ಬೆಂಗಳೂರು:ರಾಜ್ಯ ಸರ್ಕಾರ ಜಲಾಶಯ ಸುರಕ್ಷತಾ ಸಮಿತಿ ರಚಿಸಿ ಎಲ್ಲ ಜಲಾಶಯಗಳ ವರದಿ ಕೇಳಿದೆ. ತುಂಗಭದ್ರಾ ಆಣೆಕಟ್ಟಿನ ಕ್ರೆಸ್ಟ್ ಗೇಟ್ ಚೈನ್ ಹರಿದ ಬೆನ್ನಲ್ಲೇ ಸರ್ಕಾರ ಈ ಕ್ರಮ ಕೈಗೊಂಡಿದೆ. ಜಲಸಂಪನ್ಮೂಲ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ವಿಧಾನಸೌಧದಲ್ಲಿ ಈ ಕುರಿತು ಮಾಹಿತಿ ನೀಡಿದರು. ಎಲ್ಲ ಜಲಾಶಯಗಳ ಸುರಕ್ಷತೆ ಕುರಿತು ತಜ್ಞರನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ಈ ಸಮಿತಿಗೆ 15 ದಿನದಿಂದ 1 ತಿಂಗಳ ಒಳಗಾಗಿ ವರದಿ ನೀಡಲು ಸೂಚಿಸಲಾಗಿದೆ ಎಂದರು. ತುಂಗಭದ್ರಾ ಅಣೆಕಟ್ಟಿನ ಕ್ರೆಸ್ಟ್ ಗೇಟ್ ದುರಸ್ತಿ ಕಾಮಗಾರಿ ಆರಂಭಗೊಂಡಿದ್ದು, ದುರಸ್ತಿಗೆ ನೀರಿನ ಮಟ್ಟವನ್ನು ಒಂದು ಮಟ್ಟಕ್ಕೆ ಇಳಿಸುವ ಅಗತ್ಯವಿದೆ, ನಾನು ಜಲಾಶಯಕ್ಕೆ ಭೇಟಿ ನೀಡಿದ್ದೇನೆ. ದುರಸ್ತಿ ಕಾಮಗಾರಿಗೆ ನೆರವು ನೀಡುವಂತೆ ಜಿಂದಾಲ್ ಕಂಪನಿ ಹಾಗೂ ಇತರ ರೊಂದಿಗೆ ಮಾತನಾಡಿದ್ದೇನೆ ಎಂದರು.
ಈ ಸಮಸ್ಯೆ ಸರಿಪಡಿಸಲು ತಂತ್ರಜ್ಞರು 24 ಗಂಟೆಯೂ ಕೆಲಸ ಮಾಡುತ್ತಿದ್ದಾರೆ. ನಾನು ಶೀಘ್ರದಲ್ಲೇ ಕೆಲಸದ ಸ್ಥಿತಿಯನ್ನು ಹಂಚಿಕೊಳ್ಳುತ್ತೇನೆ ಎಂದು ತಿಳಿಸಿದರು.
ಘಟನೆಗೆ ಯಾರನ್ನಾದರೂ ಹೊಣೆಗಾರರನ್ನಾಗಿ ಮಾಡುತ್ತೀರಾ ಎಂಬ ಪ್ರಶ್ನೆಗೆ, ಅಣೆಕಟ್ಟೆಯ ಸುರಕ್ಷತೆ ಮತ್ತು ನಮ್ಮ ರೈತರ ಕಲ್ಯಾಣವನ್ನು ಖಚಿತಪಡಿಸುವುದು ನಮ್ಮ ಆದ್ಯತೆಯಾಗಿದೆ. ನಾವು ಪ್ರಸ್ತುತ ಸಮಸ್ಯೆಯನ್ನು ಸರಿಪಡಿಸಲು ಗಮನಹರಿಸುತ್ತಿದ್ದೇವೆ ಮತ್ತು ಘಟನೆಯ ಕಾರಣಗಳನ್ನು ನಂತರ ನೋಡುತ್ತೇವೆ. ರೈತರಿಗೆ ನೀರು ಉಳಿಸಲು ಕ್ರೆಸ್ಟ್ ಗೇಟ್ ಮುಚ್ಚಲು ಪ್ರಯತ್ನಿಸುತ್ತಿದ್ದೇವೆ. ಆದರೆ ಅಣೆಕಟ್ಟಿನಲ್ಲಿ ನೀರಿನ ಮಟ್ಟ ಒಂದು ಮಟ್ಟಕ್ಕೆ ಇಳಿಯದ ಹೊರತು ಈ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.
