ಬೆಂಗಳೂರು:ಹೊರ ರಾಜ್ಯ ಹಾಗೂ ವಿದೇಶಗಳಿಂದ ರಾಜ್ಯಕ್ಕೆ ಬರುವವರು ಕಡ್ಡಾಯ ಕ್ವಾರಂಟೈನ್​ಗೆ ಒಳಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜತೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ನೇತೃತ್ವದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಬೇರೆ ದೇಶ ಹಾಗೂ ರಾಜ್ಯದಿಂದ ಕನ್ನಡಿಗರು ವಾಪಸ್ ಬರುತ್ತಿದ್ದು ಅವರನ್ನು ಯಾವ ರೀತಿ ಕ್ವಾರಂಟೈನ್ ಮಾಡಬೇಕು ಎನ್ನುವ ಬಗ್ಗೆ ಸಿಎಂ ಚರ್ಚೆ ನಡೆಸಿದರು.
ಇದನ್ನೂ ಓದಿ;ಮೌಂಟ್​ ಎವರೆಸ್ಟ್​ ಬುಡಕ್ಕೂ ಬಂತು ಚೀನಾ ಗಡಿ ತಂಟೆ ವಿವಾದ
ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳು*ಹೊರ ರಾಜ್ಯದಿಂದ ಬರುವ ಕನ್ನಡಿಗರು‌ ನಿರ್ದಿಷ್ಟ ವ್ಯವಸ್ಥೆಯಡಿ ಬರುವಂತೆ ಮಾಡಬೇಕು*ರಾಜ್ಯಕ್ಕೆ ಬರುವವರು ಕಡ್ಡಾಯವಾಗಿ ಆನ್​ಲೈನ್​ನಲ್ಲಿ ನೋಂದಣಿ ಮಾಡಿಕೊಳ್ಳಬೇಕು.*ಎಲ್ಲಿಗೆ ಬರುತ್ತೇವೆ ಮತ್ತು ಯಾವಾಗ ಬರುತ್ತೇವೆ ಎನ್ನುವುದನ್ನು ತಿಳಿಸಬೇಕು.*ರಾಜ್ಯದಿಂದ ಅನಿರ್ವಾಯವಾಗಿ ಹೊರ ಹೋಗಿ ಸಂಕಷ್ಟದಲ್ಲಿ ಸಿಲುಕಿದವರಾಗಿರಬೇಕು.*ನೋಂದಣಿ ಮಾಡಿಕೊಂಡವರನ್ನು ಕ್ವಾರಂಟೈನ್ ಸೌಲಭ್ಯಕ್ಕೆ‌ ಅನುಗುಣವಾಗಿ ಕರೆಯಿಸಿಕೊಳ್ಳಲಾಗುವುದು*ಬಂದ ತಕ್ಷಣ ಯಾರೂ ಕೂಡ ಅವರ ಊರಿಗೆ ಹೋಗುವಂತಿಲ್ಲ, 14 ದಿನ‌ ಕ್ವಾರಂಟೈನ್ ಆಗಲೇಬೇಕು. ಇದಕ್ಕೆ ಸಿದ್ಧವಿದ್ದವರು ಮಾತ್ರ ನೋಂದಣಿ‌ ಮಾಡಿಕೊಳ್ಳಬೇಕು*ಹೊರ ರಾಜ್ಯದಿಂದ ರೈಲುಗಳಲ್ಲಿ ಬರುವವರಿಗೆ ರಾಜ್ಯ ಸರ್ಕಾರವೇ ವೆಚ್ಚ ಭರಿಸುತ್ತದೆ.*ಬೇರೆ ರಾಜ್ಯದಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದರೂ ಇಲ್ಲಿಯೂ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಿಸಲೇಬೇಕು*ಬೇರೆ ರಾಜ್ಯದಲ್ಲಿ ಮೃತರಾದರೆ ಶವಗಳನ್ನು ರಾಜ್ಯಕ್ಕೆ ತರುವಂತಿಲ್ಲ. ಎಲ್ಲಿ ಮೃತರಾಗಿರುತ್ತಾರೋ ಅಲ್ಲಿಯೇ ಅಂತ್ಯ ಸಂಸ್ಕಾರ ಮಾಡಬೇಕು*ರಾಜ್ಯದಲ್ಲಿ ತೀರಿಕೊಂಡರೆ ತೀರಿಕೊಂಡ ಸ್ಥಳದಲ್ಲಿಯೇ ಅಂತ್ಯಕ್ರಿಯೆ ಮಾಡಬೇಕು
ಇದನ್ನೂ ಓದಿ;ಬೆಂಗಳೂರಿನಲ್ಲಿ ಆಸ್ಪತ್ರೆಗಳಿಗೆ ಅಲೆದಾಡಿದ ಕರೊನಾ ಶಂಕಿತ, ಸೋಂಕು ದೃಢವಾದರೆ ಕಾದಿದೆ ಅಪಾಯ
ಸೋಮವಾರ (ಮೇ 11) ಪ್ರಧಾನಿನರೇಂದ್ರ ಮೋದಿ ಜತೆ ವಿಡಿಯೋ ಕಾನ್ಫರೆನ್ಸ್ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ನಿಲುವು ಏನು ಇರಬೇಕು ಎಂಬ ಬಗ್ಗೆ ಚರ್ಚೆ ನಡೆಸಿದ್ದೇವೆ. ವಿದೇಶ ಹಾಗೂ ಬೇರೆ ರಾಜ್ಯದಿಂದಲೂ ಜನರು ಬರುತ್ತಿದ್ದಾರೆ. ಅವರ ಬಗ್ಗೆ ಏನು ನಿರ್ಧಾರ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಚರ್ಚೆ ಮಾಡಿದ್ದೇವೆ. ಅವರನ್ನು ಇನ್​ಸ್ಟಿಟ್ಯೂಟ್​ ಕ್ವಾರಂಟೈನ್ ಮಾಡಲು ನಿರ್ಧರಿಸಲಾಗಿದೆ. ಹೊರ ರಾಜ್ಯದಿಂದ ಬರುವವರಿಗೆ ಅವರ ಜಿಲ್ಲೆಯಲ್ಲೆ ಕ್ವಾರಂಟೈನ್ ಮಾಡಲಾಗುವುದು. ಬೇರೆ ರಾಜ್ಯದಿಂದ ಬರುವವರಿಗೆ ರೈಲಿನ ವ್ಯವಸ್ಥೆ ಮಾಡಲಾಗಿದೆ. ಆ ರಾಜ್ಯದಲ್ಲಿ ತಪಾಸಣೆ ಮಾಡಿಸಿದ್ದರೂ ಇಲ್ಲಿಯೂ ತಪಾಸಣೆ ಮಾಡಿಸಲೇಬೇಕು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿಕೆ ನೀಡಿದ್ದಾರೆ.
ಕಾರ್ಮಿಕರನ್ನು ಬೆಂಗಳೂರಿಗೆ ಕರೆತರಲು ಜಿಲ್ಲೆಗಳಿಂದ ಹೊರಡುತ್ತಿವೆ ವಿಶೇಷ ಬಸ್​ಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 8 =
Remember me
