ಬೆಂಗಳೂರು:‘ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ ಮೂಡಿಸಲು ಕಾಂಗ್ರೆಸ್ ಪಕ್ಷ ಜ.23, ಸೋಮವಾರ ಬೆಳಗ್ಗೆ 10 ಗಂಟೆಯಿಂದ 12 ಗಂಟೆವರೆಗೂ ನಗರದ 300ಕ್ಕೂ ಹೆಚ್ಚು ಕಡೆಗಳಲ್ಲಿ ಭ್ರಷ್ಟಾಚಾರ ತೊಲಗಿಸಿ, ಬೆಂಗಳೂರು ಉಳಿಸಿ ಎಂಬ ಮೌನ ಪ್ರತಿಭಟನೆ ಮಾಡಲಾಗುವುದು’ ಎಂದು ಕಾಂಗ್ರೆಸ್ ಶಾಸಕರಾದ ಎನ್.ಎ ಹ್ಯಾರಿಸ್ ಅವರು ತಿಳಿಸಿದ್ದಾರೆ.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಕಾರ್ಯದರ್ಶಿ ಅಭಿಶೇಕ್ ದತ್ ಅವರ ಜತೆ ಈ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹ್ಯಾರಿಸ್ ಅವರು, ಗಂಟೆವರೆಗೆ 51 ಮೆಟ್ರೋ ನಿಲ್ದಾಣಗಳಲ್ಲಿ, 26 ಫ್ಲೈ ಓವರ್, 200 ಟ್ರಾಫಿಕ್ ಸಿಗ್ನಲ್ ಗಳಲ್ಲಿ ನಾವು ಮೌನ ಪ್ರತಿಭಟನೆ ಮಾಡುತ್ತಿದ್ದೇವೆ. ನಾವು ಗಲಾಟೆ ಮಾಡಿ, ಸಂಚಾರಕ್ಕೆ ಅಡ್ಡಿ ಮಾಡಿ ಹೋರಾಟ ಮಾಡುವುದಿಲ್ಲ. ನಮ್ಮ ಕಾರ್ಯಕರ್ತರು ಪ್ಲೆಕಾರ್ಡ್ ಹಿಡಿದು ಹೋರಾಟ ಮಾಡುತ್ತಾರೆ’ ಎಂದು ವಿವರಿಸಿದರು. ಈ ಸಂದರ್ಭದಲ್ಲಿ ಅವರು ಹೇಳಿದ್ದಿಷ್ಟು.
‘ರಾಜ್ಯದಲ್ಲಿ ಭ್ರಷ್ಟಾಚಾರ ಯಾವ ಮಟ್ಟಿಗೆ ಹರಡಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಹೀಗಾಗಿ ಬೆಂಗಳೂರು ಉಳಿಸುತ್ತಾ ರಾಜ್ಯವನ್ನು ಉಳಿಸಿ ಎಂಬ ಸಂದೇಶ ನೀಡುತ್ತೇವೆ. ನಾಳೆ ಈ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಮಾಡಿ ನಂತರ ರಾಜ್ಯಕ್ಕೆ ವಿಸ್ತರಿಸುತ್ತೇವೆ.
ರಾಜ್ಯದಲ್ಲಿ 40% ಕಮಿಷನ್ ಹಾಗೂ ಲಂಚಾವತಾರ ಹೆಚ್ಚಾಗಿದ್ದು, ಇದಕ್ಕೆ ಕೊನೆ ಇಲ್ಲವೇ ಎಂಬ ಪ್ರಶ್ನೆ ಉದ್ಭವಿಸಿದೆ. ಈ ವಿಚಾರವಾಗಿ ಸರ್ಕಾರ ಯಾವುದೇ ಉತ್ತರ ನೀಡುತ್ತಿಲ್ಲ. ಮಂತ್ರಿಗಳು ಉತ್ತರ ನೀಡುತ್ತಿಲ್ಲ. ಭ್ರಷ್ಟಾಚಾರ ಆರೋಪ ಕೇಳಿಬಂದ ಮಂತ್ರಿಗಳ ವಿರುದ್ಧ ಯಾವುದೇ ಕ್ರಮ ಜರುಗಿಸುತ್ತಿಲ್ಲ. ಭ್ರಷ್ಟಾಚಾರ ಆರೋಪ ಬಂದಾಗ ಅಂತಹವರ ವಿರುದ್ಧ ಕ್ರಮಕ್ಕೆ ಮುಂದಾಗಬೇಕು. ಆದರೆ ಈ ಸರ್ಕಾರದಲ್ಲಿ ಎಷ್ಟೇ ಭ್ರಷ್ಟಾಚಾರದ ಆರೋಪ ಬಂದರೂ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ನೋಡಿದರೆ, ಇಡೀ ಸರ್ಕಾರವೇ ಇದರಲ್ಲಿ ಭಾಗಿಯಾಗಿದೆಯೇ ಎಂಬ ಅನುಮಾನ ಮೂಡುತ್ತದೆ.
