ಹಗರಿಬೊಮ್ಮನಹಳ್ಳಿ (ಬಳ್ಳಾರಿ):ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆ ವೇಳೆ ಸ್ಥಳೀಯ ಕಾಂಗ್ರೆಸ್​ ಶಾಸಕ ಭೀಮಾನಾಯ್ಕ, “ಬಾ ಲೇ.. ಮಗನೆ” ಎಂದು ಸವಾಲು ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ಚುನಾವಣೆಯಲ್ಲಿ ಕಾಂಗ್ರೆಸ್​-ಬಿಜೆಪಿ ನಡುವೆ ಜಿದ್ದಾಜಿದ್ದಿ ಹೋರಾಟ, ಕಾರ್ಯಕರ್ತರ ಮಧ್ಯೆ ಜಟಾಪಟಿ ಏರ್ಪಟಿತ್ತು. ಮತದಾನ ಸಂದರ್ಭ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆಯೂ ನಡೆದಿತ್ತು. ಈ ವೇಳೆ ಶಾಸಕ ಭೀಮಾನಾಯ್ಕ ತೋಳುತಟ್ಟಿಕೊಳ್ಳುತ್ತ “ಬಾ ಲೇ.. ಮಗನೇ” ಎಂದು ಅಬ್ಬರಿಸಿರುವ ವಿಡಿಯೋ ವೈರಲ್​ ಆಗಿದ್ದು, ಭಾರೀ ಸಂಚಲನ ಮೂಡಿಸಿದೆ.
ಕ್ಷೇತ್ರದಲ್ಲಿ ಭೀಮಾನಾಯ್ಕ ಹಾಗೂ ಮಾಜಿ ಶಾಸಕ ನೇಮಿರಾಜನಾಯ್ಕ ನಡುವಿನ ರಾಜಕೀಯ ಜಿದ್ದಾಜಿದ್ದಿ ವೈಯಕ್ತಿಕ ಹಂತಕ್ಕೂ ತಲುಪಿರುವುದು ಗುಟ್ಟಾಗಿ ಉಳಿದಿಲ್ಲ. ಇದಾರಿಂದಾಗಿ ಭೀಮಾನಾಯ್ಕ ವಿಡಿಯೋದಲ್ಲಿ ಮೇಲಿನಂತೆ ಉದ್ಘರಿಸಿದ್ದು ಯಾರಿಗೆ ಎಂಬ ಪ್ರಶ್ನೆ ಎದ್ದಿದೆ. ಅಲ್ಲದೆ ಭೀಮಾನಾಯ್ಕರ ಪುತ್ರ ಅಶೋಕ ನಾಯ್ಕ ಕೂಡ ತನ್ನ ತಂದೆಯ ರೋಷಾವೇಶಕ್ಕೆ ಬೆಂಬಲಿಸಿದ್ದು, ತಂದೆ ಹಾಕಿದ ಸವಾಲಿನ ದೃಶ್ಯಕ್ಕೆ ಟಗರು ಸಿನಿಮಾದ ಹಾಡು ಹಾಕಿ ‘ನಾವು ಅಂದ್ರೆ ಹೇಂಗೆ?’ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿರುವುದೂ ಚರ್ಚೆಗೆ ಗ್ರಾಸವಾಗಿದೆ. ಫೇಸ್​ಬುಕ್​ನಲ್ಲಿ ‘ಪ್ರೌಡ್ ಆಫ್ ಯು ಡ್ಯಾಡ್’ ಎಂದು ಬರೆದುಕೊಂಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು, ಹಗರಿಬೊಮ್ಮನಹಳ್ಳಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ವೇಳೆ ಶಾಸಕ ಭೀಮಾನಾಯ್ಕ ಕಾಂಗ್ರೆಸ್​ ಸದಸ್ಯರನ್ನು ಕಾರಲ್ಲಿ ಕೂರಿಸಿಕೊಂಡು ಪುರಸಭೆ ಆವರಣ ಪ್ರವೇಶ ಮಾಡಿದ್ದಾರೆ. ಶಾಸಕರ ನಡೆಯನ್ನು ಬಿಜೆಪಿ ಸದಸ್ಯರು ಪ್ರಶ್ನಿಸಿದ ಬಳಿಕ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭ ಭೀಮಾನಾಯ್ಕ ಸವಾಲು ಹಾಕಿದ್ದಾರೆ. ದರ್ಪ ತೋರಿಸಿರುವ ಶಾಸಕರ ಘನತೆ ಏನೆಂಬುದು ಗೊತ್ತಾಗಿದೆ ಎಂದು ಕಿಡಿಕಾರಿದ್ದಾರೆ.
ಸಾವಿನ ಮನೆಯಲ್ಲೂ ಬಿಜೆಪಿ-ಜೆಡಿಎಸ್​ ರಾಜಕೀಯ?

ಇನ್ನೇನು ನಿಶ್ಚಿತಾರ್ಥ ನಡೆಯಬೇಕು… ಅಷ್ಟರಲ್ಲಿ ಬಂದ ಜವರಾಯ ಅಕ್ಕ-ತಂಗಿಯ ಪ್ರಾಣ ಹೊತ್ತೊಯ್ದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − thirteen =
Remember me
