ಬೆಂಗಳೂರು:ಗ್ರಾಮಗಳ ಕುಡಿಯುವ ನೀರಿನ ಪರಿಸ್ಥಿತಿ ಅವಲೋಕಿಸಲು ಜಿ.ಪಂ.ಸಿಇಒಗಳು ಕಾಲ ಕಾಲಕ್ಕೆ ಪಿಡಿಒಗಳ ಸಭೆ ನಡೆಸಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದರು.
ಪ್ರತಿ ತಿಂಗಳ 2ನೇ ದಿನಾಂಕದಂದು ನಡೆಯುವ ಜಿ.ಪಂ.ಸಿಇಒಗಳ ಮಾಸಿಕ ವಿಡಿಯೋ ಕಾನ್ಪರೆನ್ಸ್ ವಿಮರ್ಶಾ ಸಭೆಯಲ್ಲಿ ಮಾತನಾಡಿದರು.ಜಿ.ಪಂ. ಸಿಇಒಗಳು ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಕ ಅಧಿಕಾರಿಗಳು ಪ್ರತಿ ಸೋಮವಾರ ತಮ್ಮ ಕಾರ್ಯಕ್ಷೇತ್ರದಲ್ಲಿ ಪ್ರವಾಸ ಮಾಡಿ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕು. ತಮ್ಮ ಪ್ರವಾಸ ಸಮಯದಲ್ಲಿ ನರೇಗಾ ಕಾಮಗಾರಿಗಳ ವೀಕ್ಷಣೆ, ಕೂಸಿನ ಮನೆ ಹಾಗೂ ಅರಿವು ಕೇಂದ್ರಗಳ ತಪಾಸಣೆಯನ್ನು ಸೇರಿಸಿಕೊಳ್ಳಬೇಕು ಎಂದು ತಾಕೀತು ಮಾಡಿದರು.
ಬೇಸಿಗೆಯ ಪ್ರಖರತೆ ಹೆಚ್ಚಾಗುತ್ತಿದ್ದು ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಅಭಾವ ಜಾಸ್ತಿಯಾಗುತ್ತಿದೆ. ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಮುಂದಿನ ಮೂರು ತಿಂಗಳು ಪ್ರತಿ 2ನೇ ಹಾಗೂ 4ನೇ ಸೋಮವಾರಗಳಂದು ಸಭೆ ನಡೆಸಿ ಕುಡಿಯುವ ನೀರಿನ ಪರಿಸ್ಥಿತಿಯ ಬಗ್ಗೆ ಅವಲೋಕನ ಮಾಡಬೇಕು. ನೀರಿನ ಅಭಾವ ಎದುರಿಸುವ ಗ್ರಾಮಗಳಿಗೆ ಪರ್ಯಾಯ ನೀರಿನ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಎಲ್ಲ ಜಿಲ್ಲಾ ಪಂಚಾಯತಿಗಳಲ್ಲಿ 24/7 ಕಂಟ್ರೋಲ್ ರೂಮ್ ಆರಂಭಿಸಿ, ಸಿಬ್ಬಂದಿಗಳನ್ನು ನಿಯೋಜಿಸಲೂ ಹೇಳಿದರು.
ತಾಲ್ಲೂಕು ಮಟ್ಟದಲ್ಲಿ ಕಾರ್ಯಾನಿರ್ವಾಹಕ ಅಧಿಕಾರಿಗಳ ಮುಖಾಂತರ ಕ್ಷಿಪ್ರ ಕಾರ್ಯಪಡೆ ರಚಿಸಿ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ನಿರ್ದೇಶನ ನೀಡಿದರು.
ಗ್ರಾಮಗಳಲ್ಲಿನ ನೀರಿನ ಲಭ್ಯತೆ ಹಾಗೂ ಕೊರತೆಯ ಬಗ್ಗೆ ಮಾಹಿತಿ ಸಂಗ್ರಹಿಸಲು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದ ಸಚಿವ ಪ್ರಿಯಾಂಕ್ ಖರ್ಗೆ, ಪತ್ರಿಕೆಗಳಲ್ಲಿ ಪ್ರಕಟಗೊಳ್ಳುತ್ತಿರುವ ಮಾಹಿತಿ ಹಾಗೂ ತಮಗೆ ಒದಗಿಸಲಾಗುತ್ತಿರುವ ಮಾಹಿತಿಗಳ ನಡುವೆ ಸಾಮ್ಯತೆ ಇಲ್ಲದಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.
ಮುಂದಿನ ಮೂರು ತಿಂಗಳು ಜಿ.ಪಂ.ಸಿಇಒಗಳು ಪ್ರತಿ ಹದಿನೈದು ದಿನಗಳಿಗೊಮ್ಮೆ ಪತ್ರಿಕಾಗೋಷ್ಠಿ ಕರೆದು ಜಿಲ್ಲೆಯಲ್ಲಿ ನೀರಿನ ಅಭಾವ ಎದುರಿಸಲು ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದರು.ಜಿ.ಪಂ.ಸಿಇಒಗಳು ತಮ್ಮ ತಮ್ಮ ಜಿಲ್ಲೆಗಳಲ್ಲಿನ ಎಲ್ಲ ಗ್ರಾಮಗಳ ನೀರು ಸರಬರಾಜು ಬಗ್ಗೆ ಕರಾರುವಾಕ್ಕು ಮಾಹಿತಿ ಹೊಂದಬೇಕಲ್ಲದೆ, ಅಭಾವವಿರುವ ಗ್ರಾಮಗಳಿಗೆ ಕಂಟೆಜೆನ್ಸಿ ಅನುದಾನದಿಂದ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.
ಕಳೆದ ವರ್ಷ ಏಪ್ರಿಲ್ 1ರಿಂದ 2024ರ ಫೆಬ್ರವರಿ 27ರವರೆಗೆ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ 2.12 ಲಕ್ಷ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ. ಗ್ರಾಮೀಣ ನೀರು ಕಲುಷಿತವಾಗದಂತೆ ಜಾಗ್ರತೆ ವಹಿಸಲಾಗಿದೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು. ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರು ಕಲುಷಿತವಾಗದಂತೆ ನಿಗಾ ವಹಿಸಲು ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ ನೀಡಿದರು.ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್, ಅಂಜುಂ ಪರ್ವೇಜ್, ಆಯುಕ್ತರಾದ ಪಿ.ಪ್ರದೀಪ್ (ಸಾಮಾಜಿಕ ಪರಿಶೋಧನೆ), ಪ್ರಿಯಾಂಕಾ ಮೇರಿ ಫ್ರಾನ್ಸಿಸ್ (ಪಂಚಾಯತ್ ರಾಜ್), ಪವನ್ ಕುಮಾರ್ ಮಾಲಪಾಟಿ (ನರೇಗ), ಕೆ.ನಾಗೇಂದ್ರ ಪ್ರಸಾದ್ (ಗ್ರಾಮೀಣ ನೀರು ಸರಬರಾಜು) ಹಾಗೂ ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twenty + four =
Remember me
