ಬೆಂಗಳೂರು: ಕರೊನಾ ನಿಯಂತ್ರಣದ ವಿಷಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಇಬ್ಬರು ಕಾಂಗ್ರೆಸ್ ನಾಯಕರು ಪೊಲೀಸರಿಗೆ ದೂರು ನೀಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರು ಇಲ್ಲಸಲ್ಲದ ಹೇಳಿಕೆ ನೀಡ್ತಿದ್ದಾರೆ. ಭಾರತದಲ್ಲಿ ಕರೊನಾ ಕಡಿಮೆಯಾಗುವುದಕ್ಕೆ ಪ್ರಧಾನಿ ಮೋದಿಯವರು ಕಾರಣ ಎಂಬ ಕಟೀಲ್ ಅವರ ಹೇಳಿಕೆ ಜನರನ್ನು ತಪ್ಪು ದಾರಿಗೆ ಎಳೆಯುವಂತಹದ್ದು ಎಂದು ವಿಧಾಸೌಧ ಠಾಣೆಗೆ ನೀಡಿರುವ ಈ ದೂರಿನಲ್ಲಿ ವಾದಿಸಲಾಗಿದೆ.
ಇದನ್ನೂ ಓದಿFACT CHECK: ಮುನ್ನೂರು ಮುಸ್ಲಿಮರ ಮನೆಗಳ ಸುಟ್ಟಿದ್ಯಾರು? ಇಲ್ಲಿದೆ ನೋಡಿ ಅಸಲಿಯತ್ತು!
ಭಾರತದಲ್ಲಿ ಕರೊನಾ ನಿಯಂತ್ರಣಕ್ಕೆ ತಂದಿದ್ದರಿಂದಲೇ ವಿಶ್ವ ಸಂಸ್ಥೆಯಲ್ಲಿ ಭಾರತಕ್ಕೆ ಉತ್ತಮ ಸ್ಥಾನಮಾನ ನೀಡಲಾಗಿದೆ ಎಂಬ ಹೇಳಿಕೆಯೂ ಸರಿಯಲ್ಲ. ಇಂತಹ ಸುಳ್ಳು ಹೇಳಿಕೆಗಳಿಂದ ಅವರು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ವಿಧಾನಪರಿಷತ್ ಸದಸ್ಯರಾದ ಐವಾನ್ ಡಿಸೋಜಾ ಮತ್ತು ಪ್ರಕಾಶ್ ರಾಥೋಡ್ ಅವರು ನೀಡಿರುವ ಈ ದೂರನ್ನು ವಿಧಾನಸೌಧ ಠಾಣೆ ಪೊಲೀಸರು ದಾಖಲಿಸಿಕೊಂಡಿದ್ದಾರೆ.
ಕರೊನಾ ಸೋಂಕಿತರ ದೇಹದಲ್ಲೇ ಉತ್ಪತ್ತಿಯಾಗುತ್ತೆ ಪ್ರತಿರೋಧಕ ಶಕ್ತಿ, ಮತ್ತೊಮ್ಮೆ ಅಂಟಲ್ಲ ವೈರಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 2 =
Remember me
