ಬೆಂಗಳೂರು:ಹಂಗಾಮಿ ಸ್ಪೀಕರ್ ಆಗಿ ಕಾಂಗ್ರೆಸ್​ನ ಹಿರಿಯ ನಾಯಕ ಆರ್.ವಿ ದೇಶಪಾಂಡೆ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಸಂಬಂಧ ಪ್ರಕಟಣೆ ಹೊರಡಿಸಿರುವ ರಾಜ್ಯ ಸರ್ಕಾರ, ಕರ್ನಾಟಕದ ಮಾನ್ಯ ರಾಜ್ಯಪಾಲರು ಭಾರತದ ಸಂವಿಧಾನದ ಅನುಚ್ಛೇದ 180(1) ಹಾಗೂ 188ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸದನದಿಂದ ಸಭಾಧ್ಯಕ್ಷರು ಆಯ್ಕೆಯಾಗುವವರೆಗೆ ವಿಧಾನ ಸಭಾಧ್ಯಕ್ಷರ ಕರ್ತವ್ಯವನ್ನು ನಿರ್ವಹಿಸಲು ವಿಧಾನಸಭೆಯ ಸದಸ್ಯರಾದ ಆರ್.ವಿ. ದೇಶಪಾಂಡೆ ಅವರನ್ನು ಅವರನ್ನು ಮೇ 22ರಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ತಿಳಿಸಿದೆ.
ಇದನ್ನೂ ಓದಿ:ಡಿ.ಕೆ.ಶಿವಕುಮಾರ್ ಪಟ್ಟು, ಸಚಿವ ಸಂಪುಟಕ್ಕೆ ಆಯ್ಕೆ ಕಗ್ಗಂಟು: ತಡರಾತ್ರಿಯಾದರೂ ಮೂಡದ ಒಮ್ಮತ

ನೂತನ ಶಾಸಕರ ಪ್ರಮಾಣವಚನ ಸ್ವೀಕಾರ ಮತ್ತು ಸ್ಪೀಕರ್​ ಆಯ್ಕೆ ಸಂಬಂಧ ಸೋಮವಾರದಿಂದ ಮೂರು ದಿನಗಳ ಕಾಲ ವಿಧಾನಸಭಾ ಅಧಿವೇಶವನ್ನು ಕರೆಯಲಾಗಿದೆ. ನಿನ್ನೆ ನಡೆದ ಸಚಿವ ಸಂಪುಟದಲ್ಲಿ ಈ ಬಗ್ಗೆ ತೀರ್ಮಾನವಾಗಿದೆ.
ಇದನ್ನೂ ಓದಿ:ಅತ್ತೆ-ಮಾವ ಸುಪರ್ದಿಗೆ ಬಾಲಕ: ತಂದೆ ವಶಕ್ಕೆ ನೀಡಿದ್ದ ಕೌಟುಂಬಿಕ ಕೋರ್ಟ್, ಆದೇಶ ರದ್ದು ಮಾಡಿದ ಹೈಕೋರ್ಟ್
ಸ್ಪೀಕರ್​ ಆಯ್ಕೆಯಾಗುವವರೆಗೆ ಶಾಸಕರ ಪ್ರಮಾಣವಚನ ಬೋಧನೆಯು ಹಂಗಾಮಿ ಸ್ಪೀಕರ್​ ನೇತೃತ್ವದಲ್ಲಿ ನಡೆಯಲಿದೆ. ಇದೇ ಅಧಿವೇಶನದಲ್ಲಿ ನೂತನ ಸ್ಪೀಕರ್​ ಆಯ್ಕೆ ಪ್ರಕ್ರಿಯೆಯು ಸಹ ನಡೆಯಲಿದೆ. ಮೇ 23ಕ್ಕೆ ಹಿಂದಿನ ವಿಧಾನಸಭೆ ಅಂತಿಮಗೊಳ್ಳಲಿದ್ದು, ಅಷ್ಟರೊಳಗೆ ನೂತನ ಶಾಸಕರ ಪ್ರಮಾಣವಚನ ಪೂರ್ಣಗೊಳ್ಳಬೇಕಿದೆ.
ಕಾಂಗ್ರೆಸ್​ನವರು ಬೈಯೋದು ಬೇಡ, ಬಿಜೆಪಿಯವರು ಬೊಬ್ಬೆ ಹೊಡೆಯೋದು ಬೇಡ: ಸಿಎಂ ಸಿದ್ದುಗೆ ಪ್ರತಾಪ್ ಸಿಂಹ ಸಲಹೆ​

ಹಿಂದಿನ ಬಿಜೆಪಿ ಸರ್ಕಾರದ ಬಿಬಿಎಂಪಿ ವ್ಯಾಪ್ತಿಯ ಯೋಜನೆಗಳಿಗೆ ಸಿಎಂ ಸಿದ್ದರಾಮಯ್ಯ ಬ್ರೇಕ್!

ರಾಜ್ಯದ ಗತವೈಭವ ಮರುಕಳಿಸುವಂತೆ ಕೆಲಸ ಮಾಡುತ್ತೇವೆ: ಎಂ.ಬಿ.ಪಾಟೀಲ್

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × one =
Remember me
