ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಹೊಸದಾಗಿ 9,523 ಕರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಒಟ್ಟು ಪ್ರಮಾಣ 7,10,309ಕ್ಕೆ ತಲುಪಿದೆ. ಅದಾಗ್ಯೂ ಭಾನುವಾರ ಸೋಂಕಿತರಿಗಿಂತ ಗುಣವಾದವರ ಸಂಖ್ಯೆಯೇ ಹೆಚ್ಚಿರುವುದು ಸ್ವಲ್ಪ ಸಮಾಧಾನದ ಸಂಗತಿ.
ಭಾನುವಾರ ಒಂದೇ ದಿನ ಆಸ್ಪತ್ರೆಯಿಂದ 10,107 ಮಂದಿ ಬಿಡುಗಡೆ ಆಗಿದ್ದು, ಈ ಮೂಲಕ ರಾಜ್ಯದಲ್ಲಿ ಕರೊನಾದಿಂದ ಗುಣವಾದವರ ಸಂಖ್ಯೆ 5,80,054ಕ್ಕೆ ತಲುಪಿದೆ. ಆದರೆ ರಾಜ್ಯದಲ್ಲಿ ಸದ್ಯ 1,20,270 ಸಕ್ರಿಯ ಪ್ರಕರಣಗಳಿದ್ದು, ಗಂಭೀರ ಪರಿಸ್ಥಿತಿಯಿಂದಾಗಿ 904 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೇಸರದ ಸಂಗತಿ ಎಂದರೆ ಭಾನುವಾರ ಒಂದೇ ದಿನ 75 ಮಂದಿ ಕರೊನಾಗೆ ಬಲಿಯಾಗಿದ್ದು, ಇದುವರೆಗೆ ಕರೊನಾದಿಂದ ಮೃತಪಟ್ಟವರ ಸಂಖ್ಯೆ 9,966ಕ್ಕೆ ತಲುಪಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − one =
Remember me