ಕೆಆರ್​ಎಸ್ ಅಣೆಕಟ್ಟಿನಲ್ಲೂ ಸಮಸ್ಯೆ ಇದೆ ಎಂಬ ಕುಮಾರಸ್ವಾಮಿ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕುಮಾರಸ್ವಾಮಿ ಅವರಿಗೆ ರಾಜಕೀಯ ಮಾಡುವುದನ್ನು ಬಿಟ್ಟು ಬೇರೇನೂ ಗೊತ್ತಿಲ್ಲ. ಅವರು ಕೆಆರ್​ಎಸ್​ನಲ್ಲಿ ಯಾವ ಸಮಸ್ಯೆ ನೋಡಿದ್ದಾರೋ ಗೊತ್ತಿಲ್ಲ. ರೈತರಲ್ಲಿ ಭಯ ಹುಟ್ಟಿಸುವ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದರು.
ತಜ್ಞರ ಸಮಿತಿ ಭೇಟಿ ನೀಡಿದೆ:ಈಗಾಗಲೇ ತಜ್ಞರ ಸಮಿತಿ ಭೇಟಿ ನೀಡಿ ಕ್ರಮ ಕೈಗೊಂಡಿದೆ. ಆಂಧ್ರಪ್ರದೇಶ, ತೆಲಂಗಾಣದ ಶಾಸಕರು, ರಾಜ್ಯ ವಿಧಾನಸಭೆ ಪ್ರತಿಪಕ್ಷದ ನಾಯಕರು ಮತ್ತಿತರರು ಭೇಟಿ ನೀಡಿದ್ದಾರೆ. ಕೇಂದ್ರ ನೀರಾವರಿ ಸಚಿವರು ಹಾಗೂ ಕೇಂದ್ರ ಸಚಿವ ವಿ.ಸೋಮಣ್ಣ ಅವರ ಜತೆಯೂ ಮಾಹಿತಿ ಹಂಚಿಕೊಂಡಿದ್ದೇನೆ ಎಂದು ತಿಳಿಸಿದರು.
ನಮಗೆ ನೀರು ಉಳಿಸುವುದು ಮುಖ್ಯವೇ ಹೊರತು ಬ್ಲೇಮ್ೇಮ್ ಅಲ್ಲ. ಪ್ರತಿಪಕ್ಷದವರು ಸಿಎಂ ಹಾಗೂ ನನ್ನನ್ನು ಬೈಯಲಿ ಆದರೆ, ನಮ್ಮ ಆದ್ಯತೆ ನೀರು ಉಳಿಸುವುದು, ರೈತರನ್ನು ರಕ್ಷಿಸುವುದೇ ಆಗಿದೆಯೇ ಹೊರತು ಬ್ಲೇಮ್ೇಮ್ ಅಲ್ಲ.
-ಡಿ.ಕೆ.ಶಿವಕುಮಾರ್, ಡಿಸಿಎಂ
ಆಗಸ್ಟ್​ 13ರಿಂದ 15ರವರೆಗೆ ಪೀಣ್ಯ ಇಂಡಸ್ಟ್ರೀ-ನಾಗಸಂದ್ರ ನಡುವೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:five × three =
Remember me
