ಮೈಸೂರು:ಹಿಂದುಳಿದ ವರ್ಗದ ನಾಯಕರಾದ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವುದನ್ನು ಸಹಿಸಲಾಗದೆ ಬಿಜೆಪಿ ಹಾಗೂ ಜೆಡಿಎಸ್ ಅವರ ತೇಜೋವಧೆ ಮಾಡುತ್ತಿದೆ. ಈ ಪರಿಸ್ಥಿತಿಯಲ್ಲಿ ಇಡೀ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರ ಪರವಾಗಿ ನಿಲ್ಲಲಿದೆ ಎಂದು ಡಿಸಿಎಂ. ಡಿ.ಕೆ. ಶಿವಕುಮಾರ್ ತಿಳಿಸಿದರು.
ಇದನ್ನೂ ಓದಿ:ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸಲು ಸಂಚು ನಡೆಯುತ್ತಿದೆ: ಸಿ.ಟಿ.ರವಿ ಆತಂಕ
ಮೈಸೂರಿನಲ್ಲಿ ನಾಳೆ ನಡೆಯಲಿರುವ ಜನಾಂದೋಲನ ಸಮಾವೇಶದ ಪೂರ್ವಭಾವಿ ಸಿದ್ಧತೆ ಪರಿಶೀಲಿಸಿದ ಬಳಿಕ ಮಾಧ್ಯಮಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು.
“ಸಿದ್ದರಾಮಯ್ಯ ಭಾವುಕ ವ್ಯಕ್ತಿ. ಅವರ ಆರೋಪ ನಿಜವಾಗಿದ್ದರೆ ಅರಗಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದರು. ಆದರೆ ಸುಳ್ಳು ಆರೋಪ ಅವರಿಗೆ ಮಾನಸಿಕ ಹಿಂಸೆಯಾಗಿದೆ. ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರ ತೇಜೋವಧೆಗೆ ಉಭಯ ಪಕ್ಷಗಳು ಮುಂದಾಗಿವೆ. ಇದಕ್ಕಾಗಿ ಇಡೀ ಪಕ್ಷ ಹಾಗೂ ಸರ್ಕಾರ ಒಂದಾಗಿ ಸಿದ್ದರಾಮಯ್ಯ ಅವರ ಪರವಾಗಿ ನಿಂತಿದ್ದೇವೆ ಎಂದು ತಿಳಿಸಿದರು.
ಪಾಪ ವಿಮೋಚನಾ ಯಾತ್ರೆ ಪ್ರಶ್ನಿಸಿ ಜನಾಂದೋಲನ: “ಭ್ರಷ್ಟಾಚಾರಗಳಿಂದ ಭ್ರಷ್ಟಾಚಾರ ಮುಚ್ಚಿಕೊಳ್ಳಲು ನಡೆಸುತ್ತಿರುವ ಪಾದಯಾತ್ರೆ ವಿರುದ್ಧ ಪ್ರಶ್ನೆ ಮಾಡಲು ಜನಾಂದೋಲನ ಸಮಾವೇಶ ಹಮ್ಮಿಕೊಂಡಿದ್ದೇವೆ. ಅವರದು ಪಾಪ ವಿಮೋಚನಾ ಯಾತ್ರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ 25 ಹಗರಣಗಳು ನಡೆದಿದ್ದು, ಕುಮಾರಸ್ವಾಮಿ ಅವರ ಕುಟುಂಬದ ಹಗರಣಗಳ ಬಗ್ಗೆ ಅವರು ಉತ್ತರ ನೀಡಬೇಕು” ಎಂದು ತಿಳಿಸಿದರು.
ಮಂತ್ರಿ ಹಾಗೂ ಶಾಸಕರ ಹಸ್ತಕ್ಷೇಪ ಇಲ್ಲ:“ಮುಖ್ಯಮಂತ್ರಿಗಳು ಸದನದಲ್ಲಿ ಉತ್ತರ ನೀಡುವಾಗ ಬಿಜೆಪಿ ಕಾಲದ ಹಗರಣಗಳ ಬಗ್ಗೆ ಉಲ್ಲೇಖಿಸಿದ್ದಾರೆ. ಅದರ ತನಿಖೆಯೂ ನಡೆಯುತ್ತಿದೆ. ಇದನ್ನು ಮುಚ್ಚಲು ಬಿಜೆಪಿ ಪ್ರಯತ್ನಿಸಿತು. ನಾವು ಅವುಗಳನ್ನು ಬಿಚ್ಚಿಟ್ಟಿದ್ದೇವೆ. ಯಾರಿಗೆ ಎಷ್ಟೆಷ್ಟು ಪಾಲು ಹೋಗಿದೆ. ಆ ಹಗರಣ ನಡೆದಾಗ ಯಾರು ಮುಖ್ಯಮಂತ್ರಿ? ಯಾರು ಮಂತ್ರಿಯಾಗಿದ್ದರು? ಎಂದು ಜನರಿಗೆ ಮಾಹಿತಿ ನೀಡಬೇಕು. ಅವರು ವಾಲ್ಮೀಕಿ ಹಗರಣದ ಬಗ್ಗೆ ಪ್ರಸ್ತಾಪ ಮಾಡಿದ್ದು, ಈ ಹಗರಣವನ್ನು ಅಧಿಕಾರಿಗಳು ನಡೆಸಿದ್ದಾರೆ ಎಂದು ಒಪ್ಪಿ ನಾವು ತನಿಖೆ ಮಾಡಿದ್ದೇವೆ. ಅಲ್ಲದೆ ಆರೋಪಪಟ್ಟಿಯನ್ನು ಸಲ್ಲಿಕೆ ಮಾಡಲಾಗಿದೆ. ಇದರಲ್ಲಿ ಮಂತ್ರಿ ಹಾಗೂ ಶಾಸಕರ ಹಸ್ತಕ್ಷೇಪ ಇಲ್ಲ ಎಂದು ಮಾಧ್ಯಮಗಳ ವರದಿ ನೋಡಿದ್ದೇನೆ” ಎಂದರು.
