ಸಭೆ ನಡೆಸಿದ್ದಾರೆ. ಮುಂದೆ ಯಾವ ರೀತಿ ಹೋರಾಡಬೇಕು ಎಂಬ ಕುರಿತು ಸುದೀರ್ಘವಾಗಿ ಚರ್ಚೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಆತ ಅನುಸರಿಸಿದರೆ… ಇಶಾನ್​ ಕಿಶನ್​ ಕಮ್​ಬ್ಯಾಕ್​ ಕುರಿತು ಜಯ್​​ ಷಾ ಹೇಳಿದ್ದಿಷ್ಟು
ರಾಜ್ಯಪಾಲರ ಪ್ರಾಸಿಕ್ಯೂಷನ್​ ಆದೇಶದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಲು ಸಿಎಂ ಪರ ವಕೀಲರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಸೋಮವಾರವೇ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲು ಯೋಜನೆ ಹಾಕಿಕೊಂಡಿದ್ದಾರೆ. ರಾಜ್ಯಪಾಲರ ಅನುಮತಿ ವಿರುದ್ಧ ಹೈಕೋರ್ಟ್​ನಲ್ಲಿ ಪ್ರಶ್ನಿಸಲು ತೀರ್ಮಾನ ಮಾಡಿದ್ದು, ಕಾನೂನು ಸಲಹೆಯಂತೆ ನ್ಯಾಯಾಲಯದಲ್ಲಿ‌ ಪ್ರಶ್ನಿಸಲಿದ್ದಾರೆ.
ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಲು ನಿರ್ಧಾರ ಮಾಡುತ್ತಿದ್ದಂತೆಯೇ ದೂರು ದಾರ ಪ್ರದೀಪ್ ಕೇವಿಯಟ್ ಸಲ್ಲಿಸಲು ಮುಂದಾಗಿದ್ದಾರೆ. ತಮ್ಮ ವಾದ ಆಲಿಸದೇ ಈ ಕೇಸ್‌ನಲ್ಲಿ ಮಧ್ಯಂತರ ಆದೇಶ ನೀಡದಂತೆ ಕೇವಿಯಟ್ ಸಲ್ಲಿಸಲು ಸಜ್ಜಾಗಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಅವರ ವಾದವೇ ಬೇರೆಯಾಗಿದೆ. ಪ್ರಕರಣ ಹೊರಬಂದ ದಿನದಿಂದಲೂ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಕೊಡುತ್ತಾ ಬಂದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 3 =
Remember me
