ಬೆಂಗಳೂರು:ಮುಡಾ ಅಕ್ರಮವಾಗಿ ಸ್ವಾದೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ ಬದಲಿ ಭೂಮಿ ನೀಡುವಂತೆ ನನ್ನ ಪತ್ನಿ ಸಲ್ಲಿಸಿದ್ದ ಅರ್ಜಿಯಲ್ಲಿ ನಾಲ್ಕೈದು ಪದಗಳಿಗೆ ವೈಟ್ನರ್‌ ಹೆಚ್ಚಿದನ್ನೇ ಮಹಾನ್‌ ಅಪಾರಾಧವೆಂಬಂತೆ ಗಂಟಲು ಹರಿದುಕೊಂಡ ಬಿಜೆಪಿ – ಜೆಡಿಎಸ್‌ ನಾಯಕರೇ, ವೈಟ್ನರ್‌ ಹಿಂದಿರುವ ಅಕ್ಷರಗಳೇನು ಎಂಬುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ, ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ ಎಂದು ವಿಪಕ್ಷ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ:ರಾಧೆ-ಕೃಷ್ಣ ವೇಷದಲ್ಲಿ ಗಮನಸೆಳೆದ ಮಕ್ಕಳು
ನನ್ನ ಪತ್ನಿ ಬದಲೀ ಭೂಮಿ ಕೇಳಿದ್ದು ತನ್ನದೇ ಜಮೀನನ್ನು ಮುಡಾ ವಶಕ್ಕೆ ಪಡೆದು ಅಭಿವೃದ್ಧಿಪಡಿಸಲಾದ ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ ಪ್ರಾಧಿಕಾರವು ಅಭಿವೃದ್ಧಿಪಡಿಸಿದ ಸಮಾನಾಂತರ ಬಡಾವಣೆಯಲ್ಲಿ. ಅಲ್ಲಿ ನಿವೇಶನಗಳು ಲಭ್ಯವಿರದ ಕಾರಣಕ್ಕೆ “ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ” ಎಂಬ ನಾಲ್ಕೈದು ಪದಗಳಿಗೆ ವೈಟ್ನರ್‌ ಹಾಕಿ, ಪ್ರಾಧಿಕಾರ ಅಭಿವೃದ್ಧಿ ಪಡಿಸಿದ ಸಮಾನಂತರ ಬಡಾವಣೆಯಲ್ಲಿ ನಿವೇಶನ ನೀಡಬೇಕೆಂಬ ಮನವಿ ಮಾಡಿದ್ದಾರೆ. ಇದರಲ್ಲಿ ಟಿಪ್ಪಣಿಯೂ ಇಲ್ಲ, ಆದೇಶವೂ ಇಲ್ಲ, ಅಪ್ಪಣೆಯೂ ಇಲ್ಲ. ತನಗೆ ಸೇರಿದ ಭೂಮಿಯಲ್ಲೇ ನಿವೇಶನ ಕೊಡಿ ಎಂಬ ಮನವಿ ಅಷ್ಟೆ ಇದೆ ಎಂದರು.
ಮುಡಾ ಅಕ್ರಮವಾಗಿ ಸ್ವಾದೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ ಬದಲಿ ಭೂಮಿ ನೀಡುವಂತೆ ನನ್ನ ಪತ್ನಿ ಸಲ್ಲಿಸಿದ್ದ ಅರ್ಜಿಯಲ್ಲಿ ನಾಲ್ಕೈದು ಪದಗಳಿಗೆ ವೈಟ್ನರ್‌ ಹೆಚ್ಚಿದನ್ನೇ ಮಹಾನ್‌ ಅಪಾರಾಧವೆಂಬಂತೆ ಗಂಟಲು ಹರಿದುಕೊಂಡ ಬಿಜೆಪಿ – ಜೆಡಿಎಸ್‌ ನಾಯಕರೇ, ವೈಟ್ನರ್‌ ಹಿಂದಿರುವ ಅಕ್ಷರಗಳೇನು ಎಂಬುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ,…pic.twitter.com/NMQfgViKNp
— Siddaramaiah (@siddaramaiah)August 26, 2024

“ವೈಟ್ನರ್‌ ಹಚ್ಚಿ ಕಪ್ಪು ಚುಕ್ಕೆ ಅಳಿಸಿಕೊಳ್ಳಲು ಸಾಧ್ಯವಿಲ್ಲ, ಸಿಎಂ ಪತ್ನಿ ನಿವೇಶನ ಕೇಳಿದ್ದು ವಿಜಯನಗರದಲ್ಲಿ, ಮುಡಾ ವಿಚಾರ ಚರ್ಚೆಗೆ ಬಂದ ನಂತರ ಸಿದ್ದರಾಮಯ್ಯ ಅವರ ಪರವಾಗಿ ಯಾರೋ ಹೋಗಿ ವೈಟ್ನರ್‌ ಹಚ್ಚಿ ಬಂದಿದ್ದಾರೆಂದು” ಬೊಬ್ಬೆ ಹಾಕುತ್ತಿದ್ದ ಸ್ವಯಂ ಘೋಷಿತ ಕಾನೂನು ಪಂಡಿತರು ಈಗೇನು ಹೇಳುತ್ತಾರೆ? ಆತುರದಲ್ಲಿ ಮೂಗು ಕತ್ತರಿಸಿಕೊಂಡು, ರಾತ್ರಿಯೆಲ್ಲ ಕನ್ನಡಿ ಮುಂದೆ ನಿಂತು ಕಣ್ಣೀರು ಹಾಕಿದ್ದರಂತೆ ಹಾಗಾಯಿತು ಕೆಲವು ಅತಿ ಬುದ್ದಿವಂತರ ಕತೆ ಎಂದು ಹೇಳಿದರು.
ಇದನ್ನೂ ಓದಿ:ಸೆ.2 ರಿಂದ ಉಪ್ಪಲದಿನ್ನಿ ಸಂಗಮೇಶ್ವರ ಜಾತ್ರೆ
ಕಪೋಲ ಕಲ್ಪಿತ ಕಟ್ಟುಕತೆಗಳ ಮೂಲಕ ನನ್ನನ್ನು ಹಾಗೂ ನನ್ನ ಕುಟುಂಬವನ್ನು ವಿನಾಃ ಕಾರಣ ಅಪರಾಧಿಗಳಂತೆ ಬಿಂಬಿಸಿ ಬಾಯಿಗೆ ಬಂದಂತೆ ಮಾತನಾಡಿರುವ ಬಿಜೆಪಿ – ಜೆಡಿಎಸ್‌ ಪಕ್ಷಗಳ ವಿವೇಕ ಶೂನ್ಯ ನಾಯಕರು ಇಂದು ಜನರೆದುರು ಬೆತ್ತಲಾಗಿದ್ದಾರೆ. ಸತ್ಯ ಹಾಗೆಯೇ, ಅರಿವಿಗೆ ಬರುವುದು ಸ್ವಲ್ಪ ತಡವಾಗಬಹುದು, ಆದರೆ ಅಂತಿಮ ಗೆಲುವು ಸತ್ಯದ್ದೇ ಆಗಿರುತ್ತದೆ ಎಂದು ಹೇಳಿದರು.
ಇವರೇ ನೋಡಿ ಆಲ್ಕೋಹಾಲ್​ ಮುಟ್ಟದ ಟೀಮ್ ಇಂಡಿಯಾದ ಮೂವರು ಸ್ಟಾರ್​ ಕ್ರಿಕೆಟಿಗರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − one =
Remember me