“ಮುಡಾ ವಿಚಾರವಾಗಿಯೂ ನಾವು ಚರ್ಚೆ ಮಾಡಿದ್ದೇವೆ. ತವರುಮನೆ ಯಿಂದ ಉಡುಗೊರೆಯಾಗಿ ಬಂದ ಜಮೀನನ್ನು ಮುಡಾ ಒತ್ತುವರಿ ಮಾಡಿದ್ದಕ್ಕೆ ಅರ್ಜಿ ಹಾಕಿದ್ದು, ಅದನ್ನು ಮುಡಾ ಸಭೆಯಲ್ಲಿ ಒಪ್ಪಿ ನಿರ್ಣಯ ಕೈಗೊಂಡು ನಿವೇಶನ ನೀಡಿರುವುದು ನಿಜ. ಇವರು ಪರಿಹಾರ ಕೇಳುವಾಗ ಇಂತಹದೇ ಜಾಗದಲ್ಲಿ ಕೊಡಿ ಎಂದು ಕೇಳಿಲ್ಲ. ಈ ಪ್ರಕರಣದ ತನಿಖೆಗೆ ಆದೇಶ ಮಾಡಲಾಗಿದ್ದು, ತಪ್ಪಿತಸ್ಥರಿಗೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು. ಮುಖ್ಯಮಂತ್ರಿಗಳ ಕುಟುಂಬದಲ್ಲಿ ತಪ್ಪಾಗಿದ್ದರೂ ತನಿಖೆ ನಡೆಯಲಿ ಎಂದು ಅವರೂ ಒಪ್ಪಿದ್ದಾರೆ” ಎಂದು ತಿಳಿಸಿದರು.
ಪಾದಯಾತ್ರೆ ಅಡ್ಡಿಪಡಿಸಲು ಪ್ರಕರಣ ದಾಖಲಿಸಿದರು:“ಬಿಜೆಪಿ ಹಾಗೂ ಜೆಡಿಎಸ್ ಸುಳ್ಳು ಆರೋಪ ಮಾಡುವ ಮೂಲಕ ಜನರನ್ನು ತಪ್ಪುದಾರಿಗೆ ಎಳೆಯುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ನಾವು ಕಾವೇರಿ ನೀರು ಪೋಲಾಗುವುದನ್ನು ತಪ್ಪಿಸಿ ಜನರಿಗೆ ಕುಡಿಯುವ ನೀರು ನೀಡಲು ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡಿದಾಗ, ಚಿತ್ರರಂಗದಿಂದ ಆಗಲಿ, ಸಾಹಿತ್ಯ ರಂಗ (ಕೆಲವರನ್ನು ಹೊರತುಪಡಿಸಿ) ಯಾರಿಂದಲೂ ಬೆಂಬಲ ಸಿಗಲಿಲ್ಲ. ಪಾದಯಾತ್ರೆ ಅಡ್ಡಿಪಡಿಸಲು ನಮ್ಮ ಮೇಲೆ ಪ್ರಕರಣ ದಾಖಲಿಸಿದರು. ಕೋವಿಡ್ ಸೋಂಕಿತನನ್ನು ನನ್ನ ಬಳಿ ಕಳುಹಿಸಿದ್ದರು. ಆದರೂ ನಾವು ಹೋರಾಟ ಮಾಡಿದ್ದೇವೆ” ಎಂದು ತಿಳಿಸಿದರು.
ನಾವು ಬೆಂಗಳೂರು ನಗರ ಹೊರತಾಗಿ ಪಾದಯಾತ್ರೆ ಮಾಡಲು ಅವಕಾಶ ನೀಡಿದ್ದೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರ ಹೋರಾಟಕ್ಕೆ ಅಡ್ಡಿ ಮಾಡಲ್ಲ. ಪಾದಯಾತ್ರೆಗೆ ಜಿ.ಟಿ.ದೇವೇಗೌಡರು, ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದರು. ಈಗ ಅವರೇ ಪಾದಯಾತ್ರೆ ಮಾಡುತ್ತಿದ್ದಾರೆ. ಈ ಜನಾಂದೋಲನ ಸಭೆಗೆ ಸಿಎಂ ಭಾಗವಹಿಸುವ ಅಗತ್ಯವಿಲ್ಲ ಎಂದು ನಾವೇ ಹೇಳಿದ್ದೆವು. ನಾಳೆ ಸಮಾವೇಶಕ್ಕೂ ಅವರು ಬರುವ ಅಗತ್ಯ ಇರಲಿಲ್ಲ. ಆದರೆ ಅವರ ತವರು ಜಿಲ್ಲೆ ಹೀಗಾಗಿ ಅವರು ಭಾಗವಹಿಸುತ್ತಿದ್ದಾರೆ” ಎಂದರು.
