ಬೆಂಗಳೂರು: ಕರೊನಾ ವೈರಸ್​ ಸೋಂಕು ಹರಡುವುದನ್ನು ತಪ್ಪಿಸಲು ರಾಜ್ಯವನ್ನು ಲಾಕ್​ಡೌನ್​ ಮಾಡಿರುವ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳಾದ ತರಕಾರಿ, ಮಾಂಸ, ಹಾಲು, ಹಣ್ಣು, ಕಾಳು, ಅಕ್ಕಿ, ರಾಗಿ ಹಾಗೂ ಜೋಳ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಸಿಎಂ ಯಡಿಯೂರಪ್ಪ ಅಭಯ ನೀಡಿದ್ದಾರೆ.
ಸರ್ಕಾರವೇ ರೈತರಿಂದ ನೇರವಾಗಿ ತರಕಾರಿ ಹಾಗೂ ಧಾನ್ಯ ಖರೀದಿಸಿ ಗೋದಾಮಿನಲ್ಲಿ ಸಂಗ್ರಹಿಸಿ ರಾಜ್ಯದಲ್ಲ ಎಲ್ಲ ಚಿಲ್ಲರೆ ಅಂಗಡಿಗಳಿಗೆ ಪೂರೈಸಲಿದೆ. ಅಂಗಡಿಗಳಿಂದ ನಾಗರಿಕರು ಖರೀದಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಸಚಿವ ಸಂಪುಟ ಸಭೆ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಷ್ಟ್ರದಲ್ಲಿ ಲಾಕ್​ಡೌನ್​ ಘೋಷಣೆ ಮಾಡಿದ್ದರೂ ರಾಜ್ಯದಲ್ಲಿ ಜನರು ರಸ್ತೆಯಲ್ಲಿ ಓಡಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಕರೆ ಮಾಡಿ ಬೇಸರ ವ್ಯಕ್ತಪಡಿಸಿದರು. ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸಿದರೆ ಕಠಿಣ ಕ್ರಮ ಜರುಗಿಸುವಂತೆ ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಅವರು ಮಾಹಿತಿ ನೀಡಿದರು.
ಬಡವರಿಗೆ ಇಂದಿರಾ ಕ್ಯಾಂಟೀನ್​ನಲ್ಲಿ ಉಚಿತವಾಗಿ ಆಹಾರದ ಪೊಟ್ಟಣಗಳನ್ನು ನಿಗದಿತ ಅವಧಿಯಲ್ಲಿ ವಿತರಿಸಲಾಗುವುದು. ಈ ವೇಳೆ ಸಾರ್ವಜನಿಕರು ಅಂತರ ಕಾಯ್ದುಕೊಳ್ಳಬೇಕು. ಲಾಕ್​ಡೌನ್​ ವೇಳೆ ಅಗತ್ಯ ವಸ್ತುಗಳನ್ನು ಅಧಿಕ ಬೆಲೆಗೆ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಅವರು ಎಚ್ಚರಿಕೆ ನೀಡಿದರು. (ದಿಗ್ವಿಜಯ ನ್ಯೂಸ್​)
ಭಾರತದಲ್ಲಿ 724 ಜನರಿಗೆ ಕರೊನಾ ಸೋಂಕು; ಸಾವಿನ ಸಂಖ್ಯೆ 17ಕ್ಕೆ ಏರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