ವಿರೋಧ ಪಕ್ಷವಾಗಿ ಇದನ್ನೆಲ್ಲ ನೋಡಿಕೊಂಡು ಸುಮ್ಮನೆ ಕೂರಲು ಸಾಧ್ಯವಿಲ್ಲ. ವಿರೋಧ ಪಕ್ಷವಾಗಿ ನಗರ, ರಾಜ್ಯ ಹಾಗೂ ಜನರನ್ನು ರಕ್ಷಣೆ ಮಾಡಿ ಅವರ ಕೆಲಸ ಮಾಡಿಸಿಕೊಡುವುದು ನಮ್ಮ ಜವಾಬ್ದಾರಿ. ರಾಜ್ಯದಲ್ಲಿನ ಭ್ರಷ್ಟಾಚಾರ ವಿಚಾರವಾಗಿ ಮಾಧ್ಯಮಗಳು ಕೂಡ ಸಾಕಷ್ಟು ಆರೋಪ ಮಾಡಿವೆ. ಗುತ್ತಿಗೆದಾರರ ಸಂಘದ ಅದ್ಯಕ್ಷರು ಪ್ರಧಾನಿಗೆ ಕಾಗದ ಬರೆದರೂ ಪ್ರಧಾನಮಂತ್ರಿಗಳು ಉತ್ತರ ನೀಡಲಿಲ್ಲ.
ಪಿಎಸ್ಐ, ಪಿಡ್ಬ್ಲ್ಯೂ ಡಿ ಜೆಇಇ, ಕೆಪಿಟಿಸಿಎಲ್ ಸೇರಿದಂತೆ ಭ್ರಷ್ಟಾಚಾರದ ಪರ್ವತವನ್ನೇ ನಿರ್ಮಿಸಿದ್ದಾರೆ. ಆದರೂ ಸತ್ಯಹರಿಶ್ಚಂದ್ರರ ಮೊಮ್ಮಕ್ಕಳಂತೆ ಮಾತನಾಡುತ್ತಿದ್ದಾರೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಪ್ರಧಾನಿಗಳು ರಾಜ್ಯಕ್ಕೆ ಪದೇ ಪದೆ ಬರುತ್ತಿದ್ದಾರೆ. ರಾಜ್ಯಕ್ಕೆ ಬರುವ ಮೋದಿ ಅವರು ಈ ಭ್ರಷ್ಟಾಚಾರದ ವಿಚಾರವಾಗಿ ಏನಾದರೂ ಮಾತನಾಡುತ್ತಿದ್ದಾರಾ? ಸುಳ್ಳನೇ ಹೇಳಿ ಜನರಿಗೆ ಮೋಸ ಮಾಡುತ್ತಿದ್ದಾರೆ.
ಈ ಸರ್ಕಾರ ಕಳೆದ ಏಳೆಂಟು ತಿಂಗಳಿಂದ ವಿಧವಾ, ಅಂಗವಿಕಲರ, ವೃದ್ಧಾಪ್ಯ ವೇತನವನ್ನು ನೀಡುತ್ತಿಲ್ಲ. ಸರ್ಕಾರದ ಬಳಿ ಹಣವಿಲ್ಲವೇ? ಇದಕ್ಕೆ ಸರ್ಕಾರ ಉತ್ತರಿಸುತ್ತಿಲ್ಲ. ಹೀಗಾಗಿ ಜನರಿಗೆ ಎಚ್ಛರಿಕೆ ನೀಡಲು ಹೊಸ ಕಾರ್ಯಕ್ರಮ ಮಾಡಿದ್ದೇವೆ.