ನಾಳೆ ಸಮಾವೇಶದಲ್ಲಿ ಬೇರೆ ಹಗರಣಗಳ ಬಗ್ಗೆ ದಾಖಲೆ ಬಿಡುಗಡೆ ಮಾಡುತ್ತೀರಾ ಎಂದು ಕೇಳಿದಾಗ, “ಒಂದೇ ಸಲ ಎಲ್ಲವನ್ನೂ ಬಿಡುಗಡೆ ಮಾಡುವುದಿಲ್ಲ. ಇನ್ನು ಸಾಕಷ್ಟು ಪ್ರಕರಣಗಳಿವೆ” ಎಂದು ತಿಳಿಸಿದರು.
ಬಿಜೆಪಿ ಮಾಡಿದ ಆರೋಪದ ಬಗ್ಗೆ ಕುಮಾರಸ್ವಾಮಿ ಉತ್ತರಿಸಲಿ:ಈ ಪಾದಯಾತ್ರೆ ಡಿ.ಕೆ. ಶಿವಕುಮಾರ್ ಮತ್ತು ಕುಮಾರಸ್ವಾಮಿ ನಡುವಣ ಹೋರಾಟ ಎಂದು ಕೇಳಿದಾಗ, “ಮುಡಾ ಹಗರಣ ನಡೆದಿದ್ದರೆ. ಅದರ ಬಗ್ಗೆ ಹೆಚ್ಚು ಚರ್ಚೆ ಆಗುತ್ತಿತ್ತು. ಕುಮಾರಸ್ವಾಮಿ ಯಾಕೆ ಹಗರಣದ ಬಗ್ಗೆ ಮಾತನಾಡುತ್ತಿಲ್ಲ ಯಾಕೆ? ನಾನು ಅವರಿಗೆ ಪ್ರಶ್ನೆ ಕೇಳುತ್ತಿದ್ದೇನೆ. ಈ ಪಾದಯಾತ್ರೆ ಅಗತ್ಯವಿಲ್ಲ ಎಂದು ಅವರಿಗೂ ಗೊತ್ತು. ಆದರೂ ಒತ್ತಡದ ಮೇಲೆ ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಇಲ್ಲಿ ಹಗರಣ ಏನಿದೆ ಎಂದು ಹೇಳಲಿ. ಚುನಾವಣೆ ಮುನ್ನ ಮೋದಿ, ಅಮಿತ್ ಶಾ ಜೆಡಿಎಸ್ ಬಗ್ಗೆ ಮಾಡಿದ ಆರೋಪ, ಬಿಜೆಪಿ ಕುಮಾರಸ್ವಾಮಿ ಅವರ ವಿರುದ್ಧ ಪ್ರಕಟಿಸಿದ ಜಾಹೀರಾತಿನ ಬಗ್ಗೆ ಅವರು ಉತ್ತರ ನೀಡಲಿ” ಎಂದು ತಿಳಿಸಿದರು.
ಮಂಡ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿರುವ ಬಗ್ಗೆ ಕೇಳಿದಾಗ, “ಅವರ ಮೈತ್ರಿ ತಾತ್ಕಾಲಿಕ. ಶತ್ರುವಿನ ಶತ್ರು ಮಿತ್ರ ಎಂಬಂತೆ ಈಗ ಒಂದಾಗಿದ್ದಾರೆ. ಕಾಂಗ್ರೆಸ್ ವಿರೋಧಿ ಮತಗಳು ಒಂದಾಗಿ ಜನರ ತೀರ್ಪು ಬಂದಿದೆ. ನಾವು ಅದನ್ನು ಒಪ್ಪುತ್ತೇವೆ” ಎಂದು ತಿಳಿಸಿದರು. ಯೋಗೇಶ್ವರ್ ಪಾದಯಾತ್ರೆಯಲ್ಲಿ ಭಾಗವಹಿಸಿಲ್ಲ, ಕಾಂಗ್ರೆಸ್ ಸೇರುತ್ತಾರಾ ಎಂದು ಕೇಳಿದಾಗ, “ನನಗೆ ಅವರ ಪಕ್ಷದ ವಿಚಾರ ಗೊತ್ತಿಲ್ಲ” ಎಂದು ತಿಳಿಸಿದರು.
Paris Olympics 2024 : ಹಾಕಿಯಲ್ಲಿ ಕಂಚು ಗೆದ್ದ ಭಾರತ ಹಾಕಿ ತಂಡ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × four =
Remember me
