ಬೆಂಗಳೂರು:ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಲು ಅಧ್ಯಯನ ನಡೆಸಿ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ನೀಡಲು ಡಾ.ಮೋಹನ್ ಆಳ್ವ ನೇತೃತ್ವದಲ್ಲಿ ಸರ್ಕಾರ ಸಮಿತಿ ರಚಿಸಿದೆ. ಜತೆಗೆ ಕೇಶವ ಬಂಗೇರ ನಾರಾಯಣಗುರು, ಡಾ. ಮಾಧವ ಕೊಣಾಜೆ ಮತ್ತು ಮಂಗಳೂರಿನ ಗಣೇಶ್ ಅ. ಸಂಕಮಾರೆ ಅವರನ್ನು ಸಮಿತಿ ಸದಸ್ಯರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕೆಂದು ಗಣ್ಯರು, ಸಂಘ ಸಂಸ್ಥೆಗಳು, ಸಾರ್ವಜನಿಕರಿಂದ ಮನವಿಗಳು ಸ್ವೀಕೃತವಾದ ಹಿನ್ನೆಲೆಯಲ್ಲಿ ತುಳು ಭಾಷೆಯ ಕುರಿತಂತೆ ಹಾಲಿ ಇರುವ ನಿಯಮಗಳು, ಕಾನೂನಿನ ಚೌಕಟ್ಟಿನಲ್ಲಿ ಈ ಕುರಿತು ಆಗುವ ಸಾಧಕ-ಬಾಧಕಗಳ ಬಗ್ಗೆ ಅಧ್ಯಯನ ನಡೆಸಲು ತಜ್ಞರ ಸಮಿತಿಯನ್ನು ರಚಿಸಲಾಗಿದೆ.
ಆ ಸಮಿತಿಯವರು ಸೂಕ್ತ ಶಿಫಾರಸ್ಸಿನೊಂದಿಗೆ ವಾಸ್ತವಾಂಶದಿಂದ ಕೂಡಿದ ವರದಿ ಸಲ್ಲಿಸುವಂತೆ ಕನ್ನಡ ಮತ್ತು ಸಂಸ್ಕತಿ ಇಲಾಖೆ ನಿರ್ದೇಶಕರು ಆದೇಶದಲ್ಲಿ ತಿಳಿಸಿದ್ದಾರೆ. ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಕೆ. ಸುನೀಲ್‍ಕುಮಾರ್ ಅವರು ಶೀಘ್ರವೇ ಅಧ್ಯಯನ ವರದಿ ನೀಡಲು ಸಮಿತಿಗೆ ಸೂಚಿಸಿರುವುದಾಗಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಸಾವಿರಾರು ಕೋಟಿ ರೂ. ವಂಚಿಸಿದ ಮಲ್ಯ-ಮೋದಿಯನ್ನೇ ಏನೂ ಮಾಡಿಲ್ಲ; 3-4 ಕೋಟಿ ಮೋಸ ಮಾಡಿದ ನನ್ನ ಚಿಂತೆ ನಿಮಗ್ಯಾಕೆ?
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × 1 =
Remember me
