ಬೆಂಗಳೂರು:‘ವಿದ್ಯಾಗಮ’ದ ನಂತರವೇ ಅಮ್ಮನಿಗೆ ಈ ಸ್ಥಿತಿ ಬಂದಿದೆ. ಆಸ್ಪತ್ರೆಗೆ ದಾಖಲಾಗಿರುವ ಅಮ್ಮನನ್ನು ದಯವಿಟ್ಟು ಉಳಿಸಿಕೊಡಿ, ಚಿಕಿತ್ಸೆಗಾಗಿ ಆರ್ಥಿಕ ‌ನೆರವು ನೀಡಿ…’ ಎಂದು ಕೋರಿದ್ದ ಮೂಡಬಿದರೆಯ ಶಿಕ್ಷಕ ದಂಪತಿ ಮಗಳು ಐಶ್ವರ್ಯಾ ಜೈನ್​ರ ಮನವಿಗೆ ಸರ್ಕಾರ ಸ್ಪಂದಿಸಿದೆ.
ಮೂಡಬಿದರೆಯ ಮಕ್ಕಿ ಜವಹಾರ್ ನೆಹರೂ ಹೈಸ್ಕೂಲ್​ನ ಶಿಕ್ಷಕಿ ಪದ್ಮಾಕ್ಷಿ ಅವರಿಗೆ ಕರೊನಾ ಸೋಂಕು ತಗುಲಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿದ್ದಾರೆ. ಇವರ ಪತಿ, ಮೂಡಬಿದರೆಯ ಡಿ.ಜೆ. ಹೈಯರ್ ಪ್ರೈಮರಿ ‌ಶಾಲೆ ಮುಖ್ಯಶಿಕ್ಷಕ ಶಶಿಕಾಂತ್ ಅವರಿಗೂ ಕರೊನಾ ದೃಢಪಟ್ಟಿದೆ. ಇದರಿಂದ ಕಂಗಾಲಾದ ಇವರ ಪುತ್ರಿ ಐಶ್ವರ್ಯಾ, ಆರ್ಥಿಕ ನೆರವಿಗಾಗಿ ಫೇಸ್​ಬುಕ್​ನಲ್ಲಿ ಕೋರಿದ್ದರು.
ಈ ಕುರಿತು ಮಾಧ್ಯಮಗಳಲ್ಲಿ ವರದಿ ಬರುತ್ತಿದ್ದಂತೆ ಎಚ್ಚೆತ್ತ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಕೂಡಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರೊಂದಿಗೆ ದೂರವಾಣಿಯಲ್ಲಿ ಚರ್ಚಿಸಿ ಶಿಕ್ಷಕಿಗೆ ಉತ್ತಮ ಚಿಕಿತ್ಸೆ ನೀಡಲು ಅಗತ್ಯ ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ. ಗುಣಮಟ್ಟದ ಚಿಕಿತ್ಸೆಗೆ ವ್ಯವಸ್ಥೆ ಮತ್ತು ಆ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದಾರೆ. ಸರ್ಕಾರದ ಸೂಚನೆ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಅವರು ಐಶ್ವರ್ಯಾಳನ್ನು ಸಂಪರ್ಕಿಸಿ, ತಾಯಿಯ ಚಿಕಿತ್ಸೆ ಕುರಿತು ಸರ್ಕಾರ ಪೂರ್ಣ ಕಾಳಜಿ ವಹಿಸಿದೆ. ಯಾವುದೇ ಆತಂಕ ಬೇಡ ಎಂದು ಸಾಂತ್ವಾನ ಹೇಳಿದ್ದಾರೆ.
ಈ ಕುರಿತು ಸಿಎಂ ಬಿ.ಎಸ್. ಯಡಿಯೂರಪ್ಪ ಕೂಡ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿ ಸದರಿ ಶಿಕ್ಷಕಿಯ ಚಿಕಿತ್ಸೆಗೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಪ್ಲೀಸ್​… ನನ್ನ ಅಮ್ಮನನ್ನು ಉಳಿಸಿಕೊಡಿ: ಮನಕಲಕುತ್ತೆ ಶಿಕ್ಷಕ ದಂಪತಿ ಮಗಳ ರೋದನ

12 ಕೋಟಿ ಸಂಪತ್ತಿನ ಒಡತಿ ಕುಸುಮಾ, ಅಫಿಡವಿಟ್​ನಲ್ಲಿ ಪತಿಯ ಹೆಸರನ್ನು ಪ್ರಸ್ತಾಪಿಸಿಯೇ ಇಲ್ಲ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 9 =
Remember me