ಬಿಜೆಪಿ ಸರ್ಕಾರದ ಅವಧಿ ಕೇವಲ 100 ದಿನಗಳೂ ಇಲ್ಲ. ಆದರೂ ತನ್ನ ಪ್ರಣಾಳಿಕೆಯ ಶೇ.90ರಷ್ಟು ಭರವಸೆ ಈಡಡೇರಿಸಿಲಿಲ್ಲ. ಆದರೂ ಹೊಸ ಪ್ರಣಾಳಿಕೆ ಬಿಡುಗಡೆ ಮಾಡಲು ತಯಾರಿ ಮಾಡುತ್ತಿದ್ದಾರೆ. ಜನರಿಗೆ ಯಾವುದೇ ಅನುಕೂಲ ಮಾಡಿಕೊಡದೆ ಸರ್ಕಾರ ತನ್ನ ಆಡಳಿತ ಮುಗಿಸುತ್ತಿದೆ. ಇದನ್ನೆಲ್ಲ ಅರ್ಥ ಮಾಡಿಕೊಂಡು ಬೆಂಗಳೂರಿನ ಎಲ್ಲ ನಾಯಕರು ಕಾರ್ಯಕರ್ತರು ರಸ್ತೆಯಲ್ಲಿ ಪ್ರತಿಭಟನೆ ಮಾಡುತ್ತೇವೆ. ಬೆಂಗಳೂರಿನ ಎಲ್ಲೆಡೆ ಈ ಪ್ರತಿಭಟನೆ ಮಾಡುತ್ತೇವೆ.
ನಾಳೆ ಟ್ರಿನಿಟಿ ಸರ್ಕಲ್ ಬಳಿ ಕೆಪಿಸಿಸಿ ಅಧ್ಯಕ್ಷರು, ಸಿಎಲ್ ಪಿ ನಾಯಕರಾದ ಸಿದ್ದರಾಮಯ್ಯ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಅಭಿಶೇಕ್ ದತ್ ಅವರು ಭಾಗವಹಿಸಲಿದ್ದಾರೆ. ಬೆಂಗಳೂರಿನ ಎಲ್ಲ 28 ಕ್ಷೇತ್ರಗಳಲ್ಲಿ ಶಆಸಕರು, ಪರಾಜಿತ ಅಭ್ಯರ್ಥಿಗಳು 300ಕ್ಕೂ ಹೆಚ್ಚು ಕಡೆಗಳಲ್ಲಿ ಪ್ರತಿಭಟನೆ ಮಾಡುತ್ತೇವೆ. ಭ್ರಷ್ಟಾಚಾರದ ವಿರುದ್ಧ ನಾವು ಹೋರಾಟ ಮಾಡುತ್ತಿದ್ದೇವೆ. ಇದರ ವಿರುದ್ಧ ಹೋರಾಟ ಮಾಡಿದರಷ್ಟೇ ನಾವು ಮುಂದೆ ಉತ್ತಮ ಆಡಳಿತ ನೀಡಲು ಸಾಧ್ಯವಾಗುತ್ತದೆ.
ಪಕ್ಷ ಅಧಿಕಾರಕ್ಕೆ ಬಂದರೆ ಮಾಡುವ ಗ್ಯಾರೆಂಟಿ ಯೋಜನೆಗಳನ್ನು ಪ್ರಕಟಿಸಲಾಗಿದೆ. 200 ಯುನಿಟ್ ವಿದ್ಯುತ್ ಉಚಿತ ನೀಡುವ ಗೃಹಜ್ಯೋತಿ ಯೋಜನೆ ಘೋಷಿಸಿದ್ದೇವೆ. ರಾಜ್ಯದ ಬಹುತೇಕ 80% ಮಂದಿಗೆ ವಿದ್ಯುತ್ ಬಿಲ್ ಪಾವತಿಸುವ ಹೊರೆ ಇರುವುದಿಲ್ಲ. ಇನ್ನು ಪ್ರತಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ಆರ್ಥಿಕ ನೆರವು ನೀಡುವ ಗೃಹಲಕ್ಷ್ಮಿ ಯೋಜನೆ ಪ್ರಕಟಿಸಿದ್ದೇವೆ. ನಾವು ಹಿಂದೆ ಹೇಳಿರುವುದನ್ನು ಮಾಡಿದ್ದೇವೆ, ಮುಂದೆಯೂ ಮಾಡುತ್ತೇವೆ. ಬಿಜೆಪಿ ಅವರು ಹೇಳಿರುವುದರಲ್ಲಿ ಯಾವುದನ್ನು ಮಾಡಿಲ್ಲ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
