ಇಂಡಿಯಾ ಎನ್ನುವ ಇಡಿಯಾದ ಆದರ್ಶ ಪರಿಕಲ್ಪನೆಗೆ ಕಾಂಗ್ರೆಸ್ ಎಳ್ಳುನೀರು: ಎಚ್‌ಡಿಕೆ
ಬೆಂಗಳೂರು: ವಿಧಾನಸಭೆಯಲ್ಲಿ ಪ್ರತಿಪಕ್ಷ ಶಾಸಕರನ್ನು ಅಮಾನತು ಮಾಡಿದ ಕ್ರಮವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಠಿಣ ಶಬ್ದಗಳಲ್ಲಿ ಖಂಡಿಸಿದ್ದಾರೆ.
ಒಂದು ದಿನದ ಹಿಂದೆ ‘ ಇಂಡಿಯಾ ‘ ಎಂದು ಬೆಂಗಳೂರಿನಲ್ಲಿ ಜಪ ಮಾಡಿದ್ದ ಕಾಂಗ್ರೆಸ್, 24 ಗಂಟೆ ಒಳಗಾಗಿ ಇದೇ ನಗರದಲ್ಲಿ ಇಂಡಿಯಾ ಎನ್ನುವ ಇಡಿಯಾದ ಆದರ್ಶ ಪರಿಕಲ್ಪನೆಗೆ ಎಳ್ಳುನೀರು ಬಿಟ್ಟಿದೆ. ಪ್ರಜಾಪ್ರಭುತ್ವದ ಮೇಲೆ ನಂಬಿಕೆಯೇ ಇಲ್ಲದ ಕಾಂಗ್ರೆಸ್, ಸಾಂವಿಧಾನಿಕ ಮೌಲ್ಯಗಳನ್ನು ಕಸಕ್ಕೆ ಸಮ ಎನ್ನುವಂತೆ ವರ್ತಿಸಿದೆ ಎಂದು ಕಿಡಿ ಕಾರಿದ್ದಾರೆ.
ನಿನ್ನೆ ಪಂಚತಾರಾ ಹೋಟೆಲಿನಲ್ಲಿ ನಡೆದ ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳ ಸಭೆಗೆ ಬಂದಿದ್ದ ಶಿಷ್ಟಾಚಾರಕ್ಕೆ ಅರ್ಹರಲ್ಲದ ಹೊರರಾಜ್ಯಗಳ ರಾಜಕಾರಣಿಗಳಿಗೆ ಚಾಕರಿ ಮಾಡಲು ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿದ್ದ ನಿರ್ಲಜ್ಜ ಕ್ರಮ ಪ್ರಶ್ನಿಸಿದ ವಿರೋಧ ಪಕ್ಷಗಳನ್ನು ಹತ್ತಿಕ್ಕುವ ಹೇಯ ಕೆಲಸವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.
ಈ ಅಸಂವಿಧಾನಿಕ ನಡೆಯನ್ನು ಪ್ರಶ್ನಿಸಿದ ಪ್ರತಿಪಕ್ಷ ಶಾಸಕರನ್ನು ಸದನದಿಂದ ಅಮಾನತು ಮಾಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ. ಬರೀ ನಾಲಿಗೆಯ ಮೇಲೆ ಪ್ರಜಾಪ್ರಭುತ್ವ ಉಳಿಸುತ್ತೇನೆ ಎನ್ನುವ ಕಾಂಗ್ರೆಸ್, ತನ್ನದೇ ‘ಹಸ್ತ’ದಿಂದ ಅದೇ ಪ್ರಜಾಪ್ರಭುತ್ವವನ್ನು ಅಡ್ಡಡ್ಡ ಸಿಗಿದು ನಿರ್ನಾಮ ಮಾಡುತ್ತಿದೆ. ಇದೇನಾ ಕರ್ನಾಟಕ ಮಾಡೆಲ್? ಎಂದು ಅವರು ಪ್ರಶ್ನಿಸಿದ್ದಾರೆ.
ಪ್ರತಿಪಕ್ಷಗಳು ಕೇಳುವ ಪ್ರಶ್ನೆಗಳನ್ನು ಸಮಾಧಾನದಿಂದ ಆಲಿಸಿ, ಉತ್ತರ ನೀಡುವುದು ನಾಗರಿಕ ಸರ್ಕಾರದ ಕರ್ತವ್ಯ. ಆದರೆ, ಅನಾಗರಿಕತೆಯನ್ನೇ ಅರೆದು ಕುಡಿದಷ್ಟು, ಅನಾಗರಿಕತೆಯೇ ನಾಚಿ ನಿಟ್ಟುಸಿರು ಬಿಡುವಷ್ಟು ಹೀನಾಯವಾಗಿ ರಾಜ್ಯ ಕಾಂಗ್ರೆಸ್ ಸರಕಾರ ವರ್ತಿಸಿದೆ ಎಂದು ಅವರು ಹೇಳಿದ್ದಾರೆ.
ಶತಮಾನಕ್ಕೂ ಹೆಚ್ಚಿನ ಇತಿಹಾಸ ನನ್ನದು ಎಂದು ಕೊಚ್ಚಿಕೊಳ್ಳುವ ಕಾಂಗ್ರೆಸ್ ಪ್ರಜಾಸತ್ತೆಗೆ ಶಾಪ. ಜನತಂತ್ರದ ಮೇಲೆ ದರ್ಪ ತೋರಿಸಿದ ಆ ಪಕ್ಷಕ್ಕೆ ತಿಳಿದಿರಲಿ. ಇಂಡಿಯಾ ಎಂದರೆ ಇದಲ್ಲವೇ ಅಲ್ಲ, ಇಂಡಿಯಾ ಎಂದರೆ ಪ್ರಜಾಪ್ರಭುತ್ವ. ಇಂಡಿಯಾ ಎಂದರೆ ಇವರಷ್ಟೇ ಅಲ್ಲ, ನಾವೆಲ್ಲರೂ ಎಂದು ಮಾಜಿ ಮುಖ್ಯಮಂತ್ರಿ ಅವರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − sixteen =
Remember me
