ಚಿಕ್ಕಬಳ್ಳಾಪುರ:ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಪ್ರತಿನಿಧಿಸುವ ಕ್ಷೇತ್ರದಲ್ಲೇ ಇಂದೆಂಥಾ ಅವ್ಯವಸ್ಥೆ?
ಆಂಬುಲೆನ್ಸ್‌ ವಾಹನವಿಲ್ಲದೆ ಕರೊನಾ ಸೋಂಕಿತನನ್ನು ದ್ವಿಚಕ್ರ ವಾಹನದಲ್ಲೇ ಆಸ್ಪತ್ರೆಗೆ ಸಿಬ್ಬಂದಿ ಕರೆತಂದಿದ್ದಾರೆ. ಸಮರ್ಪಕ ಪಿಪಿಇ ಕಿಟ್ ಇಲ್ಲದೆ, ಸುರಕ್ಷತೆಯೂ ಇಲ್ಲದೆ ಸಿಬ್ಬಂದಿಯು ಸೋಂಕಿತನನ್ನು ಜನರ ನಡುವೆ ಕರೆದೊಯ್ಯುವ ಆಘಾತಕಾರಿ ದೃಶ್ಯ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.
ಇದನ್ನೂ ಓದಿರಿಒಂದು ಸಾವಿರ ಕರೊನಾ ಸೋಂಕಿತರಿಗೆ ಆಯುರ್ವೇದ ಚಿಕಿತ್ಸೆ: ಡಾ.ಗಿರಿಧರ್ ಕಜೆ
ಶಿಡ್ಲಘಟ್ಟ ತಾಲೂಕಿನ ನಾಗಮಂಗಲ ಗ್ರಾಮದಲ್ಲಿ ಮಂಗಳವಾರ 35 ವರ್ಷದ ವ್ಯಕ್ತಿಗೆ ಕರೊನಾ ಸೋಂಕು ದೃಢಪಟ್ಟಿದೆ. ಸೋಂಕಿತ ವ್ಯಕ್ತಿಯನ್ನು ಕರೊನಾ ಕೇರ್ ಸೆಂಟರ್​ಗೆ ದ್ವಿಚಕ್ರವಾಹನದಲ್ಲೇ ಕರೆದೊಯ್ಯಲಾಗಿದೆ. ವೈದ್ಯಕೀಯ ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಇಂತಹ ಅವ್ಯವಸ್ಥೆಯಾದರೆ ಇನ್ನು ರಾಜ್ಯದ ಗತಿಯೇನು? ಎಂಬ ಆತಂಕ ಶುರುವಾಗಿದೆ.
https://www.facebook.com/VVani4U/videos/575452586452018/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 7 =
Remember me
