ಆನೇಕಲ್​:ನಕಲಿ ನೋಟುಗಳನ್ನು ಪ್ರಿಂಟ್ ಮಾಡಿ ಚಲಾವಣೆ ಮಾಡುತ್ತಿದ್ದ ಜಾಲವನ್ನು ಹೆಡೆಮುರಿ ಕಟ್ಟುವಲ್ಲಿ ಸೂರ್ಯನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ಖತರ್ನಾಕ್ ಅಸಾಮಿಗಳು ಕಲರ್ ಪ್ರಿಂಟಿಂಗ್ ಮಷಿನ್ ಬಳಸಿಕೊಂಡು 100, 200 ಹಾಗೂ 500 ರೂಪಾಯಿ ಮುಖಬೆಲೆಯ ನಕಲಿ ನೋಟುಗಳನ್ನು ಪ್ರಿಂಟ್ ಮಾಡಿ ಜನಸಂದಣಿಯಿಂದ ಕೂಡಿರುವ ಸಂತೆ, ಅಂಗಡಿ ಸೇರಿದಂತೆ ಹಲವು ಕಡೆಗಳಲ್ಲಿ ಚಲಾವಣೆ ಮಾಡುತ್ತಿದ್ದರು.ಇದನ್ನೂ ಓದಿರಿಪ್ರೀತಿಸಿ ಮದ್ವೆ ಮಾಡಿಕೊಂಡಾಗ ಅಡ್ಡಿಯಾಗದ ಆ ಸಮಸ್ಯೆ ವರ್ಷದ ಬಳಿಕ ದೊಡ್ಡದಾಯ್ತೆ..? ಗಂಡನ ಮನೆ ಬಾಗಿಲಲ್ಲಿ ಕಣ್ಣೀರಿಟ್ಟ ಪತ್ನಿ
ನಕಲಿ ನೋಟುಗಳು ಚಲಾವಣೆಯಾಗುತ್ತಿರುವ ಬಗ್ಗೆ ಸೂರ್ಯಸಿಟಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ವ್ಯಾಪಾರಸ್ಥರು ಅನುಮಾನ ವ್ಯಕ್ತಪಡಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯ ಪ್ರವೃತ್ತರಾದ ಪೊಲೀಸರ ಕೈಗೆ, ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಮೂಲದ ಸುರೇಶ್ ಅಲಿಯಾಸ್ ನಂಜಪ್ಪ ಹಾಗೂ ನರೇಶ್ ಅಲಿಯಾಸ್ ಜೋಗರಾಂ ಎಂಬ ಖತರ್ನಾಕ್​ ಅಸಾಮಿಗಳು ಸಿಕ್ಕಿಬಿದ್ದಿದ್ದಾರೆ. ಇವರನ್ನು ಅಂಗಡಿಯೊಂದರಲ್ಲಿ ನಕಲಿ ನೋಟುಗಳನ್ನು ಚಲಾವಣೆ ಮಾಡುತ್ತಿರುವಾಗಲೇ ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ 100, 200 ಹಾಗೂ 500 ರೂಪಾಯಿ ಮುಖಬೆಲೆಯ ಸುಮಾರು 6,000 ನಕಲಿ ನೋಟುಗಳು ಸೇರಿದಂತೆ ನಕಲಿ ನೋಟು ತಯಾರು ಮಾಡುತ್ತಿದ್ದ ಪ್ರಿಂಟಿಂಗ್ ಮಷಿನ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರೀತಿಸಿ ಮದ್ವೆ ಮಾಡಿಕೊಂಡಾಗ ಅಡ್ಡಿಯಾಗದ ಆ ಸಮಸ್ಯೆ ವರ್ಷದ ಬಳಿಕ ದೊಡ್ಡದಾಯ್ತೆ..? ಗಂಡನ ಮನೆ ಬಾಗಿಲಲ್ಲಿ ಕಣ್ಣೀರಿಟ್ಟ ಪತ್ನಿ

ಎಲ್ಲೇ ಬರ ಬಂದರೂ, ಯಾವ ಕೆರೆ ಬತ್ತಿದರೂ ಗೌಡರ ಕಣ್ಣಲ್ಲಿ ಮಾತ್ರ ನೀರು ಬತ್ತಲ್ಲ…

ಅಣ್ಣ-ತಮ್ಮನಿಂದ ನಿರಂತರ ಅತ್ಯಾಚಾರ: ಲವ್ ಜಿಹಾದ್​ಗೆ ಸಿಲುಕಿ ನರಳಾಡುತ್ತಿದ್ದಾಳೆ ಬೆಂಗಳೂರಿನ ಯುವತಿ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:6 + 3 =
Remember me
